Homeಸಿನಿಮಾಕ್ರೀಡೆವಿಶ್ವಕಪ್ : ವಿಜಯ್ ಶಂಕರ್ ಸೇರಿಸಿದ್ಯಾಕೆ? ಅಂಬಾಟಿ ರಾಯುಡು ಬಿಟ್ಟಿದ್ಯಾಕೆ?

ವಿಶ್ವಕಪ್ : ವಿಜಯ್ ಶಂಕರ್ ಸೇರಿಸಿದ್ಯಾಕೆ? ಅಂಬಾಟಿ ರಾಯುಡು ಬಿಟ್ಟಿದ್ಯಾಕೆ?

- Advertisement -
| ಅಂತಃಕರಣ |
ಈ ಬಾರಿಯ ಭಾರತದ ವಿಶ್ವಕಪ್ ತಂಡದ ಸುಮಾರು 13 ಆಟಗಾರರು ಎಲ್ಲರೂ ನಿರೀಕ್ಷಿಸಿದವರೇ ಆಗಿದ್ದರು. ಆದರೆ ಉಳಿದ ಇಬ್ಬರ ಆಯ್ಕೆ ಕೆಲವು ಅಭಿಪ್ರಾಯ ಬೇಧಗಳನ್ನು (ಒಪಿನಿಯನ್ ಡಿಫರೆನ್ಸ್) ಹುಟ್ಟುಹಾಕಿದೆ.
ಭಾರತದ 13 ಜನರು, ಯಾರ ಆಯ್ಕೆಯನ್ನು ಹೆಚ್ಚಾಗಿ ಪ್ರಶ್ನಿಸಲಾಗಿಲ್ಲವೋ – ಅವರು ಹೀಗಿದ್ದಾರೆ. ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೇದಾರ್ ಜಾಧವ್, ಕೆಎಲ್ ರಾಹುಲ್, ಎಂ ಎಸ್ ಧೋನಿ, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್‍ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜ.

ವಿಜಯ್ ಶಂಕರ್
ಒಪಿನಿಯನ್ ಡಿಫರೆನ್ಸ್ ಅನ್ನು ಹುಟ್ಟುಹಾಕಿರುವ ಆ ಎರಡು ಹೆಸರುಗಳೆಂದರೆ ವಿಜಯ್ ಶಂಕರ್ ಹಾಗೂ ದಿನೇಶ್ ಕಾರ್ತಿಕ್‍ರದ್ದು. ಇಬ್ಬರ ಆಯ್ಕೆಗಳೂ ಸಹ ಒಂದು ಮಟ್ಟಿಗೆ ಅಚ್ಚರಿಯೇ ತಂದಿತು. ಅದಕ್ಕಿಂತ ಹೆಚ್ಚಾಗಿ ಆಶ್ಚರ್ಯವಾದ ಸಂಗತಿಯೇನೆಂದರೆ ಮಧ್ಯಮ ಕ್ರಮಾಂಕದ ಆಟಗಾರ ಅಂಬಾಟಿ ರಾಯುಡುರನ್ನು ಕೆಲ ತಿಂಗಳಗಳ ಮುಂಚೆ ವಿರಾಟ್ ಕೊಹ್ಲಿ ವಿಶ್ವಕಪ್ ತಂಡದಲ್ಲಿ ನಂಬರ್ 4 ಸ್ಥಾನದ ರೇಸ್‍ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದಿದ್ದರು. ಆದರೆ ರಾಯುಡುರವರು ಫಾರ್ಮ್ ಕಳೆದುಕೊಂಡ ನಂತರ ಆ ಸ್ಥಾನಕ್ಕೆ ಅವರು ಇರಬೇಕೋ ಇಲ್ಲವೋ ಎಂಬ ಪ್ರಶ್ನೆ ಉದ್ಭವವಾಯಿತು. ಹಾಗೂ ಕೊನೆಗೂ ಸಹ ಅವರನ್ನು ತಂಡದಿಂದ ತೆಗೆಯಲಾಯಿತು. ಈಗ ಅವರು 15ರ ತಂಡಕ್ಕೆ ಯಾರಾದರೂ ಗಾಯಗೊಂಡರೆ ಅವರ ಬದಲಿಗೆ ಪ್ರವೇಶಿಸುವ 5 ಆಟಗಾರರ ಪಟ್ಟಿಯಲ್ಲಿದ್ದಾರೆ.
