Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

ವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

- Advertisement -
- Advertisement -

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ 2019 ರ ಲೀಗ್ ಪಂದ್ಯಗಳು ಮುಗಿದಿದ್ದು ಸೆಮಿ ಫೈನಲ್ ಹಂತ ತಲುಪಿದೆ. ಭಾರತದ ಸಂಘಟಿತ ಆಟದಿಂದಾಗಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದೆ. ಇದೇ ತಿಂಗಳ 9 ರಂದು ಆರಂಭವಾಗಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಣಸಲಿದ್ದು ಈ ಪಂದ್ಯ ಹಲವಾರು ವಿಶೇಷತೆಯಿಂದ ಕೂಡಿದೆ. ಅಲ್ಲದೆ 2008 ರ ಇತಿಹಾಸ ಮತ್ತೊಮ್ಮೆ ಮರುಕಳಿಸಲಿದೆ ಎನ್ನುವ ಲೆಕ್ಕಾಚಾರಗಳು ಕ್ರಿಕೆಟ್ ಅಭಿಮಾನಿಗಳ ನಡಯವೆ ಚರ್ಚೆ ಆಗುತ್ತಿದೆ.

ಏನದು ಇತಿಹಾಸ?

ಅದು 2008, ಮಲೇಷಿಯಾದಲ್ಲಿ ನಡೆಯುತ್ತಿದ್ದ 19 ವರ್ಷದೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ಸ್ ಅಲ್ಲಿ ಸೆಣಸಾಡಿದ್ದವು. ಅಲ್ಲದೆ ಅಂದಿನ ಭಾರತ ತಂಡದ ನಾಯಕನಾಗಿದ್ದ ವಿರಾಟ್ ಕೋಹ್ಲಿ ಹಾಗೂ ನ್ಯೂಝಿಲೆಂಡ್ ತಂಡದ ನಾಯಕನಾಗಿದ್ದ ಕೇನ್ ವಿಲಿಯಮ್‌ಸನ್ ಅವರೇ ಇಂದಿನ 2019 ರ ವಿಶ್ವಕಪ್ ತಂಡದ ನಾಯಕರಾಗಿರುವುದು ವಿಶೇಷವಾಗಿದೆ‌. ಇದು ಅಪರೂಪವೂ ಹೌದು. 2008 ರಲ್ಲಿ ಕೋಹ್ಲಿ ನೇತೃತ್ವದ ತಂಡ ನ್ಯೂಝಿಲೆಂಡ್ ತಂಡದ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಗೆಲುವು ಸಾಧಿಸಿದ್ದೂ ಅಲ್ಲದೆ ಟೂರ್ನಿಯ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿತ್ತು. ಈಗ ಮತ್ತೊಮ್ಮೆ ಅಂತಹದ್ದೇ ಸೆಮಿಫೈನಲ್ಸ್ ಘಟ್ಟವನ್ನು ತಲುಪಿರುವ ಈ ಸಮಯದಲ್ಲಿ ಭಾರತ ತಂಡ ಗೆಲ್ಲುವ ಫೆವರೇಟ್ ತಂಡವಾಗಿದೆ ಅಲ್ಲದೆ ಕ್ರಿಕೆಟ್ ಅಭಿಮಾನಿಗಳಲ್ಲಿ 2008 ರ ಇತಿಹಾಸ ಮರುಕಳಿಸಲಿದೆ ಎನ್ನುವ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಬೇರೆ ವಿಶೇಷತೆಗಳೇನು?

ಸಧ್ಯ ICC ರ‌್ಯಾಂಕಿಗ್ ಪಟ್ಟಿಯಲ್ಲಿ ಮೊದಲೆರಡು ಅಗ್ರಸ್ಥಾನದಲ್ಲಿರುವ ನ್ಯೂಝಿಲೆಂಡ್ ಮತ್ತು ಭಾರತ (ವಿಶ್ವಕಪ್ ಟೂರ್ನಿಯ ಮುಂಚಿನ ರ‌್ಯಾಂಕಿಗ್) ಇದೇ ಮೊದಲ ಬಾರಿಗೆ ಮುಖಾಮುಖಿ ಆಗುತ್ತಿದೆ. ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದ ಒಂದು ಹಂತದಲ್ಲಿ ಒಂದೂ ಪಂದ್ಯ ಸೋಲದ ಎರಡು ತಂಡವಾಗಿ ಭಾರತ ಮತ್ತು ನ್ಯೂಝಿಲೆಂಡ್ ಉಳಿದುಕೊಂಡಿತ್ತು. ಎರಡು ತಂಡಗಳ ನಡುವಿನ ಬಹ ನಿರೀಕ್ಷಿತ ರೋಮಾಂಚಕಾರಿ ಪಂದ್ಯ ಮಳೆಯ ಕಾರಣಕ್ಕೆ ರದ್ಧಾಗಿತ್ತು. ಇದೀಗ ಸೆಮೀಸ್‌ನ ಮುಖಾಮುಖಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

2008ರ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಮೀಸ್ ನಲ್ಲಿ ಪಂದ್ಯ ಪುರುಷೋತ್ತಮ ಪಡೆದುಕೊಂಡಿದ್ದ ಕೋಹ್ಲಿ, 2019ರ ಸೆಮೀಸ್ ನಲ್ಲೂ ಮ‌್ಯಾಜಿಕ್ ಮಾಡಬಹುದ ಎಂದು ಕಾದು ನೋಡಬೇಕು. ಟೂರ್ನಿಯಲ್ಲಿ ಹೆಚ್ಚು 50 ರನ್‌ಗಳನ್ನು ಗಳಿಸಿದ್ದಾರಾದರೂ ಈವರಗೂ ಶತಕ ಬಾರಿಸಿಲ್ಲ. ನಾಕೌಟ್‌ನ ಬಹುಮುಖ್ಯವಾದ ಈ ಪಂದ್ಯದಲ್ಲಿ ಶತಕಗಳಿಸುತ್ತಾರೆ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

ಇನ್ನು ಈವರೆಗೂ ಒಂದೂ ವಿಶ್ವಕಪ್ ಗೆಲ್ಲದಿರುವ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ಸೆಮೀಸ್ ಕದನದಲ್ಲಿದ್ದು ಅವರ ಮೇಲೆ ಹೆಚ್ಚಿನ ನಿರೀಕ್ಷೆ ಮತ್ತು ಒತ್ತಡಗಳು ಇದೆ.
ಸಧ್ಯ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಾಗಿರುವ ಭಾರತ ತಂಡದ ಲೋವರ್ ಆರ್ಡರ್ ಬ್ಯಾಟಿಂಗ್ ಸುಧಾರಿಸಿಕೊಂಡರೆ ಮೂರನೇ ವಿಶ್ವಕಪ್ ಭಾರತಕ್ಕೆ ಸಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...