Homeಸಿನಿಮಾಕ್ರೀಡೆಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

- Advertisement -
- Advertisement -

| ಮಲ್ಲಿ |

ಸದ್ಯ ಸುದ್ದಿಯಲ್ಲಿರುವ ವಿಶ್ವಕಪ್ ಕ್ರಿಕೆಟ್‍ನಲ್ಲಿ ‘ಝಿಂಗ್’ ಬೇಲ್ಸ್‍ಗಳು ಅಲ್ಲಾಡುತ್ತಲೇ ಇಲ್ಲ! ಒಮ್ಮೆ ನಮ್ಮ ಬೂಮ್ರಾ ಬಿರುಸಾಗಿ ಎಸೆದಾಗ ಚೆಂಡು ಸ್ಟಂಪ್‍ಗೆ ತಾಗಿತು, ಆದರೆ ‘ಝಿಂಗ್’ ಬೇಲ್ಸ್ ಮಿಸುಕಲೇ ಇಲ್ಲ, ಬೇಲ್ಸ್‍ನಲ್ಲಿರುವ ದೀಪಗಳು ಮಿನುಗಲೂ ಇಲ!. ಹೀಗಾಗಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಓಟಾಗಿಯೂ ಓಟಾಗಲಿಲ್ಲ! ಈ ಬೇಲ್ಸ್‍ಗಳನ್ನು ಕುಟ್ಟಿ ಪುಡಿ ಪುಡಿ ಮಾಡಬೇಕು ಎನಿಸಿರಬೇಕು ಜಸ್ಪ್ರಿತ್ ಬೂಮ್ರಾಗೆ!

ಆದರೆ ಕುಟ್ಟೊಂಗಿಲ್ಲ, ತಟ್ಟಂಗಿಲ್ಲ… ಟೂರ್ನಿ ಆರಂಭವಾದ ಮೇಲೆ ಕನಿಷ್ಠ ಐದು ಸಲವಾದರೂ ‘ಅಳ್ಳಾಡದ’ ಬೇಲ್ಸ್‍ಗಳ ಕಾರಣದಿಂದ ಬೌಲರ್‍ಗಳು ನಿರಾಶರಾಗಿದ್ದಾರೆ. ಒಂಥರಾ ನಮ್ಮ ಇವಿಯಂಗಳಂತೆ ವಿಚಿತ್ರ ವರ್ತನೆ ತೋರುತ್ತಿವೆಯೇ ಈ ‘ಝಿಂಗ್’ ಬೇಲ್ಸ್? ವಿಶ್ವಕಪ್ ಮುಗಿಯುವವರೆಗೂ ಈ ಬೇಲ್ಸ್ ಬದಲಿಸುವುದಿಲ್ಲ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೇಳಿದೆ.. ಥೇಟು ನಮ್ಮ ಚುನಾವಣಾ ಆಯೋಗದ ಹಾಗೆಯೇ!

ಇವಿಎಂಗಳನ್ನು ತಿರುಚುವುದು ಸಾಧ್ಯ ಎಂಬುದನ್ನು ಹಲವಾರು ತಜ್ಞರು ದೃಢಪಡಿಸಿದ್ದಾರೆ. ಆದರೆ, ನಮ್ಮ ಚುನಾವಣಾ ಆಯೋಗವು ಜನರಲ್ಲಿನ ಸಂಶಯವನ್ನು ನಿವಾರಿಸುವ ಕೆಲಸವನ್ನು ಮಾಡಲೇ ಇಲ್ಲ. ಚುನಾವಣೆಯ ಮೊದಲ 4 ಹಂತಗಳಲ್ಲಿ 373 ಕ್ಷೇತ್ರಗಳಲ್ಲಿ ವೋಟ್ ಮಾಡಿದ ಮತ್ತು ಕೌಂಟ್ ಆದ ಮತಗಳ ನಡುವೆ 20-30 ಸಾವಿರ ವ್ಯತ್ಯಾಸವಿದ್ದರೂ ನಮ್ಮ ಆಯೋಗ ಅದಕ್ಕೆ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ!