ವಿಜಯ್ ಶಂಕರ್‍ರನ್ನು ಅಂಬಾಟಿ ರಾಯುಡುರವರ ಬದಲಿಗೆ ಆಯ್ಕೆ ಮಾಡಿದ್ದು ಸಮಂಜಸವಲ್ಲ ಎನ್ನುವುದು ಹಲವರ ಅಭಿಪ್ರಾಯ. ಯಾಕೆಂದರೆ ಅಂಬಾಟಿ ರಾಯುಡು ಒಬ್ಬ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್. ಏಕದಿನ ಕ್ರಿಕೆಟ್‍ನಲ್ಲಿ 47ರ ಸರಾಸರಿಯನ್ನು ಹೊಂದಿರುವ ರಾಯುಡು ಭಾರತದ ಪರ ಏಕದಿನ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸರಾಸರಿಯನ್ನು ಹೊಂದಿರುವ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಎಲ್ಲ ಬ್ಯಾಟ್ಸ್‍ಮನ್‍ಗಳ ಕೆರಿಯರ್‍ನಲ್ಲಿ ಕೆಲವೊಮ್ಮೆ ಫಾರ್ಮ್ ಇಲ್ಲದಿರುವುದು ಸಹಜ, ಆದರೆ ವಿಶ್ವಕಪ್‍ನಲ್ಲಿ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್ ಆಗಿ ಇಂಗ್ಲೆಂಡ್‍ನಲ್ಲಿ ಉತ್ತಮ ದಾಖಲೆ ಸಹ ಹೊಂದಿರುವ ಅಂಬಾಟಿ ರಾಯುಡುರನ್ನು ಆಡಿಸಬೇಕಿತ್ತು ಎಂಬುದು ಕೆಲವರ ಅಭಿಪ್ರಾಯ.

ಅಂಬಾಟಿ ರಾಯುಡು
ಆದರೆ ಆಯ್ಕೆಗಾರ ಎಂ.ಎಸ್.ಕೆ ಪ್ರಸಾದ್ ಹೇಳಿರುವ ಹಾಗೆ ವಿಜಯ್ ಶಂಕರ್ ಮೂರು ದೃಷ್ಟಿಕೋನಗಳಲ್ಲಿ (ಬ್ಯಾಟಿಂಗ್, ಫೀಲ್ಡಿಂಗ್ ಹಾಗೂ ಬೌಲಿಂಗ್) ತಂಡಕ್ಕೆ ಸಹಾಯ ಮಾಡುವುದರಿಂದ ಅವರನ್ನು ಅಂಬಾಟಿ ರಾಯುಡುರವರ ಬದಲಿಗೆ ಆಯ್ಕೆ ಮಾಡಲಾಯಿತು ಎಂಬುದು ಕೆಲವರ ಅಭಿಪ್ರಾಯ.
ನನ್ನ ಅಭಿಪ್ರಾಯದಲ್ಲಿ ಇವರಿಬ್ಬರ ಮಧ್ಯೆ ಅಂಬಾಟಿ ರಾಯುಡುರನ್ನು ಆಡಿಸಬೇಕಾಗಿತ್ತು. ಯಾಕೆಂದರೆ ವಿಜಯ್‍ರವರು ಮೂರು ವಿಭಾಗಗಳಲ್ಲಿ ತಂಡಕ್ಕೆ ಸಹಾಯ ಮಾಡಿದರೂ ಸಹ ಅಂಬಾಟಿರವರು ಒಬ್ಬ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್ ಆಗಿ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಫ್ಲೋಟರ್ ಆಗಿ ಕಾರ್ಯನಿರ್ವಹಿಸಬಲ್ಲರು. ಆದುದರಿಂದ ನನ್ನ ಪ್ರಕಾರ ಅಂಬಾಟಿ ರಾಯುಡುರವರು ಈ ಟೂರ್ನಿಯಲ್ಲಿ ಆಡಬೇಕಿತ್ತು.
