Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

ವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

- Advertisement -
- Advertisement -

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ 2019 ರ ಲೀಗ್ ಪಂದ್ಯಗಳು ಮುಗಿದಿದ್ದು ಸೆಮಿ ಫೈನಲ್ ಹಂತ ತಲುಪಿದೆ. ಭಾರತದ ಸಂಘಟಿತ ಆಟದಿಂದಾಗಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದೆ. ಇದೇ ತಿಂಗಳ 9 ರಂದು ಆರಂಭವಾಗಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಣಸಲಿದ್ದು ಈ ಪಂದ್ಯ ಹಲವಾರು ವಿಶೇಷತೆಯಿಂದ ಕೂಡಿದೆ. ಅಲ್ಲದೆ 2008 ರ ಇತಿಹಾಸ ಮತ್ತೊಮ್ಮೆ ಮರುಕಳಿಸಲಿದೆ ಎನ್ನುವ ಲೆಕ್ಕಾಚಾರಗಳು ಕ್ರಿಕೆಟ್ ಅಭಿಮಾನಿಗಳ ನಡಯವೆ ಚರ್ಚೆ ಆಗುತ್ತಿದೆ.

ಏನದು ಇತಿಹಾಸ?

ಅದು 2008, ಮಲೇಷಿಯಾದಲ್ಲಿ ನಡೆಯುತ್ತಿದ್ದ 19 ವರ್ಷದೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ಸ್ ಅಲ್ಲಿ ಸೆಣಸಾಡಿದ್ದವು. ಅಲ್ಲದೆ ಅಂದಿನ ಭಾರತ ತಂಡದ ನಾಯಕನಾಗಿದ್ದ ವಿರಾಟ್ ಕೋಹ್ಲಿ ಹಾಗೂ ನ್ಯೂಝಿಲೆಂಡ್ ತಂಡದ ನಾಯಕನಾಗಿದ್ದ ಕೇನ್ ವಿಲಿಯಮ್‌ಸನ್ ಅವರೇ ಇಂದಿನ 2019 ರ ವಿಶ್ವಕಪ್ ತಂಡದ ನಾಯಕರಾಗಿರುವುದು ವಿಶೇಷವಾಗಿದೆ‌. ಇದು ಅಪರೂಪವೂ ಹೌದು. 2008 ರಲ್ಲಿ ಕೋಹ್ಲಿ ನೇತೃತ್ವದ ತಂಡ ನ್ಯೂಝಿಲೆಂಡ್ ತಂಡದ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಗೆಲುವು ಸಾಧಿಸಿದ್ದೂ ಅಲ್ಲದೆ ಟೂರ್ನಿಯ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿತ್ತು. ಈಗ ಮತ್ತೊಮ್ಮೆ ಅಂತಹದ್ದೇ ಸೆಮಿಫೈನಲ್ಸ್ ಘಟ್ಟವನ್ನು ತಲುಪಿರುವ ಈ ಸಮಯದಲ್ಲಿ ಭಾರತ ತಂಡ ಗೆಲ್ಲುವ ಫೆವರೇಟ್ ತಂಡವಾಗಿದೆ ಅಲ್ಲದೆ ಕ್ರಿಕೆಟ್ ಅಭಿಮಾನಿಗಳಲ್ಲಿ 2008 ರ ಇತಿಹಾಸ ಮರುಕಳಿಸಲಿದೆ ಎನ್ನುವ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಬೇರೆ ವಿಶೇಷತೆಗಳೇನು?

ಸಧ್ಯ ICC ರ‌್ಯಾಂಕಿಗ್ ಪಟ್ಟಿಯಲ್ಲಿ ಮೊದಲೆರಡು ಅಗ್ರಸ್ಥಾನದಲ್ಲಿರುವ ನ್ಯೂಝಿಲೆಂಡ್ ಮತ್ತು ಭಾರತ (ವಿಶ್ವಕಪ್ ಟೂರ್ನಿಯ ಮುಂಚಿನ ರ‌್ಯಾಂಕಿಗ್) ಇದೇ ಮೊದಲ ಬಾರಿಗೆ ಮುಖಾಮುಖಿ ಆಗುತ್ತಿದೆ. ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದ ಒಂದು ಹಂತದಲ್ಲಿ ಒಂದೂ ಪಂದ್ಯ ಸೋಲದ ಎರಡು ತಂಡವಾಗಿ ಭಾರತ ಮತ್ತು ನ್ಯೂಝಿಲೆಂಡ್ ಉಳಿದುಕೊಂಡಿತ್ತು. ಎರಡು ತಂಡಗಳ ನಡುವಿನ ಬಹ ನಿರೀಕ್ಷಿತ ರೋಮಾಂಚಕಾರಿ ಪಂದ್ಯ ಮಳೆಯ ಕಾರಣಕ್ಕೆ ರದ್ಧಾಗಿತ್ತು. ಇದೀಗ ಸೆಮೀಸ್‌ನ ಮುಖಾಮುಖಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

2008ರ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಮೀಸ್ ನಲ್ಲಿ ಪಂದ್ಯ ಪುರುಷೋತ್ತಮ ಪಡೆದುಕೊಂಡಿದ್ದ ಕೋಹ್ಲಿ, 2019ರ ಸೆಮೀಸ್ ನಲ್ಲೂ ಮ‌್ಯಾಜಿಕ್ ಮಾಡಬಹುದ ಎಂದು ಕಾದು ನೋಡಬೇಕು. ಟೂರ್ನಿಯಲ್ಲಿ ಹೆಚ್ಚು 50 ರನ್‌ಗಳನ್ನು ಗಳಿಸಿದ್ದಾರಾದರೂ ಈವರಗೂ ಶತಕ ಬಾರಿಸಿಲ್ಲ. ನಾಕೌಟ್‌ನ ಬಹುಮುಖ್ಯವಾದ ಈ ಪಂದ್ಯದಲ್ಲಿ ಶತಕಗಳಿಸುತ್ತಾರೆ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

ಇನ್ನು ಈವರೆಗೂ ಒಂದೂ ವಿಶ್ವಕಪ್ ಗೆಲ್ಲದಿರುವ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ಸೆಮೀಸ್ ಕದನದಲ್ಲಿದ್ದು ಅವರ ಮೇಲೆ ಹೆಚ್ಚಿನ ನಿರೀಕ್ಷೆ ಮತ್ತು ಒತ್ತಡಗಳು ಇದೆ.
ಸಧ್ಯ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಾಗಿರುವ ಭಾರತ ತಂಡದ ಲೋವರ್ ಆರ್ಡರ್ ಬ್ಯಾಟಿಂಗ್ ಸುಧಾರಿಸಿಕೊಂಡರೆ ಮೂರನೇ ವಿಶ್ವಕಪ್ ಭಾರತಕ್ಕೆ ಸಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...