Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

ವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

- Advertisement -
- Advertisement -

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ 2019 ರ ಲೀಗ್ ಪಂದ್ಯಗಳು ಮುಗಿದಿದ್ದು ಸೆಮಿ ಫೈನಲ್ ಹಂತ ತಲುಪಿದೆ. ಭಾರತದ ಸಂಘಟಿತ ಆಟದಿಂದಾಗಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದೆ. ಇದೇ ತಿಂಗಳ 9 ರಂದು ಆರಂಭವಾಗಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಣಸಲಿದ್ದು ಈ ಪಂದ್ಯ ಹಲವಾರು ವಿಶೇಷತೆಯಿಂದ ಕೂಡಿದೆ. ಅಲ್ಲದೆ 2008 ರ ಇತಿಹಾಸ ಮತ್ತೊಮ್ಮೆ ಮರುಕಳಿಸಲಿದೆ ಎನ್ನುವ ಲೆಕ್ಕಾಚಾರಗಳು ಕ್ರಿಕೆಟ್ ಅಭಿಮಾನಿಗಳ ನಡಯವೆ ಚರ್ಚೆ ಆಗುತ್ತಿದೆ.

ಏನದು ಇತಿಹಾಸ?

ಅದು 2008, ಮಲೇಷಿಯಾದಲ್ಲಿ ನಡೆಯುತ್ತಿದ್ದ 19 ವರ್ಷದೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ಸ್ ಅಲ್ಲಿ ಸೆಣಸಾಡಿದ್ದವು. ಅಲ್ಲದೆ ಅಂದಿನ ಭಾರತ ತಂಡದ ನಾಯಕನಾಗಿದ್ದ ವಿರಾಟ್ ಕೋಹ್ಲಿ ಹಾಗೂ ನ್ಯೂಝಿಲೆಂಡ್ ತಂಡದ ನಾಯಕನಾಗಿದ್ದ ಕೇನ್ ವಿಲಿಯಮ್‌ಸನ್ ಅವರೇ ಇಂದಿನ 2019 ರ ವಿಶ್ವಕಪ್ ತಂಡದ ನಾಯಕರಾಗಿರುವುದು ವಿಶೇಷವಾಗಿದೆ‌. ಇದು ಅಪರೂಪವೂ ಹೌದು. 2008 ರಲ್ಲಿ ಕೋಹ್ಲಿ ನೇತೃತ್ವದ ತಂಡ ನ್ಯೂಝಿಲೆಂಡ್ ತಂಡದ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಗೆಲುವು ಸಾಧಿಸಿದ್ದೂ ಅಲ್ಲದೆ ಟೂರ್ನಿಯ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿತ್ತು. ಈಗ ಮತ್ತೊಮ್ಮೆ ಅಂತಹದ್ದೇ ಸೆಮಿಫೈನಲ್ಸ್ ಘಟ್ಟವನ್ನು ತಲುಪಿರುವ ಈ ಸಮಯದಲ್ಲಿ ಭಾರತ ತಂಡ ಗೆಲ್ಲುವ ಫೆವರೇಟ್ ತಂಡವಾಗಿದೆ ಅಲ್ಲದೆ ಕ್ರಿಕೆಟ್ ಅಭಿಮಾನಿಗಳಲ್ಲಿ 2008 ರ ಇತಿಹಾಸ ಮರುಕಳಿಸಲಿದೆ ಎನ್ನುವ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಬೇರೆ ವಿಶೇಷತೆಗಳೇನು?

ಸಧ್ಯ ICC ರ‌್ಯಾಂಕಿಗ್ ಪಟ್ಟಿಯಲ್ಲಿ ಮೊದಲೆರಡು ಅಗ್ರಸ್ಥಾನದಲ್ಲಿರುವ ನ್ಯೂಝಿಲೆಂಡ್ ಮತ್ತು ಭಾರತ (ವಿಶ್ವಕಪ್ ಟೂರ್ನಿಯ ಮುಂಚಿನ ರ‌್ಯಾಂಕಿಗ್) ಇದೇ ಮೊದಲ ಬಾರಿಗೆ ಮುಖಾಮುಖಿ ಆಗುತ್ತಿದೆ. ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದ ಒಂದು ಹಂತದಲ್ಲಿ ಒಂದೂ ಪಂದ್ಯ ಸೋಲದ ಎರಡು ತಂಡವಾಗಿ ಭಾರತ ಮತ್ತು ನ್ಯೂಝಿಲೆಂಡ್ ಉಳಿದುಕೊಂಡಿತ್ತು. ಎರಡು ತಂಡಗಳ ನಡುವಿನ ಬಹ ನಿರೀಕ್ಷಿತ ರೋಮಾಂಚಕಾರಿ ಪಂದ್ಯ ಮಳೆಯ ಕಾರಣಕ್ಕೆ ರದ್ಧಾಗಿತ್ತು. ಇದೀಗ ಸೆಮೀಸ್‌ನ ಮುಖಾಮುಖಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

2008ರ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಮೀಸ್ ನಲ್ಲಿ ಪಂದ್ಯ ಪುರುಷೋತ್ತಮ ಪಡೆದುಕೊಂಡಿದ್ದ ಕೋಹ್ಲಿ, 2019ರ ಸೆಮೀಸ್ ನಲ್ಲೂ ಮ‌್ಯಾಜಿಕ್ ಮಾಡಬಹುದ ಎಂದು ಕಾದು ನೋಡಬೇಕು. ಟೂರ್ನಿಯಲ್ಲಿ ಹೆಚ್ಚು 50 ರನ್‌ಗಳನ್ನು ಗಳಿಸಿದ್ದಾರಾದರೂ ಈವರಗೂ ಶತಕ ಬಾರಿಸಿಲ್ಲ. ನಾಕೌಟ್‌ನ ಬಹುಮುಖ್ಯವಾದ ಈ ಪಂದ್ಯದಲ್ಲಿ ಶತಕಗಳಿಸುತ್ತಾರೆ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

ಇನ್ನು ಈವರೆಗೂ ಒಂದೂ ವಿಶ್ವಕಪ್ ಗೆಲ್ಲದಿರುವ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ಸೆಮೀಸ್ ಕದನದಲ್ಲಿದ್ದು ಅವರ ಮೇಲೆ ಹೆಚ್ಚಿನ ನಿರೀಕ್ಷೆ ಮತ್ತು ಒತ್ತಡಗಳು ಇದೆ.
ಸಧ್ಯ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಾಗಿರುವ ಭಾರತ ತಂಡದ ಲೋವರ್ ಆರ್ಡರ್ ಬ್ಯಾಟಿಂಗ್ ಸುಧಾರಿಸಿಕೊಂಡರೆ ಮೂರನೇ ವಿಶ್ವಕಪ್ ಭಾರತಕ್ಕೆ ಸಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...