ಇನ್ನೊಬ್ಬ ದಿನೇಶ್ ಕಾರ್ತಿಕ್ ಅವರ ಆಯ್ಕೆ ನನಗೆ ಚೂರೂ ಸಹ ಸಮಂಜಸವೆನಿಸಲಿಲ್ಲ. ಯಾಕೆಂದರೆ ತಂಡದಲ್ಲಿ ಧೋನಿಯವರು ವಿಕೆಟ್ ಕೀಪರ್ ಆಗಿದ್ದರು ಹಾಗೂ ಅವರಿಗೆ ಗಾಯವಾದರೆ ರಿಪ್ಲೇಸ್‍ಮೆಂಟ್ ಆಗಿ ಬೇರೆಯವರನ್ನು ಆಗ ಕಳಿಸಬಹುದಿತ್ತು ಅಥವಾ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡಬಹುದಿತ್ತು. ಯಾಕೆಂದರೆ ಧೋನಿಯವರು ನೀಡುವ ಮಾರ್ಗದರ್ಶನವನ್ನು ಯಾವ ಕೀಪರ್ ಸಹ ನೀಡಲಾಗುವುದಿಲ್ಲ. ಕಾರ್ತಿಕ್‍ರವರು ರಾಹುಲ್‍ಗಿಂತ ಸ್ವಲ್ಪ ಮಟ್ಟಿಗೆ ಮಾತ್ರ ಅತ್ಯುತ್ತಮ ಕೀಪರ್ ಎನ್ನುವುದು ನನ್ನ ಅಭಿಪ್ರಾಯ. ಇಬ್ಬರನ್ನೂ ಹೋಲಿಸಿದರೆ ರಾಹುಲ್ ಪ್ರಬುದ್ಧ ಬ್ಯಾಟ್ಸ್‍ಮನ್ ಸಹ. ಹಾಗಾಗಿ ನನಗೆ ದಿನೇಶ್ ಕಾರ್ತಿಕ್‍ರಿಗೆ ಯಾಕೆ ಸ್ಥಾನ ಸಿಕ್ಕಿತು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಕಾರ್ತಿಕ್‍ರ ಬದಲಿಗೆ ಅಂಬಾಟಿ ರಾಯುಡುರನ್ನು ಆಡಿಸಬಹುದಿತ್ತು. ಅಥವಾ ನಾನು ಹಿಂದೊಮ್ಮೆ ನನ್ನ ಲೇಖನದಲ್ಲಿ ಹೇಳಿದ ಹಾಗೆ ಆಜಿಂಕ್ಯ ರಹಾನೆಯವರನ್ನು ಆಡಿಸಬಹುದಾಗಿತ್ತು. ರಹಾನೆ, ರಾಯುಡು ಹಾಗೂ ಇನ್ನೊಬ್ಬ ಆಟಗಾರ ರೈನಾ, ಮೂವರೂ ಸಹ ಇಂಗ್ಲೆಂಡ್‍ನಲ್ಲಿ ಅನುಭವ ಹೊಂದಿದ್ದಾರೆ. ಆದುದರಿಂದ ದಿನೇಶ್‍ರ ಆಯ್ಕೆ ನನಗೆ ಗೊಂದಲವಾಗಿಯೇ ಉಳಿದಿದೆ.
