Homeಸಿನಿಮಾಕ್ರೀಡೆವಿಶ್ವಕಪ್ : ವಿಜಯ್ ಶಂಕರ್ ಸೇರಿಸಿದ್ಯಾಕೆ? ಅಂಬಾಟಿ ರಾಯುಡು ಬಿಟ್ಟಿದ್ಯಾಕೆ?

ವಿಶ್ವಕಪ್ : ವಿಜಯ್ ಶಂಕರ್ ಸೇರಿಸಿದ್ಯಾಕೆ? ಅಂಬಾಟಿ ರಾಯುಡು ಬಿಟ್ಟಿದ್ಯಾಕೆ?

- Advertisement -
| ಅಂತಃಕರಣ |
ಈ ಬಾರಿಯ ಭಾರತದ ವಿಶ್ವಕಪ್ ತಂಡದ ಸುಮಾರು 13 ಆಟಗಾರರು ಎಲ್ಲರೂ ನಿರೀಕ್ಷಿಸಿದವರೇ ಆಗಿದ್ದರು. ಆದರೆ ಉಳಿದ ಇಬ್ಬರ ಆಯ್ಕೆ ಕೆಲವು ಅಭಿಪ್ರಾಯ ಬೇಧಗಳನ್ನು (ಒಪಿನಿಯನ್ ಡಿಫರೆನ್ಸ್) ಹುಟ್ಟುಹಾಕಿದೆ.
ಭಾರತದ 13 ಜನರು, ಯಾರ ಆಯ್ಕೆಯನ್ನು ಹೆಚ್ಚಾಗಿ ಪ್ರಶ್ನಿಸಲಾಗಿಲ್ಲವೋ – ಅವರು ಹೀಗಿದ್ದಾರೆ. ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೇದಾರ್ ಜಾಧವ್, ಕೆಎಲ್ ರಾಹುಲ್, ಎಂ ಎಸ್ ಧೋನಿ, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್‍ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜ.

ವಿಜಯ್ ಶಂಕರ್
ಒಪಿನಿಯನ್ ಡಿಫರೆನ್ಸ್ ಅನ್ನು ಹುಟ್ಟುಹಾಕಿರುವ ಆ ಎರಡು ಹೆಸರುಗಳೆಂದರೆ ವಿಜಯ್ ಶಂಕರ್ ಹಾಗೂ ದಿನೇಶ್ ಕಾರ್ತಿಕ್‍ರದ್ದು. ಇಬ್ಬರ ಆಯ್ಕೆಗಳೂ ಸಹ ಒಂದು ಮಟ್ಟಿಗೆ ಅಚ್ಚರಿಯೇ ತಂದಿತು. ಅದಕ್ಕಿಂತ ಹೆಚ್ಚಾಗಿ ಆಶ್ಚರ್ಯವಾದ ಸಂಗತಿಯೇನೆಂದರೆ ಮಧ್ಯಮ ಕ್ರಮಾಂಕದ ಆಟಗಾರ ಅಂಬಾಟಿ ರಾಯುಡುರನ್ನು ಕೆಲ ತಿಂಗಳಗಳ ಮುಂಚೆ ವಿರಾಟ್ ಕೊಹ್ಲಿ ವಿಶ್ವಕಪ್ ತಂಡದಲ್ಲಿ ನಂಬರ್ 4 ಸ್ಥಾನದ ರೇಸ್‍ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದಿದ್ದರು. ಆದರೆ ರಾಯುಡುರವರು ಫಾರ್ಮ್ ಕಳೆದುಕೊಂಡ ನಂತರ ಆ ಸ್ಥಾನಕ್ಕೆ ಅವರು ಇರಬೇಕೋ ಇಲ್ಲವೋ ಎಂಬ ಪ್ರಶ್ನೆ ಉದ್ಭವವಾಯಿತು. ಹಾಗೂ ಕೊನೆಗೂ ಸಹ ಅವರನ್ನು ತಂಡದಿಂದ ತೆಗೆಯಲಾಯಿತು. ಈಗ ಅವರು 15ರ ತಂಡಕ್ಕೆ ಯಾರಾದರೂ ಗಾಯಗೊಂಡರೆ ಅವರ ಬದಲಿಗೆ ಪ್ರವೇಶಿಸುವ 5 ಆಟಗಾರರ ಪಟ್ಟಿಯಲ್ಲಿದ್ದಾರೆ.
