Homeಸಿನಿಮಾಕ್ರೀಡೆಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

- Advertisement -
- Advertisement -

| ಮಲ್ಲಿ |

ಸದ್ಯ ಸುದ್ದಿಯಲ್ಲಿರುವ ವಿಶ್ವಕಪ್ ಕ್ರಿಕೆಟ್‍ನಲ್ಲಿ ‘ಝಿಂಗ್’ ಬೇಲ್ಸ್‍ಗಳು ಅಲ್ಲಾಡುತ್ತಲೇ ಇಲ್ಲ! ಒಮ್ಮೆ ನಮ್ಮ ಬೂಮ್ರಾ ಬಿರುಸಾಗಿ ಎಸೆದಾಗ ಚೆಂಡು ಸ್ಟಂಪ್‍ಗೆ ತಾಗಿತು, ಆದರೆ ‘ಝಿಂಗ್’ ಬೇಲ್ಸ್ ಮಿಸುಕಲೇ ಇಲ್ಲ, ಬೇಲ್ಸ್‍ನಲ್ಲಿರುವ ದೀಪಗಳು ಮಿನುಗಲೂ ಇಲ!. ಹೀಗಾಗಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಓಟಾಗಿಯೂ ಓಟಾಗಲಿಲ್ಲ! ಈ ಬೇಲ್ಸ್‍ಗಳನ್ನು ಕುಟ್ಟಿ ಪುಡಿ ಪುಡಿ ಮಾಡಬೇಕು ಎನಿಸಿರಬೇಕು ಜಸ್ಪ್ರಿತ್ ಬೂಮ್ರಾಗೆ!

ಆದರೆ ಕುಟ್ಟೊಂಗಿಲ್ಲ, ತಟ್ಟಂಗಿಲ್ಲ… ಟೂರ್ನಿ ಆರಂಭವಾದ ಮೇಲೆ ಕನಿಷ್ಠ ಐದು ಸಲವಾದರೂ ‘ಅಳ್ಳಾಡದ’ ಬೇಲ್ಸ್‍ಗಳ ಕಾರಣದಿಂದ ಬೌಲರ್‍ಗಳು ನಿರಾಶರಾಗಿದ್ದಾರೆ. ಒಂಥರಾ ನಮ್ಮ ಇವಿಯಂಗಳಂತೆ ವಿಚಿತ್ರ ವರ್ತನೆ ತೋರುತ್ತಿವೆಯೇ ಈ ‘ಝಿಂಗ್’ ಬೇಲ್ಸ್? ವಿಶ್ವಕಪ್ ಮುಗಿಯುವವರೆಗೂ ಈ ಬೇಲ್ಸ್ ಬದಲಿಸುವುದಿಲ್ಲ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೇಳಿದೆ.. ಥೇಟು ನಮ್ಮ ಚುನಾವಣಾ ಆಯೋಗದ ಹಾಗೆಯೇ!

ಇವಿಎಂಗಳನ್ನು ತಿರುಚುವುದು ಸಾಧ್ಯ ಎಂಬುದನ್ನು ಹಲವಾರು ತಜ್ಞರು ದೃಢಪಡಿಸಿದ್ದಾರೆ. ಆದರೆ, ನಮ್ಮ ಚುನಾವಣಾ ಆಯೋಗವು ಜನರಲ್ಲಿನ ಸಂಶಯವನ್ನು ನಿವಾರಿಸುವ ಕೆಲಸವನ್ನು ಮಾಡಲೇ ಇಲ್ಲ. ಚುನಾವಣೆಯ ಮೊದಲ 4 ಹಂತಗಳಲ್ಲಿ 373 ಕ್ಷೇತ್ರಗಳಲ್ಲಿ ವೋಟ್ ಮಾಡಿದ ಮತ್ತು ಕೌಂಟ್ ಆದ ಮತಗಳ ನಡುವೆ 20-30 ಸಾವಿರ ವ್ಯತ್ಯಾಸವಿದ್ದರೂ ನಮ್ಮ ಆಯೋಗ ಅದಕ್ಕೆ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ!

