Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

ವಿಶ್ವಕಪ್ ಕ್ರಿಕೆಟ್: ನಾಳೆ ಭಾರತ-ನ್ಯೂಝಿಲೆಂಡ್ ಸೆಮಿಫೈನಲ್. ಮರುಕಳಿಸಬಹುದೇ ಇತಿಹಾಸ?

- Advertisement -
- Advertisement -

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ 2019 ರ ಲೀಗ್ ಪಂದ್ಯಗಳು ಮುಗಿದಿದ್ದು ಸೆಮಿ ಫೈನಲ್ ಹಂತ ತಲುಪಿದೆ. ಭಾರತದ ಸಂಘಟಿತ ಆಟದಿಂದಾಗಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದೆ. ಇದೇ ತಿಂಗಳ 9 ರಂದು ಆರಂಭವಾಗಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಣಸಲಿದ್ದು ಈ ಪಂದ್ಯ ಹಲವಾರು ವಿಶೇಷತೆಯಿಂದ ಕೂಡಿದೆ. ಅಲ್ಲದೆ 2008 ರ ಇತಿಹಾಸ ಮತ್ತೊಮ್ಮೆ ಮರುಕಳಿಸಲಿದೆ ಎನ್ನುವ ಲೆಕ್ಕಾಚಾರಗಳು ಕ್ರಿಕೆಟ್ ಅಭಿಮಾನಿಗಳ ನಡಯವೆ ಚರ್ಚೆ ಆಗುತ್ತಿದೆ.

ಏನದು ಇತಿಹಾಸ?

ಅದು 2008, ಮಲೇಷಿಯಾದಲ್ಲಿ ನಡೆಯುತ್ತಿದ್ದ 19 ವರ್ಷದೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ಸ್ ಅಲ್ಲಿ ಸೆಣಸಾಡಿದ್ದವು. ಅಲ್ಲದೆ ಅಂದಿನ ಭಾರತ ತಂಡದ ನಾಯಕನಾಗಿದ್ದ ವಿರಾಟ್ ಕೋಹ್ಲಿ ಹಾಗೂ ನ್ಯೂಝಿಲೆಂಡ್ ತಂಡದ ನಾಯಕನಾಗಿದ್ದ ಕೇನ್ ವಿಲಿಯಮ್‌ಸನ್ ಅವರೇ ಇಂದಿನ 2019 ರ ವಿಶ್ವಕಪ್ ತಂಡದ ನಾಯಕರಾಗಿರುವುದು ವಿಶೇಷವಾಗಿದೆ‌. ಇದು ಅಪರೂಪವೂ ಹೌದು. 2008 ರಲ್ಲಿ ಕೋಹ್ಲಿ ನೇತೃತ್ವದ ತಂಡ ನ್ಯೂಝಿಲೆಂಡ್ ತಂಡದ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಗೆಲುವು ಸಾಧಿಸಿದ್ದೂ ಅಲ್ಲದೆ ಟೂರ್ನಿಯ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿತ್ತು. ಈಗ ಮತ್ತೊಮ್ಮೆ ಅಂತಹದ್ದೇ ಸೆಮಿಫೈನಲ್ಸ್ ಘಟ್ಟವನ್ನು ತಲುಪಿರುವ ಈ ಸಮಯದಲ್ಲಿ ಭಾರತ ತಂಡ ಗೆಲ್ಲುವ ಫೆವರೇಟ್ ತಂಡವಾಗಿದೆ ಅಲ್ಲದೆ ಕ್ರಿಕೆಟ್ ಅಭಿಮಾನಿಗಳಲ್ಲಿ 2008 ರ ಇತಿಹಾಸ ಮರುಕಳಿಸಲಿದೆ ಎನ್ನುವ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಬೇರೆ ವಿಶೇಷತೆಗಳೇನು?

ಸಧ್ಯ ICC ರ‌್ಯಾಂಕಿಗ್ ಪಟ್ಟಿಯಲ್ಲಿ ಮೊದಲೆರಡು ಅಗ್ರಸ್ಥಾನದಲ್ಲಿರುವ ನ್ಯೂಝಿಲೆಂಡ್ ಮತ್ತು ಭಾರತ (ವಿಶ್ವಕಪ್ ಟೂರ್ನಿಯ ಮುಂಚಿನ ರ‌್ಯಾಂಕಿಗ್) ಇದೇ ಮೊದಲ ಬಾರಿಗೆ ಮುಖಾಮುಖಿ ಆಗುತ್ತಿದೆ. ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದ ಒಂದು ಹಂತದಲ್ಲಿ ಒಂದೂ ಪಂದ್ಯ ಸೋಲದ ಎರಡು ತಂಡವಾಗಿ ಭಾರತ ಮತ್ತು ನ್ಯೂಝಿಲೆಂಡ್ ಉಳಿದುಕೊಂಡಿತ್ತು. ಎರಡು ತಂಡಗಳ ನಡುವಿನ ಬಹ ನಿರೀಕ್ಷಿತ ರೋಮಾಂಚಕಾರಿ ಪಂದ್ಯ ಮಳೆಯ ಕಾರಣಕ್ಕೆ ರದ್ಧಾಗಿತ್ತು. ಇದೀಗ ಸೆಮೀಸ್‌ನ ಮುಖಾಮುಖಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

2008ರ ನ್ಯೂಝಿಲೆಂಡ್ ತಂಡದ ವಿರುದ್ಧ ಸೆಮೀಸ್ ನಲ್ಲಿ ಪಂದ್ಯ ಪುರುಷೋತ್ತಮ ಪಡೆದುಕೊಂಡಿದ್ದ ಕೋಹ್ಲಿ, 2019ರ ಸೆಮೀಸ್ ನಲ್ಲೂ ಮ‌್ಯಾಜಿಕ್ ಮಾಡಬಹುದ ಎಂದು ಕಾದು ನೋಡಬೇಕು. ಟೂರ್ನಿಯಲ್ಲಿ ಹೆಚ್ಚು 50 ರನ್‌ಗಳನ್ನು ಗಳಿಸಿದ್ದಾರಾದರೂ ಈವರಗೂ ಶತಕ ಬಾರಿಸಿಲ್ಲ. ನಾಕೌಟ್‌ನ ಬಹುಮುಖ್ಯವಾದ ಈ ಪಂದ್ಯದಲ್ಲಿ ಶತಕಗಳಿಸುತ್ತಾರೆ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

ಇನ್ನು ಈವರೆಗೂ ಒಂದೂ ವಿಶ್ವಕಪ್ ಗೆಲ್ಲದಿರುವ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ಸೆಮೀಸ್ ಕದನದಲ್ಲಿದ್ದು ಅವರ ಮೇಲೆ ಹೆಚ್ಚಿನ ನಿರೀಕ್ಷೆ ಮತ್ತು ಒತ್ತಡಗಳು ಇದೆ.
ಸಧ್ಯ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಾಗಿರುವ ಭಾರತ ತಂಡದ ಲೋವರ್ ಆರ್ಡರ್ ಬ್ಯಾಟಿಂಗ್ ಸುಧಾರಿಸಿಕೊಂಡರೆ ಮೂರನೇ ವಿಶ್ವಕಪ್ ಭಾರತಕ್ಕೆ ಸಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...