ವಿಜಯ್ ಶಂಕರ್‍ರನ್ನು ಅಂಬಾಟಿ ರಾಯುಡುರವರ ಬದಲಿಗೆ ಆಯ್ಕೆ ಮಾಡಿದ್ದು ಸಮಂಜಸವಲ್ಲ ಎನ್ನುವುದು ಹಲವರ ಅಭಿಪ್ರಾಯ. ಯಾಕೆಂದರೆ ಅಂಬಾಟಿ ರಾಯುಡು ಒಬ್ಬ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್. ಏಕದಿನ ಕ್ರಿಕೆಟ್‍ನಲ್ಲಿ 47ರ ಸರಾಸರಿಯನ್ನು ಹೊಂದಿರುವ ರಾಯುಡು ಭಾರತದ ಪರ ಏಕದಿನ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸರಾಸರಿಯನ್ನು ಹೊಂದಿರುವ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಎಲ್ಲ ಬ್ಯಾಟ್ಸ್‍ಮನ್‍ಗಳ ಕೆರಿಯರ್‍ನಲ್ಲಿ ಕೆಲವೊಮ್ಮೆ ಫಾರ್ಮ್ ಇಲ್ಲದಿರುವುದು ಸಹಜ, ಆದರೆ ವಿಶ್ವಕಪ್‍ನಲ್ಲಿ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್ ಆಗಿ ಇಂಗ್ಲೆಂಡ್‍ನಲ್ಲಿ ಉತ್ತಮ ದಾಖಲೆ ಸಹ ಹೊಂದಿರುವ ಅಂಬಾಟಿ ರಾಯುಡುರನ್ನು ಆಡಿಸಬೇಕಿತ್ತು ಎಂಬುದು ಕೆಲವರ ಅಭಿಪ್ರಾಯ.

ಅಂಬಾಟಿ ರಾಯುಡು
ಆದರೆ ಆಯ್ಕೆಗಾರ ಎಂ.ಎಸ್.ಕೆ ಪ್ರಸಾದ್ ಹೇಳಿರುವ ಹಾಗೆ ವಿಜಯ್ ಶಂಕರ್ ಮೂರು ದೃಷ್ಟಿಕೋನಗಳಲ್ಲಿ (ಬ್ಯಾಟಿಂಗ್, ಫೀಲ್ಡಿಂಗ್ ಹಾಗೂ ಬೌಲಿಂಗ್) ತಂಡಕ್ಕೆ ಸಹಾಯ ಮಾಡುವುದರಿಂದ ಅವರನ್ನು ಅಂಬಾಟಿ ರಾಯುಡುರವರ ಬದಲಿಗೆ ಆಯ್ಕೆ ಮಾಡಲಾಯಿತು ಎಂಬುದು ಕೆಲವರ ಅಭಿಪ್ರಾಯ.
ನನ್ನ ಅಭಿಪ್ರಾಯದಲ್ಲಿ ಇವರಿಬ್ಬರ ಮಧ್ಯೆ ಅಂಬಾಟಿ ರಾಯುಡುರನ್ನು ಆಡಿಸಬೇಕಾಗಿತ್ತು. ಯಾಕೆಂದರೆ ವಿಜಯ್‍ರವರು ಮೂರು ವಿಭಾಗಗಳಲ್ಲಿ ತಂಡಕ್ಕೆ ಸಹಾಯ ಮಾಡಿದರೂ ಸಹ ಅಂಬಾಟಿರವರು ಒಬ್ಬ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್ ಆಗಿ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಫ್ಲೋಟರ್ ಆಗಿ ಕಾರ್ಯನಿರ್ವಹಿಸಬಲ್ಲರು. ಆದುದರಿಂದ ನನ್ನ ಪ್ರಕಾರ ಅಂಬಾಟಿ ರಾಯುಡುರವರು ಈ ಟೂರ್ನಿಯಲ್ಲಿ ಆಡಬೇಕಿತ್ತು.
