Homeಸಿನಿಮಾಕ್ರೀಡೆಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

- Advertisement -
- Advertisement -

| ಮಲ್ಲಿ |

ಸದ್ಯ ಸುದ್ದಿಯಲ್ಲಿರುವ ವಿಶ್ವಕಪ್ ಕ್ರಿಕೆಟ್‍ನಲ್ಲಿ ‘ಝಿಂಗ್’ ಬೇಲ್ಸ್‍ಗಳು ಅಲ್ಲಾಡುತ್ತಲೇ ಇಲ್ಲ! ಒಮ್ಮೆ ನಮ್ಮ ಬೂಮ್ರಾ ಬಿರುಸಾಗಿ ಎಸೆದಾಗ ಚೆಂಡು ಸ್ಟಂಪ್‍ಗೆ ತಾಗಿತು, ಆದರೆ ‘ಝಿಂಗ್’ ಬೇಲ್ಸ್ ಮಿಸುಕಲೇ ಇಲ್ಲ, ಬೇಲ್ಸ್‍ನಲ್ಲಿರುವ ದೀಪಗಳು ಮಿನುಗಲೂ ಇಲ!. ಹೀಗಾಗಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಓಟಾಗಿಯೂ ಓಟಾಗಲಿಲ್ಲ! ಈ ಬೇಲ್ಸ್‍ಗಳನ್ನು ಕುಟ್ಟಿ ಪುಡಿ ಪುಡಿ ಮಾಡಬೇಕು ಎನಿಸಿರಬೇಕು ಜಸ್ಪ್ರಿತ್ ಬೂಮ್ರಾಗೆ!

ಆದರೆ ಕುಟ್ಟೊಂಗಿಲ್ಲ, ತಟ್ಟಂಗಿಲ್ಲ… ಟೂರ್ನಿ ಆರಂಭವಾದ ಮೇಲೆ ಕನಿಷ್ಠ ಐದು ಸಲವಾದರೂ ‘ಅಳ್ಳಾಡದ’ ಬೇಲ್ಸ್‍ಗಳ ಕಾರಣದಿಂದ ಬೌಲರ್‍ಗಳು ನಿರಾಶರಾಗಿದ್ದಾರೆ. ಒಂಥರಾ ನಮ್ಮ ಇವಿಯಂಗಳಂತೆ ವಿಚಿತ್ರ ವರ್ತನೆ ತೋರುತ್ತಿವೆಯೇ ಈ ‘ಝಿಂಗ್’ ಬೇಲ್ಸ್? ವಿಶ್ವಕಪ್ ಮುಗಿಯುವವರೆಗೂ ಈ ಬೇಲ್ಸ್ ಬದಲಿಸುವುದಿಲ್ಲ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೇಳಿದೆ.. ಥೇಟು ನಮ್ಮ ಚುನಾವಣಾ ಆಯೋಗದ ಹಾಗೆಯೇ!

ಇವಿಎಂಗಳನ್ನು ತಿರುಚುವುದು ಸಾಧ್ಯ ಎಂಬುದನ್ನು ಹಲವಾರು ತಜ್ಞರು ದೃಢಪಡಿಸಿದ್ದಾರೆ. ಆದರೆ, ನಮ್ಮ ಚುನಾವಣಾ ಆಯೋಗವು ಜನರಲ್ಲಿನ ಸಂಶಯವನ್ನು ನಿವಾರಿಸುವ ಕೆಲಸವನ್ನು ಮಾಡಲೇ ಇಲ್ಲ. ಚುನಾವಣೆಯ ಮೊದಲ 4 ಹಂತಗಳಲ್ಲಿ 373 ಕ್ಷೇತ್ರಗಳಲ್ಲಿ ವೋಟ್ ಮಾಡಿದ ಮತ್ತು ಕೌಂಟ್ ಆದ ಮತಗಳ ನಡುವೆ 20-30 ಸಾವಿರ ವ್ಯತ್ಯಾಸವಿದ್ದರೂ ನಮ್ಮ ಆಯೋಗ ಅದಕ್ಕೆ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ!

