Homeಸಿನಿಮಾಕ್ರೀಡೆಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

- Advertisement -
- Advertisement -

| ಮಲ್ಲಿ |

ಸದ್ಯ ಸುದ್ದಿಯಲ್ಲಿರುವ ವಿಶ್ವಕಪ್ ಕ್ರಿಕೆಟ್‍ನಲ್ಲಿ ‘ಝಿಂಗ್’ ಬೇಲ್ಸ್‍ಗಳು ಅಲ್ಲಾಡುತ್ತಲೇ ಇಲ್ಲ! ಒಮ್ಮೆ ನಮ್ಮ ಬೂಮ್ರಾ ಬಿರುಸಾಗಿ ಎಸೆದಾಗ ಚೆಂಡು ಸ್ಟಂಪ್‍ಗೆ ತಾಗಿತು, ಆದರೆ ‘ಝಿಂಗ್’ ಬೇಲ್ಸ್ ಮಿಸುಕಲೇ ಇಲ್ಲ, ಬೇಲ್ಸ್‍ನಲ್ಲಿರುವ ದೀಪಗಳು ಮಿನುಗಲೂ ಇಲ!. ಹೀಗಾಗಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಓಟಾಗಿಯೂ ಓಟಾಗಲಿಲ್ಲ! ಈ ಬೇಲ್ಸ್‍ಗಳನ್ನು ಕುಟ್ಟಿ ಪುಡಿ ಪುಡಿ ಮಾಡಬೇಕು ಎನಿಸಿರಬೇಕು ಜಸ್ಪ್ರಿತ್ ಬೂಮ್ರಾಗೆ!

ಆದರೆ ಕುಟ್ಟೊಂಗಿಲ್ಲ, ತಟ್ಟಂಗಿಲ್ಲ… ಟೂರ್ನಿ ಆರಂಭವಾದ ಮೇಲೆ ಕನಿಷ್ಠ ಐದು ಸಲವಾದರೂ ‘ಅಳ್ಳಾಡದ’ ಬೇಲ್ಸ್‍ಗಳ ಕಾರಣದಿಂದ ಬೌಲರ್‍ಗಳು ನಿರಾಶರಾಗಿದ್ದಾರೆ. ಒಂಥರಾ ನಮ್ಮ ಇವಿಯಂಗಳಂತೆ ವಿಚಿತ್ರ ವರ್ತನೆ ತೋರುತ್ತಿವೆಯೇ ಈ ‘ಝಿಂಗ್’ ಬೇಲ್ಸ್? ವಿಶ್ವಕಪ್ ಮುಗಿಯುವವರೆಗೂ ಈ ಬೇಲ್ಸ್ ಬದಲಿಸುವುದಿಲ್ಲ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೇಳಿದೆ.. ಥೇಟು ನಮ್ಮ ಚುನಾವಣಾ ಆಯೋಗದ ಹಾಗೆಯೇ!

ಇವಿಎಂಗಳನ್ನು ತಿರುಚುವುದು ಸಾಧ್ಯ ಎಂಬುದನ್ನು ಹಲವಾರು ತಜ್ಞರು ದೃಢಪಡಿಸಿದ್ದಾರೆ. ಆದರೆ, ನಮ್ಮ ಚುನಾವಣಾ ಆಯೋಗವು ಜನರಲ್ಲಿನ ಸಂಶಯವನ್ನು ನಿವಾರಿಸುವ ಕೆಲಸವನ್ನು ಮಾಡಲೇ ಇಲ್ಲ. ಚುನಾವಣೆಯ ಮೊದಲ 4 ಹಂತಗಳಲ್ಲಿ 373 ಕ್ಷೇತ್ರಗಳಲ್ಲಿ ವೋಟ್ ಮಾಡಿದ ಮತ್ತು ಕೌಂಟ್ ಆದ ಮತಗಳ ನಡುವೆ 20-30 ಸಾವಿರ ವ್ಯತ್ಯಾಸವಿದ್ದರೂ ನಮ್ಮ ಆಯೋಗ ಅದಕ್ಕೆ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ!