ಇನ್ನೊಬ್ಬ ದಿನೇಶ್ ಕಾರ್ತಿಕ್ ಅವರ ಆಯ್ಕೆ ನನಗೆ ಚೂರೂ ಸಹ ಸಮಂಜಸವೆನಿಸಲಿಲ್ಲ. ಯಾಕೆಂದರೆ ತಂಡದಲ್ಲಿ ಧೋನಿಯವರು ವಿಕೆಟ್ ಕೀಪರ್ ಆಗಿದ್ದರು ಹಾಗೂ ಅವರಿಗೆ ಗಾಯವಾದರೆ ರಿಪ್ಲೇಸ್‍ಮೆಂಟ್ ಆಗಿ ಬೇರೆಯವರನ್ನು ಆಗ ಕಳಿಸಬಹುದಿತ್ತು ಅಥವಾ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡಬಹುದಿತ್ತು. ಯಾಕೆಂದರೆ ಧೋನಿಯವರು ನೀಡುವ ಮಾರ್ಗದರ್ಶನವನ್ನು ಯಾವ ಕೀಪರ್ ಸಹ ನೀಡಲಾಗುವುದಿಲ್ಲ. ಕಾರ್ತಿಕ್‍ರವರು ರಾಹುಲ್‍ಗಿಂತ ಸ್ವಲ್ಪ ಮಟ್ಟಿಗೆ ಮಾತ್ರ ಅತ್ಯುತ್ತಮ ಕೀಪರ್ ಎನ್ನುವುದು ನನ್ನ ಅಭಿಪ್ರಾಯ. ಇಬ್ಬರನ್ನೂ ಹೋಲಿಸಿದರೆ ರಾಹುಲ್ ಪ್ರಬುದ್ಧ ಬ್ಯಾಟ್ಸ್‍ಮನ್ ಸಹ. ಹಾಗಾಗಿ ನನಗೆ ದಿನೇಶ್ ಕಾರ್ತಿಕ್‍ರಿಗೆ ಯಾಕೆ ಸ್ಥಾನ ಸಿಕ್ಕಿತು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಕಾರ್ತಿಕ್‍ರ ಬದಲಿಗೆ ಅಂಬಾಟಿ ರಾಯುಡುರನ್ನು ಆಡಿಸಬಹುದಿತ್ತು. ಅಥವಾ ನಾನು ಹಿಂದೊಮ್ಮೆ ನನ್ನ ಲೇಖನದಲ್ಲಿ ಹೇಳಿದ ಹಾಗೆ ಆಜಿಂಕ್ಯ ರಹಾನೆಯವರನ್ನು ಆಡಿಸಬಹುದಾಗಿತ್ತು. ರಹಾನೆ, ರಾಯುಡು ಹಾಗೂ ಇನ್ನೊಬ್ಬ ಆಟಗಾರ ರೈನಾ, ಮೂವರೂ ಸಹ ಇಂಗ್ಲೆಂಡ್‍ನಲ್ಲಿ ಅನುಭವ ಹೊಂದಿದ್ದಾರೆ. ಆದುದರಿಂದ ದಿನೇಶ್‍ರ ಆಯ್ಕೆ ನನಗೆ ಗೊಂದಲವಾಗಿಯೇ ಉಳಿದಿದೆ.