ದಿನೇಶ್ ಕಾರ್ತಿಕ್
ತಂಡದ ಹೆಚ್ಚುವರಿ ಆಟಗಾರರಲ್ಲಿ ಅಕ್ಷರ್ ಪಟೇಲ್‍ರನ್ನು ಆಯ್ಕೆ ಮಾಡಿದ್ದು ನನಗಷ್ಟು ಸಮಂಜಸವೆನಿಸಲಿಲ್ಲ. ಯಾಕೆಂದರೆ ಅಕ್ಷರ್ ಇತ್ತೀಚಿಗೆ ಭಾರತ ತಂಡದಲ್ಲಿ ಆಡಿಲ್ಲ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಅವರೇನೂ ಅತ್ಯುತ್ತಮ ಫಾರ್ಮ್‍ನಲ್ಲಿಲ್ಲ. ಅವರ ಬದಲಿಗೆ ಈಗ ಇನ್ನಷ್ಟು ಪ್ರಬುದ್ಧರಾಗಿರುವ ರವಿಚಂದ್ರನ್ ಅಶ್ವಿನ್‍ರನ್ನು ಆಯ್ಕೆ ಮಾಡಬಹುದಾಗಿತ್ತು.
ಇನ್ನು ಇದೇ ಹೆಚ್ಚುವರಿ ಆಟಗಾರರಲ್ಲಿ ಆಯ್ಕೆಯಾಗಿರುವ ನವದೀಪ್ ಸೈನಿಯವರ ಬದಲಿಗೆ ದೀಪಕ್ ಚಹಾರ್ ಅಥವಾ ಅವರದ್ದೇ ರೀತಿಯ ಒಬ್ಬ ಸ್ವಿಂಗ್ ಬೌಲರ್‍ನ್ನು ಆಯ್ಕೆ ಮಾಡಬೇಕಾಗಿತ್ತು. ಯಾಕೆಂದರೆ ನವದೀಪ್ ವೇಗವಾಗಿ ಮಾತ್ರ ಬೌಲ್ ಮಾಡಬಲ್ಲರು. ಇಂಗ್ಲೆಂಡ್ ಕಂಡೀಷನ್‍ಗಳು ಹೆಚ್ಚಾಗಿ ಬೆಂಬಲ ನೀಡುವುದು ಸ್ವಿಂಗ್‍ಗೆ. ಹೀಗಾಗಿ ಭುವನೇಶ್ವರ್ ಕುಮಾರ್‍ಗೆ ತಕ್ಕ ಸಾಥ್ ಕೊಡಬಲ್ಲ ಒಬ್ಬ ಸ್ವಿಂಗ್ ವೇಗಿಯನ್ನು ಆಯ್ಕೆ ಮಾಡಬಹುದಾಗಿತ್ತು ಎಂಬುದು ನನ್ನ ಅಭಿಪ್ರಾಯ.
ಒಟ್ಟಾರೆಯಾಗಿ ಇಲ್ಲಿಯ ತನಕ ಘೋಷಣೆಯಾಗಿರುವ ತಂಡಗಳಲ್ಲಿ ಭಾರತ ಒಂದು ಮಟ್ಟಿಗೆ ಅತ್ಯುತ್ತಮ ಬ್ಯಾಲೆನ್ಸ್ ಹೊಂದಿರುವ ತಂಡವಾಗಿದೆ. ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಅತ್ಯಂತ ಉತ್ತಮ ಬೌಲಿಂಗ್ ಲೈನಪ್‍ಗಳನ್ನು ಕಟ್ಟಿಕೊಂಡಿವೆ ಹಾಗೂ ಇವೆರಡೂ ಲೈನಪ್‍ಗಳನ್ನು ಎದುರಿಸುವುದು ಇತರ ತಂಡಗಳಿಗೆ ದೊಡ್ಡ ಸವಾಲಾಗುವುದಂತೂ ಸರಿ. ಭಾರತ ವಿಶ್ವಕಪ್ ಗೆಲ್ಲಲಿ ಎಂಬುದು ನನ್ನ ಆಶಯ. ಈ ಆಶಯ ನಿಜವಾಗುತ್ತದಾ ಇಲ್ಲವಾ ಎಂಬುದು ನಾವು ನೋಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...