ಬ್ಯಾಟ್ಸಮನ್ ಒಬ್ಬನನ್ನು ನೇರ ಔಟ್ ಮಾಡಲು ಸ್ಟಂಪ್ ಮೇಲಿರುವ ಬೇಲ್ಸ್ ಹಾರುವಂತೆ ಅಥವಾ ಸ್ಟಂಪೇ ನೆಲಕ್ಕೆ ಬೀಳಬೇಕು ಎಂಬುದು ಪರಂಪರಾಗತ ನಿಯಮ. ಆದರೆ ಇಲ್ಲಿ ‘ಝಿಂಗ್’ ಮಾತ್ರ ಸ್ಥಾವರದಂತೆ ಅಂಟಿಕೊಂಡು ಬಿಟ್ಟಿದೆ. ಗಂಟೆಗೆ 110 ಮೈಲು ವೇಗದಲ್ಲಿ ಬಂದ ಬಾಲ್ ಸ್ಟಂಪ್‍ಗೆ ಅಪ್ಪಳಿಸಿದರೂ ‘ಝಿಂಗ್’ ಝುಮ್ಮ ಅಂತಾನೇ ಇಲ್ಲ. ಟೂರ್ನಿಯ ಮೊದಲ ಹತ್ತು ದಿನಗಳಲ್ಲೇ ಇಂತಹ 5 ನಿದರ್ಶನ ನಡೆದರೂ, ಐಸಿಸಿ ಮಾತ್ರ ಇಡೀ ಟೂರ್ನಿಮೆಂಟ್‍ವರೆಗೆ ಇದೇ ‘ಝಿಂಗ್-ಡಾಂಗ್’ ಮುಂದುವರೆಸುವುದಾಗಿ ಹೇಳಿದೆ.

‘ಮಿಸುಕದ ಝಿಂಗ್ ಕಾರಣದಿಂದ ಲೈಫ್ ಪಡೆದ ಆಟಗಾರನೇ ಪಂದ್ಯ ಗೆಲ್ಲಿಸಿದರೆ? ಆಗ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಟೂರ್ನಿಯ ಮೊದಲ ಹತ್ತು ದಿನಗಳಲ್ಲಿ ಇಂತಹ ನಿದರ್ಶನಗಳನ್ನು ನೋಡಿದ ಪಾಕಿಸ್ತಾನದ ನಿವೃತ್ತ ವೇಗಿ ಶೋಯಬ್ ಅಖ್ತರ್ ಟ್ವೀಟ್ ಮಾಡಿ.’ ಅಯ್ಯೋ ಅಲ್ಲಾ, ನನ್ನ ಕ್ರಿಕೆಟ್ ಜೀವನದಲ್ಲೇ ಇಂತಹ ಬೇಲ್ಸ್ ನೋಡಿರಲಿಲ್ಲ. ಅದೂ ಪ್ರತಿಷ್ಟಿತ ವಿಶ್ವಕಪ್‍ನಲ್ಲೇ ಹೀಗಾಗುತ್ತಿದೆಯಲ್ಲ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ…

ಈ ಬೇಲ್ಸ್’ಗಳೂ ಪಕ್ಷಪಾತ ಮಾಡ್ತಿವೆಯಾ? ಬೇಕಾದಾಗ ಉರುಳೋದು ಬೇಡವಾದಾಗ ಸ್ಟಂಪ್ಸ್ ತಬ್ಬಿ ಕೂಡೋದು! ಇದನ್ನು ‘ಬೇಲ್ ಫಿಕ್ಸಿಂಗ್’ ಅಂತಾ ಕರೆಯಬಹುದೇ? ಕೆಲವು ಅನುಭವಿಗಳ ಪ್ರಕಾರ, ಈ ಬೇಲ್ಸ್‍ನಲ್ಲಿರುವ ಬ್ಯಾಟರಿಯ ತೂಕದ ಕಾರಣಕ್ಕೆ ಬೇಲ್ಸ್ ಧಡೂತಿಯಾಗಿ ಮಿಸುಗಾಡಲು ಆಗುತ್ತಿಲ್ಲವಂತೆ! ಚುನಾವಣಾ ಆಯೋಗವೇ ಐಸಿಸಿಗೆ ಮಾದರಿಯಾಗಿದೆಯಾ? ಇನ್ನು ಮುಂದೆ ಈ ಝಿಂಗ್ ಬೇಲ್ಸ್ ಮೇಲೆಯೇ ಬೆಟ್ಟಿಂಗ್ ನಡೆಯಲೂ ಬಹುದು!

ಕ್ಲೌಡ್ ಆ್ಯಂಡ್ ರಾಡಾರ್ ತಜ್ಞರನ್ನು ಈ ಬಗ್ಗೆ ನಮ್ಮ ಅಕ್ಷಯಕುಮಾರ್ ಪ್ರಶ್ನಿಸಿದರೆ ಚೆಂದ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...