ದಿನೇಶ್ ಕಾರ್ತಿಕ್
ತಂಡದ ಹೆಚ್ಚುವರಿ ಆಟಗಾರರಲ್ಲಿ ಅಕ್ಷರ್ ಪಟೇಲ್‍ರನ್ನು ಆಯ್ಕೆ ಮಾಡಿದ್ದು ನನಗಷ್ಟು ಸಮಂಜಸವೆನಿಸಲಿಲ್ಲ. ಯಾಕೆಂದರೆ ಅಕ್ಷರ್ ಇತ್ತೀಚಿಗೆ ಭಾರತ ತಂಡದಲ್ಲಿ ಆಡಿಲ್ಲ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಅವರೇನೂ ಅತ್ಯುತ್ತಮ ಫಾರ್ಮ್‍ನಲ್ಲಿಲ್ಲ. ಅವರ ಬದಲಿಗೆ ಈಗ ಇನ್ನಷ್ಟು ಪ್ರಬುದ್ಧರಾಗಿರುವ ರವಿಚಂದ್ರನ್ ಅಶ್ವಿನ್‍ರನ್ನು ಆಯ್ಕೆ ಮಾಡಬಹುದಾಗಿತ್ತು.
ಇನ್ನು ಇದೇ ಹೆಚ್ಚುವರಿ ಆಟಗಾರರಲ್ಲಿ ಆಯ್ಕೆಯಾಗಿರುವ ನವದೀಪ್ ಸೈನಿಯವರ ಬದಲಿಗೆ ದೀಪಕ್ ಚಹಾರ್ ಅಥವಾ ಅವರದ್ದೇ ರೀತಿಯ ಒಬ್ಬ ಸ್ವಿಂಗ್ ಬೌಲರ್‍ನ್ನು ಆಯ್ಕೆ ಮಾಡಬೇಕಾಗಿತ್ತು. ಯಾಕೆಂದರೆ ನವದೀಪ್ ವೇಗವಾಗಿ ಮಾತ್ರ ಬೌಲ್ ಮಾಡಬಲ್ಲರು. ಇಂಗ್ಲೆಂಡ್ ಕಂಡೀಷನ್‍ಗಳು ಹೆಚ್ಚಾಗಿ ಬೆಂಬಲ ನೀಡುವುದು ಸ್ವಿಂಗ್‍ಗೆ. ಹೀಗಾಗಿ ಭುವನೇಶ್ವರ್ ಕುಮಾರ್‍ಗೆ ತಕ್ಕ ಸಾಥ್ ಕೊಡಬಲ್ಲ ಒಬ್ಬ ಸ್ವಿಂಗ್ ವೇಗಿಯನ್ನು ಆಯ್ಕೆ ಮಾಡಬಹುದಾಗಿತ್ತು ಎಂಬುದು ನನ್ನ ಅಭಿಪ್ರಾಯ.
ಒಟ್ಟಾರೆಯಾಗಿ ಇಲ್ಲಿಯ ತನಕ ಘೋಷಣೆಯಾಗಿರುವ ತಂಡಗಳಲ್ಲಿ ಭಾರತ ಒಂದು ಮಟ್ಟಿಗೆ ಅತ್ಯುತ್ತಮ ಬ್ಯಾಲೆನ್ಸ್ ಹೊಂದಿರುವ ತಂಡವಾಗಿದೆ. ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಅತ್ಯಂತ ಉತ್ತಮ ಬೌಲಿಂಗ್ ಲೈನಪ್‍ಗಳನ್ನು ಕಟ್ಟಿಕೊಂಡಿವೆ ಹಾಗೂ ಇವೆರಡೂ ಲೈನಪ್‍ಗಳನ್ನು ಎದುರಿಸುವುದು ಇತರ ತಂಡಗಳಿಗೆ ದೊಡ್ಡ ಸವಾಲಾಗುವುದಂತೂ ಸರಿ. ಭಾರತ ವಿಶ್ವಕಪ್ ಗೆಲ್ಲಲಿ ಎಂಬುದು ನನ್ನ ಆಶಯ. ಈ ಆಶಯ ನಿಜವಾಗುತ್ತದಾ ಇಲ್ಲವಾ ಎಂಬುದು ನಾವು ನೋಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...