Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

ವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

- Advertisement -
- Advertisement -

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ 2019 ರ ಲೀಗ್ ಪಂದ್ಯಗಳು ಮುಗಿದಿದ್ದು ಸೆಮಿ ಫೈನಲ್ ಹಂತ ತಲುಪಿದೆ. ಭಾರತದ ಸಂಘಟಿತ ಆಟದಿಂದಾಗಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದೆ. ಇದೇ ತಿಂಗಳ 9 ರಂದು ಆರಂಭವಾಗಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಣಸಲಿದ್ದು ಈ ಪಂದ್ಯ ಹಲವಾರು ವಿಶೇಷತೆಯಿಂದ ಕೂಡಿದೆ. ಅಲ್ಲದೆ 2008 ರ ಇತಿಹಾಸ ಮತ್ತೊಮ್ಮೆ ಮರುಕಳಿಸಲಿದೆ ಎನ್ನುವ ಲೆಕ್ಕಾಚಾರಗಳು ಕ್ರಿಕೆಟ್ ಅಭಿಮಾನಿಗಳ ನಡಯವೆ ಚರ್ಚೆ ಆಗುತ್ತಿದೆ.

ಏನದು ಇತಿಹಾಸ?

ಅದು 2008, ಮಲೇಷಿಯಾದಲ್ಲಿ ನಡೆಯುತ್ತಿದ್ದ 19 ವರ್ಷದೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ಸ್ ಅಲ್ಲಿ ಸೆಣಸಾಡಿದ್ದವು. ಅಲ್ಲದೆ ಅಂದಿನ ಭಾರತ ತಂಡದ ನಾಯಕನಾಗಿದ್ದ ವಿರಾಟ್ ಕೋಹ್ಲಿ ಹಾಗೂ ನ್ಯೂಝಿಲೆಂಡ್ ತಂಡದ ನಾಯಕನಾಗಿದ್ದ ಕೇನ್ ವಿಲಿಯಮ್‌ಸನ್ ಅವರೇ ಇಂದಿನ 2019 ರ ವಿಶ್ವಕಪ್ ತಂಡದ ನಾಯಕರಾಗಿರುವುದು ವಿಶೇಷವಾಗಿದೆ‌. ಇದು ಅಪರೂಪವೂ ಹೌದು. 2008 ರಲ್ಲಿ ಕೋಹ್ಲಿ ನೇತೃತ್ವದ ತಂಡ ನ್ಯೂಝಿಲೆಂಡ್ ತಂಡದ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಗೆಲುವು ಸಾಧಿಸಿದ್ದೂ ಅಲ್ಲದೆ ಟೂರ್ನಿಯ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿತ್ತು. ಈಗ ಮತ್ತೊಮ್ಮೆ ಅಂತಹದ್ದೇ ಸೆಮಿಫೈನಲ್ಸ್ ಘಟ್ಟವನ್ನು ತಲುಪಿರುವ ಈ ಸಮಯದಲ್ಲಿ ಭಾರತ ತಂಡ ಗೆಲ್ಲುವ ಫೆವರೇಟ್ ತಂಡವಾಗಿದೆ ಅಲ್ಲದೆ ಕ್ರಿಕೆಟ್ ಅಭಿಮಾನಿಗಳಲ್ಲಿ 2008 ರ ಇತಿಹಾಸ ಮರುಕಳಿಸಲಿದೆ ಎನ್ನುವ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಬೇರೆ ವಿಶೇಷತೆಗಳೇನು?

ಸಧ್ಯ ICC ರ‌್ಯಾಂಕಿಗ್ ಪಟ್ಟಿಯಲ್ಲಿ ಮೊದಲೆರಡು ಅಗ್ರಸ್ಥಾನದಲ್ಲಿರುವ ನ್ಯೂಝಿಲೆಂಡ್ ಮತ್ತು ಭಾರತ (ವಿಶ್ವಕಪ್ ಟೂರ್ನಿಯ ಮುಂಚಿನ ರ‌್ಯಾಂಕಿಗ್) ಇದೇ ಮೊದಲ ಬಾರಿಗೆ ಮುಖಾಮುಖಿ ಆಗುತ್ತಿದೆ. ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದ ಒಂದು ಹಂತದಲ್ಲಿ ಒಂದೂ ಪಂದ್ಯ ಸೋಲದ ಎರಡು ತಂಡವಾಗಿ ಭಾರತ ಮತ್ತು ನ್ಯೂಝಿಲೆಂಡ್ ಉಳಿದುಕೊಂಡಿತ್ತು. ಎರಡು ತಂಡಗಳ ನಡುವಿನ ಬಹ ನಿರೀಕ್ಷಿತ ರೋಮಾಂಚಕಾರಿ ಪಂದ್ಯ ಮಳೆಯ ಕಾರಣಕ್ಕೆ ರದ್ಧಾಗಿತ್ತು. ಇದೀಗ ಸೆಮೀಸ್‌ನ ಮುಖಾಮುಖಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

2008ರ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಮೀಸ್ ನಲ್ಲಿ ಪಂದ್ಯ ಪುರುಷೋತ್ತಮ ಪಡೆದುಕೊಂಡಿದ್ದ ಕೋಹ್ಲಿ, 2019ರ ಸೆಮೀಸ್ ನಲ್ಲೂ ಮ‌್ಯಾಜಿಕ್ ಮಾಡಬಹುದ ಎಂದು ಕಾದು ನೋಡಬೇಕು. ಟೂರ್ನಿಯಲ್ಲಿ ಹೆಚ್ಚು 50 ರನ್‌ಗಳನ್ನು ಗಳಿಸಿದ್ದಾರಾದರೂ ಈವರಗೂ ಶತಕ ಬಾರಿಸಿಲ್ಲ. ನಾಕೌಟ್‌ನ ಬಹುಮುಖ್ಯವಾದ ಈ ಪಂದ್ಯದಲ್ಲಿ ಶತಕಗಳಿಸುತ್ತಾರೆ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

ಇನ್ನು ಈವರೆಗೂ ಒಂದೂ ವಿಶ್ವಕಪ್ ಗೆಲ್ಲದಿರುವ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ಸೆಮೀಸ್ ಕದನದಲ್ಲಿದ್ದು ಅವರ ಮೇಲೆ ಹೆಚ್ಚಿನ ನಿರೀಕ್ಷೆ ಮತ್ತು ಒತ್ತಡಗಳು ಇದೆ.
ಸಧ್ಯ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಾಗಿರುವ ಭಾರತ ತಂಡದ ಲೋವರ್ ಆರ್ಡರ್ ಬ್ಯಾಟಿಂಗ್ ಸುಧಾರಿಸಿಕೊಂಡರೆ ಮೂರನೇ ವಿಶ್ವಕಪ್ ಭಾರತಕ್ಕೆ ಸಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...