ಬ್ಯಾಟ್ಸಮನ್ ಒಬ್ಬನನ್ನು ನೇರ ಔಟ್ ಮಾಡಲು ಸ್ಟಂಪ್ ಮೇಲಿರುವ ಬೇಲ್ಸ್ ಹಾರುವಂತೆ ಅಥವಾ ಸ್ಟಂಪೇ ನೆಲಕ್ಕೆ ಬೀಳಬೇಕು ಎಂಬುದು ಪರಂಪರಾಗತ ನಿಯಮ. ಆದರೆ ಇಲ್ಲಿ ‘ಝಿಂಗ್’ ಮಾತ್ರ ಸ್ಥಾವರದಂತೆ ಅಂಟಿಕೊಂಡು ಬಿಟ್ಟಿದೆ. ಗಂಟೆಗೆ 110 ಮೈಲು ವೇಗದಲ್ಲಿ ಬಂದ ಬಾಲ್ ಸ್ಟಂಪ್‍ಗೆ ಅಪ್ಪಳಿಸಿದರೂ ‘ಝಿಂಗ್’ ಝುಮ್ಮ ಅಂತಾನೇ ಇಲ್ಲ. ಟೂರ್ನಿಯ ಮೊದಲ ಹತ್ತು ದಿನಗಳಲ್ಲೇ ಇಂತಹ 5 ನಿದರ್ಶನ ನಡೆದರೂ, ಐಸಿಸಿ ಮಾತ್ರ ಇಡೀ ಟೂರ್ನಿಮೆಂಟ್‍ವರೆಗೆ ಇದೇ ‘ಝಿಂಗ್-ಡಾಂಗ್’ ಮುಂದುವರೆಸುವುದಾಗಿ ಹೇಳಿದೆ.

‘ಮಿಸುಕದ ಝಿಂಗ್ ಕಾರಣದಿಂದ ಲೈಫ್ ಪಡೆದ ಆಟಗಾರನೇ ಪಂದ್ಯ ಗೆಲ್ಲಿಸಿದರೆ? ಆಗ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಟೂರ್ನಿಯ ಮೊದಲ ಹತ್ತು ದಿನಗಳಲ್ಲಿ ಇಂತಹ ನಿದರ್ಶನಗಳನ್ನು ನೋಡಿದ ಪಾಕಿಸ್ತಾನದ ನಿವೃತ್ತ ವೇಗಿ ಶೋಯಬ್ ಅಖ್ತರ್ ಟ್ವೀಟ್ ಮಾಡಿ.’ ಅಯ್ಯೋ ಅಲ್ಲಾ, ನನ್ನ ಕ್ರಿಕೆಟ್ ಜೀವನದಲ್ಲೇ ಇಂತಹ ಬೇಲ್ಸ್ ನೋಡಿರಲಿಲ್ಲ. ಅದೂ ಪ್ರತಿಷ್ಟಿತ ವಿಶ್ವಕಪ್‍ನಲ್ಲೇ ಹೀಗಾಗುತ್ತಿದೆಯಲ್ಲ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ…

ಈ ಬೇಲ್ಸ್’ಗಳೂ ಪಕ್ಷಪಾತ ಮಾಡ್ತಿವೆಯಾ? ಬೇಕಾದಾಗ ಉರುಳೋದು ಬೇಡವಾದಾಗ ಸ್ಟಂಪ್ಸ್ ತಬ್ಬಿ ಕೂಡೋದು! ಇದನ್ನು ‘ಬೇಲ್ ಫಿಕ್ಸಿಂಗ್’ ಅಂತಾ ಕರೆಯಬಹುದೇ? ಕೆಲವು ಅನುಭವಿಗಳ ಪ್ರಕಾರ, ಈ ಬೇಲ್ಸ್‍ನಲ್ಲಿರುವ ಬ್ಯಾಟರಿಯ ತೂಕದ ಕಾರಣಕ್ಕೆ ಬೇಲ್ಸ್ ಧಡೂತಿಯಾಗಿ ಮಿಸುಗಾಡಲು ಆಗುತ್ತಿಲ್ಲವಂತೆ! ಚುನಾವಣಾ ಆಯೋಗವೇ ಐಸಿಸಿಗೆ ಮಾದರಿಯಾಗಿದೆಯಾ? ಇನ್ನು ಮುಂದೆ ಈ ಝಿಂಗ್ ಬೇಲ್ಸ್ ಮೇಲೆಯೇ ಬೆಟ್ಟಿಂಗ್ ನಡೆಯಲೂ ಬಹುದು!

ಕ್ಲೌಡ್ ಆ್ಯಂಡ್ ರಾಡಾರ್ ತಜ್ಞರನ್ನು ಈ ಬಗ್ಗೆ ನಮ್ಮ ಅಕ್ಷಯಕುಮಾರ್ ಪ್ರಶ್ನಿಸಿದರೆ ಚೆಂದ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...