ಬ್ಯಾಟ್ಸಮನ್ ಒಬ್ಬನನ್ನು ನೇರ ಔಟ್ ಮಾಡಲು ಸ್ಟಂಪ್ ಮೇಲಿರುವ ಬೇಲ್ಸ್ ಹಾರುವಂತೆ ಅಥವಾ ಸ್ಟಂಪೇ ನೆಲಕ್ಕೆ ಬೀಳಬೇಕು ಎಂಬುದು ಪರಂಪರಾಗತ ನಿಯಮ. ಆದರೆ ಇಲ್ಲಿ ‘ಝಿಂಗ್’ ಮಾತ್ರ ಸ್ಥಾವರದಂತೆ ಅಂಟಿಕೊಂಡು ಬಿಟ್ಟಿದೆ. ಗಂಟೆಗೆ 110 ಮೈಲು ವೇಗದಲ್ಲಿ ಬಂದ ಬಾಲ್ ಸ್ಟಂಪ್‍ಗೆ ಅಪ್ಪಳಿಸಿದರೂ ‘ಝಿಂಗ್’ ಝುಮ್ಮ ಅಂತಾನೇ ಇಲ್ಲ. ಟೂರ್ನಿಯ ಮೊದಲ ಹತ್ತು ದಿನಗಳಲ್ಲೇ ಇಂತಹ 5 ನಿದರ್ಶನ ನಡೆದರೂ, ಐಸಿಸಿ ಮಾತ್ರ ಇಡೀ ಟೂರ್ನಿಮೆಂಟ್‍ವರೆಗೆ ಇದೇ ‘ಝಿಂಗ್-ಡಾಂಗ್’ ಮುಂದುವರೆಸುವುದಾಗಿ ಹೇಳಿದೆ.

‘ಮಿಸುಕದ ಝಿಂಗ್ ಕಾರಣದಿಂದ ಲೈಫ್ ಪಡೆದ ಆಟಗಾರನೇ ಪಂದ್ಯ ಗೆಲ್ಲಿಸಿದರೆ? ಆಗ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಟೂರ್ನಿಯ ಮೊದಲ ಹತ್ತು ದಿನಗಳಲ್ಲಿ ಇಂತಹ ನಿದರ್ಶನಗಳನ್ನು ನೋಡಿದ ಪಾಕಿಸ್ತಾನದ ನಿವೃತ್ತ ವೇಗಿ ಶೋಯಬ್ ಅಖ್ತರ್ ಟ್ವೀಟ್ ಮಾಡಿ.’ ಅಯ್ಯೋ ಅಲ್ಲಾ, ನನ್ನ ಕ್ರಿಕೆಟ್ ಜೀವನದಲ್ಲೇ ಇಂತಹ ಬೇಲ್ಸ್ ನೋಡಿರಲಿಲ್ಲ. ಅದೂ ಪ್ರತಿಷ್ಟಿತ ವಿಶ್ವಕಪ್‍ನಲ್ಲೇ ಹೀಗಾಗುತ್ತಿದೆಯಲ್ಲ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ…

ಈ ಬೇಲ್ಸ್’ಗಳೂ ಪಕ್ಷಪಾತ ಮಾಡ್ತಿವೆಯಾ? ಬೇಕಾದಾಗ ಉರುಳೋದು ಬೇಡವಾದಾಗ ಸ್ಟಂಪ್ಸ್ ತಬ್ಬಿ ಕೂಡೋದು! ಇದನ್ನು ‘ಬೇಲ್ ಫಿಕ್ಸಿಂಗ್’ ಅಂತಾ ಕರೆಯಬಹುದೇ? ಕೆಲವು ಅನುಭವಿಗಳ ಪ್ರಕಾರ, ಈ ಬೇಲ್ಸ್‍ನಲ್ಲಿರುವ ಬ್ಯಾಟರಿಯ ತೂಕದ ಕಾರಣಕ್ಕೆ ಬೇಲ್ಸ್ ಧಡೂತಿಯಾಗಿ ಮಿಸುಗಾಡಲು ಆಗುತ್ತಿಲ್ಲವಂತೆ! ಚುನಾವಣಾ ಆಯೋಗವೇ ಐಸಿಸಿಗೆ ಮಾದರಿಯಾಗಿದೆಯಾ? ಇನ್ನು ಮುಂದೆ ಈ ಝಿಂಗ್ ಬೇಲ್ಸ್ ಮೇಲೆಯೇ ಬೆಟ್ಟಿಂಗ್ ನಡೆಯಲೂ ಬಹುದು!

ಕ್ಲೌಡ್ ಆ್ಯಂಡ್ ರಾಡಾರ್ ತಜ್ಞರನ್ನು ಈ ಬಗ್ಗೆ ನಮ್ಮ ಅಕ್ಷಯಕುಮಾರ್ ಪ್ರಶ್ನಿಸಿದರೆ ಚೆಂದ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...