Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

ವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

- Advertisement -
- Advertisement -

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ 2019 ರ ಲೀಗ್ ಪಂದ್ಯಗಳು ಮುಗಿದಿದ್ದು ಸೆಮಿ ಫೈನಲ್ ಹಂತ ತಲುಪಿದೆ. ಭಾರತದ ಸಂಘಟಿತ ಆಟದಿಂದಾಗಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದೆ. ಇದೇ ತಿಂಗಳ 9 ರಂದು ಆರಂಭವಾಗಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಣಸಲಿದ್ದು ಈ ಪಂದ್ಯ ಹಲವಾರು ವಿಶೇಷತೆಯಿಂದ ಕೂಡಿದೆ. ಅಲ್ಲದೆ 2008 ರ ಇತಿಹಾಸ ಮತ್ತೊಮ್ಮೆ ಮರುಕಳಿಸಲಿದೆ ಎನ್ನುವ ಲೆಕ್ಕಾಚಾರಗಳು ಕ್ರಿಕೆಟ್ ಅಭಿಮಾನಿಗಳ ನಡಯವೆ ಚರ್ಚೆ ಆಗುತ್ತಿದೆ.

ಏನದು ಇತಿಹಾಸ?

ಅದು 2008, ಮಲೇಷಿಯಾದಲ್ಲಿ ನಡೆಯುತ್ತಿದ್ದ 19 ವರ್ಷದೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ಸ್ ಅಲ್ಲಿ ಸೆಣಸಾಡಿದ್ದವು. ಅಲ್ಲದೆ ಅಂದಿನ ಭಾರತ ತಂಡದ ನಾಯಕನಾಗಿದ್ದ ವಿರಾಟ್ ಕೋಹ್ಲಿ ಹಾಗೂ ನ್ಯೂಝಿಲೆಂಡ್ ತಂಡದ ನಾಯಕನಾಗಿದ್ದ ಕೇನ್ ವಿಲಿಯಮ್‌ಸನ್ ಅವರೇ ಇಂದಿನ 2019 ರ ವಿಶ್ವಕಪ್ ತಂಡದ ನಾಯಕರಾಗಿರುವುದು ವಿಶೇಷವಾಗಿದೆ‌. ಇದು ಅಪರೂಪವೂ ಹೌದು. 2008 ರಲ್ಲಿ ಕೋಹ್ಲಿ ನೇತೃತ್ವದ ತಂಡ ನ್ಯೂಝಿಲೆಂಡ್ ತಂಡದ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಗೆಲುವು ಸಾಧಿಸಿದ್ದೂ ಅಲ್ಲದೆ ಟೂರ್ನಿಯ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿತ್ತು. ಈಗ ಮತ್ತೊಮ್ಮೆ ಅಂತಹದ್ದೇ ಸೆಮಿಫೈನಲ್ಸ್ ಘಟ್ಟವನ್ನು ತಲುಪಿರುವ ಈ ಸಮಯದಲ್ಲಿ ಭಾರತ ತಂಡ ಗೆಲ್ಲುವ ಫೆವರೇಟ್ ತಂಡವಾಗಿದೆ ಅಲ್ಲದೆ ಕ್ರಿಕೆಟ್ ಅಭಿಮಾನಿಗಳಲ್ಲಿ 2008 ರ ಇತಿಹಾಸ ಮರುಕಳಿಸಲಿದೆ ಎನ್ನುವ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಬೇರೆ ವಿಶೇಷತೆಗಳೇನು?

ಸಧ್ಯ ICC ರ‌್ಯಾಂಕಿಗ್ ಪಟ್ಟಿಯಲ್ಲಿ ಮೊದಲೆರಡು ಅಗ್ರಸ್ಥಾನದಲ್ಲಿರುವ ನ್ಯೂಝಿಲೆಂಡ್ ಮತ್ತು ಭಾರತ (ವಿಶ್ವಕಪ್ ಟೂರ್ನಿಯ ಮುಂಚಿನ ರ‌್ಯಾಂಕಿಗ್) ಇದೇ ಮೊದಲ ಬಾರಿಗೆ ಮುಖಾಮುಖಿ ಆಗುತ್ತಿದೆ. ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದ ಒಂದು ಹಂತದಲ್ಲಿ ಒಂದೂ ಪಂದ್ಯ ಸೋಲದ ಎರಡು ತಂಡವಾಗಿ ಭಾರತ ಮತ್ತು ನ್ಯೂಝಿಲೆಂಡ್ ಉಳಿದುಕೊಂಡಿತ್ತು. ಎರಡು ತಂಡಗಳ ನಡುವಿನ ಬಹ ನಿರೀಕ್ಷಿತ ರೋಮಾಂಚಕಾರಿ ಪಂದ್ಯ ಮಳೆಯ ಕಾರಣಕ್ಕೆ ರದ್ಧಾಗಿತ್ತು. ಇದೀಗ ಸೆಮೀಸ್‌ನ ಮುಖಾಮುಖಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

2008ರ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಮೀಸ್ ನಲ್ಲಿ ಪಂದ್ಯ ಪುರುಷೋತ್ತಮ ಪಡೆದುಕೊಂಡಿದ್ದ ಕೋಹ್ಲಿ, 2019ರ ಸೆಮೀಸ್ ನಲ್ಲೂ ಮ‌್ಯಾಜಿಕ್ ಮಾಡಬಹುದ ಎಂದು ಕಾದು ನೋಡಬೇಕು. ಟೂರ್ನಿಯಲ್ಲಿ ಹೆಚ್ಚು 50 ರನ್‌ಗಳನ್ನು ಗಳಿಸಿದ್ದಾರಾದರೂ ಈವರಗೂ ಶತಕ ಬಾರಿಸಿಲ್ಲ. ನಾಕೌಟ್‌ನ ಬಹುಮುಖ್ಯವಾದ ಈ ಪಂದ್ಯದಲ್ಲಿ ಶತಕಗಳಿಸುತ್ತಾರೆ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

ಇನ್ನು ಈವರೆಗೂ ಒಂದೂ ವಿಶ್ವಕಪ್ ಗೆಲ್ಲದಿರುವ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ಸೆಮೀಸ್ ಕದನದಲ್ಲಿದ್ದು ಅವರ ಮೇಲೆ ಹೆಚ್ಚಿನ ನಿರೀಕ್ಷೆ ಮತ್ತು ಒತ್ತಡಗಳು ಇದೆ.
ಸಧ್ಯ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಾಗಿರುವ ಭಾರತ ತಂಡದ ಲೋವರ್ ಆರ್ಡರ್ ಬ್ಯಾಟಿಂಗ್ ಸುಧಾರಿಸಿಕೊಂಡರೆ ಮೂರನೇ ವಿಶ್ವಕಪ್ ಭಾರತಕ್ಕೆ ಸಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...