ಬ್ಯಾಟ್ಸಮನ್ ಒಬ್ಬನನ್ನು ನೇರ ಔಟ್ ಮಾಡಲು ಸ್ಟಂಪ್ ಮೇಲಿರುವ ಬೇಲ್ಸ್ ಹಾರುವಂತೆ ಅಥವಾ ಸ್ಟಂಪೇ ನೆಲಕ್ಕೆ ಬೀಳಬೇಕು ಎಂಬುದು ಪರಂಪರಾಗತ ನಿಯಮ. ಆದರೆ ಇಲ್ಲಿ ‘ಝಿಂಗ್’ ಮಾತ್ರ ಸ್ಥಾವರದಂತೆ ಅಂಟಿಕೊಂಡು ಬಿಟ್ಟಿದೆ. ಗಂಟೆಗೆ 110 ಮೈಲು ವೇಗದಲ್ಲಿ ಬಂದ ಬಾಲ್ ಸ್ಟಂಪ್‍ಗೆ ಅಪ್ಪಳಿಸಿದರೂ ‘ಝಿಂಗ್’ ಝುಮ್ಮ ಅಂತಾನೇ ಇಲ್ಲ. ಟೂರ್ನಿಯ ಮೊದಲ ಹತ್ತು ದಿನಗಳಲ್ಲೇ ಇಂತಹ 5 ನಿದರ್ಶನ ನಡೆದರೂ, ಐಸಿಸಿ ಮಾತ್ರ ಇಡೀ ಟೂರ್ನಿಮೆಂಟ್‍ವರೆಗೆ ಇದೇ ‘ಝಿಂಗ್-ಡಾಂಗ್’ ಮುಂದುವರೆಸುವುದಾಗಿ ಹೇಳಿದೆ.

‘ಮಿಸುಕದ ಝಿಂಗ್ ಕಾರಣದಿಂದ ಲೈಫ್ ಪಡೆದ ಆಟಗಾರನೇ ಪಂದ್ಯ ಗೆಲ್ಲಿಸಿದರೆ? ಆಗ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಟೂರ್ನಿಯ ಮೊದಲ ಹತ್ತು ದಿನಗಳಲ್ಲಿ ಇಂತಹ ನಿದರ್ಶನಗಳನ್ನು ನೋಡಿದ ಪಾಕಿಸ್ತಾನದ ನಿವೃತ್ತ ವೇಗಿ ಶೋಯಬ್ ಅಖ್ತರ್ ಟ್ವೀಟ್ ಮಾಡಿ.’ ಅಯ್ಯೋ ಅಲ್ಲಾ, ನನ್ನ ಕ್ರಿಕೆಟ್ ಜೀವನದಲ್ಲೇ ಇಂತಹ ಬೇಲ್ಸ್ ನೋಡಿರಲಿಲ್ಲ. ಅದೂ ಪ್ರತಿಷ್ಟಿತ ವಿಶ್ವಕಪ್‍ನಲ್ಲೇ ಹೀಗಾಗುತ್ತಿದೆಯಲ್ಲ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ…

ಈ ಬೇಲ್ಸ್’ಗಳೂ ಪಕ್ಷಪಾತ ಮಾಡ್ತಿವೆಯಾ? ಬೇಕಾದಾಗ ಉರುಳೋದು ಬೇಡವಾದಾಗ ಸ್ಟಂಪ್ಸ್ ತಬ್ಬಿ ಕೂಡೋದು! ಇದನ್ನು ‘ಬೇಲ್ ಫಿಕ್ಸಿಂಗ್’ ಅಂತಾ ಕರೆಯಬಹುದೇ? ಕೆಲವು ಅನುಭವಿಗಳ ಪ್ರಕಾರ, ಈ ಬೇಲ್ಸ್‍ನಲ್ಲಿರುವ ಬ್ಯಾಟರಿಯ ತೂಕದ ಕಾರಣಕ್ಕೆ ಬೇಲ್ಸ್ ಧಡೂತಿಯಾಗಿ ಮಿಸುಗಾಡಲು ಆಗುತ್ತಿಲ್ಲವಂತೆ! ಚುನಾವಣಾ ಆಯೋಗವೇ ಐಸಿಸಿಗೆ ಮಾದರಿಯಾಗಿದೆಯಾ? ಇನ್ನು ಮುಂದೆ ಈ ಝಿಂಗ್ ಬೇಲ್ಸ್ ಮೇಲೆಯೇ ಬೆಟ್ಟಿಂಗ್ ನಡೆಯಲೂ ಬಹುದು!

ಕ್ಲೌಡ್ ಆ್ಯಂಡ್ ರಾಡಾರ್ ತಜ್ಞರನ್ನು ಈ ಬಗ್ಗೆ ನಮ್ಮ ಅಕ್ಷಯಕುಮಾರ್ ಪ್ರಶ್ನಿಸಿದರೆ ಚೆಂದ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...