Homeಸಿನಿಮಾಕ್ರೀಡೆಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

- Advertisement -
- Advertisement -

| ಮಲ್ಲಿ |

ಸದ್ಯ ಸುದ್ದಿಯಲ್ಲಿರುವ ವಿಶ್ವಕಪ್ ಕ್ರಿಕೆಟ್‍ನಲ್ಲಿ ‘ಝಿಂಗ್’ ಬೇಲ್ಸ್‍ಗಳು ಅಲ್ಲಾಡುತ್ತಲೇ ಇಲ್ಲ! ಒಮ್ಮೆ ನಮ್ಮ ಬೂಮ್ರಾ ಬಿರುಸಾಗಿ ಎಸೆದಾಗ ಚೆಂಡು ಸ್ಟಂಪ್‍ಗೆ ತಾಗಿತು, ಆದರೆ ‘ಝಿಂಗ್’ ಬೇಲ್ಸ್ ಮಿಸುಕಲೇ ಇಲ್ಲ, ಬೇಲ್ಸ್‍ನಲ್ಲಿರುವ ದೀಪಗಳು ಮಿನುಗಲೂ ಇಲ!. ಹೀಗಾಗಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಓಟಾಗಿಯೂ ಓಟಾಗಲಿಲ್ಲ! ಈ ಬೇಲ್ಸ್‍ಗಳನ್ನು ಕುಟ್ಟಿ ಪುಡಿ ಪುಡಿ ಮಾಡಬೇಕು ಎನಿಸಿರಬೇಕು ಜಸ್ಪ್ರಿತ್ ಬೂಮ್ರಾಗೆ!

ಆದರೆ ಕುಟ್ಟೊಂಗಿಲ್ಲ, ತಟ್ಟಂಗಿಲ್ಲ… ಟೂರ್ನಿ ಆರಂಭವಾದ ಮೇಲೆ ಕನಿಷ್ಠ ಐದು ಸಲವಾದರೂ ‘ಅಳ್ಳಾಡದ’ ಬೇಲ್ಸ್‍ಗಳ ಕಾರಣದಿಂದ ಬೌಲರ್‍ಗಳು ನಿರಾಶರಾಗಿದ್ದಾರೆ. ಒಂಥರಾ ನಮ್ಮ ಇವಿಯಂಗಳಂತೆ ವಿಚಿತ್ರ ವರ್ತನೆ ತೋರುತ್ತಿವೆಯೇ ಈ ‘ಝಿಂಗ್’ ಬೇಲ್ಸ್? ವಿಶ್ವಕಪ್ ಮುಗಿಯುವವರೆಗೂ ಈ ಬೇಲ್ಸ್ ಬದಲಿಸುವುದಿಲ್ಲ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೇಳಿದೆ.. ಥೇಟು ನಮ್ಮ ಚುನಾವಣಾ ಆಯೋಗದ ಹಾಗೆಯೇ!

ಇವಿಎಂಗಳನ್ನು ತಿರುಚುವುದು ಸಾಧ್ಯ ಎಂಬುದನ್ನು ಹಲವಾರು ತಜ್ಞರು ದೃಢಪಡಿಸಿದ್ದಾರೆ. ಆದರೆ, ನಮ್ಮ ಚುನಾವಣಾ ಆಯೋಗವು ಜನರಲ್ಲಿನ ಸಂಶಯವನ್ನು ನಿವಾರಿಸುವ ಕೆಲಸವನ್ನು ಮಾಡಲೇ ಇಲ್ಲ. ಚುನಾವಣೆಯ ಮೊದಲ 4 ಹಂತಗಳಲ್ಲಿ 373 ಕ್ಷೇತ್ರಗಳಲ್ಲಿ ವೋಟ್ ಮಾಡಿದ ಮತ್ತು ಕೌಂಟ್ ಆದ ಮತಗಳ ನಡುವೆ 20-30 ಸಾವಿರ ವ್ಯತ್ಯಾಸವಿದ್ದರೂ ನಮ್ಮ ಆಯೋಗ ಅದಕ್ಕೆ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ!

ಬ್ಯಾಟ್ಸಮನ್ ಒಬ್ಬನನ್ನು ನೇರ ಔಟ್ ಮಾಡಲು ಸ್ಟಂಪ್ ಮೇಲಿರುವ ಬೇಲ್ಸ್ ಹಾರುವಂತೆ ಅಥವಾ ಸ್ಟಂಪೇ ನೆಲಕ್ಕೆ ಬೀಳಬೇಕು ಎಂಬುದು ಪರಂಪರಾಗತ ನಿಯಮ. ಆದರೆ ಇಲ್ಲಿ ‘ಝಿಂಗ್’ ಮಾತ್ರ ಸ್ಥಾವರದಂತೆ ಅಂಟಿಕೊಂಡು ಬಿಟ್ಟಿದೆ. ಗಂಟೆಗೆ 110 ಮೈಲು ವೇಗದಲ್ಲಿ ಬಂದ ಬಾಲ್ ಸ್ಟಂಪ್‍ಗೆ ಅಪ್ಪಳಿಸಿದರೂ ‘ಝಿಂಗ್’ ಝುಮ್ಮ ಅಂತಾನೇ ಇಲ್ಲ. ಟೂರ್ನಿಯ ಮೊದಲ ಹತ್ತು ದಿನಗಳಲ್ಲೇ ಇಂತಹ 5 ನಿದರ್ಶನ ನಡೆದರೂ, ಐಸಿಸಿ ಮಾತ್ರ ಇಡೀ ಟೂರ್ನಿಮೆಂಟ್‍ವರೆಗೆ ಇದೇ ‘ಝಿಂಗ್-ಡಾಂಗ್’ ಮುಂದುವರೆಸುವುದಾಗಿ ಹೇಳಿದೆ.

‘ಮಿಸುಕದ ಝಿಂಗ್ ಕಾರಣದಿಂದ ಲೈಫ್ ಪಡೆದ ಆಟಗಾರನೇ ಪಂದ್ಯ ಗೆಲ್ಲಿಸಿದರೆ? ಆಗ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಟೂರ್ನಿಯ ಮೊದಲ ಹತ್ತು ದಿನಗಳಲ್ಲಿ ಇಂತಹ ನಿದರ್ಶನಗಳನ್ನು ನೋಡಿದ ಪಾಕಿಸ್ತಾನದ ನಿವೃತ್ತ ವೇಗಿ ಶೋಯಬ್ ಅಖ್ತರ್ ಟ್ವೀಟ್ ಮಾಡಿ.’ ಅಯ್ಯೋ ಅಲ್ಲಾ, ನನ್ನ ಕ್ರಿಕೆಟ್ ಜೀವನದಲ್ಲೇ ಇಂತಹ ಬೇಲ್ಸ್ ನೋಡಿರಲಿಲ್ಲ. ಅದೂ ಪ್ರತಿಷ್ಟಿತ ವಿಶ್ವಕಪ್‍ನಲ್ಲೇ ಹೀಗಾಗುತ್ತಿದೆಯಲ್ಲ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ…

ಈ ಬೇಲ್ಸ್’ಗಳೂ ಪಕ್ಷಪಾತ ಮಾಡ್ತಿವೆಯಾ? ಬೇಕಾದಾಗ ಉರುಳೋದು ಬೇಡವಾದಾಗ ಸ್ಟಂಪ್ಸ್ ತಬ್ಬಿ ಕೂಡೋದು! ಇದನ್ನು ‘ಬೇಲ್ ಫಿಕ್ಸಿಂಗ್’ ಅಂತಾ ಕರೆಯಬಹುದೇ? ಕೆಲವು ಅನುಭವಿಗಳ ಪ್ರಕಾರ, ಈ ಬೇಲ್ಸ್‍ನಲ್ಲಿರುವ ಬ್ಯಾಟರಿಯ ತೂಕದ ಕಾರಣಕ್ಕೆ ಬೇಲ್ಸ್ ಧಡೂತಿಯಾಗಿ ಮಿಸುಗಾಡಲು ಆಗುತ್ತಿಲ್ಲವಂತೆ! ಚುನಾವಣಾ ಆಯೋಗವೇ ಐಸಿಸಿಗೆ ಮಾದರಿಯಾಗಿದೆಯಾ? ಇನ್ನು ಮುಂದೆ ಈ ಝಿಂಗ್ ಬೇಲ್ಸ್ ಮೇಲೆಯೇ ಬೆಟ್ಟಿಂಗ್ ನಡೆಯಲೂ ಬಹುದು!

ಕ್ಲೌಡ್ ಆ್ಯಂಡ್ ರಾಡಾರ್ ತಜ್ಞರನ್ನು ಈ ಬಗ್ಗೆ ನಮ್ಮ ಅಕ್ಷಯಕುಮಾರ್ ಪ್ರಶ್ನಿಸಿದರೆ ಚೆಂದ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...