Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

ವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

- Advertisement -
- Advertisement -

2019ರ ವಿಶ್ವಕಪ್ ಕ್ರಿಕೆಟ್ ಮುಗಿದಿದೆ. ಇಂಗ್ಲೆಂಡ್ ವಿಜಯಿಯಾದರೆ, ನ್ಯೂಜಿಲೆಂಡ್ ರನ್ನರ್ ಅಪ್ ಆಗಿದೆ. ಈಗ ಐಸಿಸಿಯು ಟೀಮ್ ಆಫ್ ಟೂರ್ನಿಮೆಂಟ್ ಅನ್ನು ಪ್ರಕಟಿಸಿದೆ. ಅಂದರೆ ಈ ವಿಶ್ವಕಪ್ ನಲ್ಲಿ ಭಾಗವಹಿಸಿದ ಎಲ್ಲಾ ರಾಷ್ಟ್ರಗಳ ಅತ್ಯುತ್ತಮ ಆಟಗಾರರನ್ನು ಒಳಗೊಂಡ 11+1 ಜನರ ತಂಡ. ಇದರಲ್ಲಿಯೂ ನಾಯಕ, ಉಪನಾಯಕ, ಆರಂಭಿಕ ಆಟಗಾರರು, ಕೀಪರ್, ಫೀಲ್ಡರ್ ಮತ್ತು ಬೌಲರ್‍ಗಳು ಇರುತ್ತಾರೆ.
ಈ 12ರ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಮತ್ತು ಬೌಲರ್ ಜಸ್ಪ್ರಿತ್ ಬೂರ್ಮಾ ಸ್ಥಾನ ಪಡೆದಿದ್ದಾರೆ.

ಆದರೆ ಉತ್ತಮ ಆಟವಾಡಿದ ವಿರಾಟ್ ಕೊಹ್ಲಿಗೆ ಪಟ್ಟಿಯಲ್ಲಿ ಸ್ಥಾನ ಲಭ್ಯವಾಗಿಲ್ಲ. ಅವರ ಸ್ಥಾನವನ್ನು ಇಂಗ್ಲೆಂಡಿನ ಆರಂಭಿಕ ಆಟಗಾರ ಜೇಸನ್ ರಾಯ್ ಆಕ್ರಮಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ವಿರಾಟ್ ಮತ್ತು ಜೇಸನ್ ರಾಯ್ ಇಬ್ಬರೂ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ. ಆದರೆ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿ ಪ್ರದರ್ಶನವಿದ್ದರೆ ಕೊಹ್ಲಿ 9 ಪಂದ್ಯಗಳಿಂದ 55.38ರ ಸರಾಸರಿ ಪ್ರದರ್ಶನವಿದೆ. ಹಾಗಾಗಿ ಕೊಹ್ಲಿಯನ್ನು ಹಿಂದಿಕ್ಕಿ ಜೇಸನ್ ರಾಯ್ ಪಟ್ಟಿ ಸೇರಿದ್ದಾರೆ.

ಪಟ್ಟಿಯಲ್ಲಿರುವ ಆಟಗಾರರು ಮತ್ತು ಅವರ ಸಾಧನೆಗಳ ನೋಟ

1 ರೋಹಿತ್ ಶರ್ಮಾ: ಭಾರತದ ಆರಂಭಿಕ ಬ್ಯಾಟ್ಸ್‍ಮನ್ ಹಿಟ್ ಮ್ಯಾನ್ ಎಂದೇ ಖ್ಯಾತರಾದ ರೋಹಿತ್ ಟೂರ್ನಿಯ ಆರಂಭಿಕ ಆಟಗಾರರಾಗಿದ್ದಾರೆ. ಉಪನಾಯಕನ ಸ್ಥಾನವನ್ನು ಪಡೆದಿದ್ದಾರೆ. ಒಟ್ಟು ಟೂರ್ನಿಯಲ್ಲಿ 9 ಪಂದ್ಯಗಳಿಂದ ಅತ್ಯಧಿಕ 648 ರನ್ ಸಿಡಿಸಿರುವ ರೋಹಿತ್ 5 ಶತಕ ಮತ್ತು 1 ಅರ್ಧ ಶತಕ ದಾಖಲಿಸಿದ್ದಾರೆ. ಶೇ.80ರ ಸರಾಸರಿ ಇದೆ.

2 ಜೇಸನ್ ರಾಯ್: ಇಂಗ್ಲೆಂಡ್ ತಂಡದ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿಯಲ್ಲಿ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ.

3 ಕೇನ್ ವಿಲಿಯಮ್ಸನ್: ಮೂರನೇ ಬ್ಯಾಟ್ಸ್ ಮನ್ ಆಗಿ ಸ್ಥಾನ ಪಡೆಯುವ ಮೂಲಕ ನ್ಯೂಜಿಲೆಂಡ್‍ನ ನಾಯಕ ಕೇನ್ ವಿಲಿಯಮ್ಸನ್ ಟೀಮ್ ಆಫ್ ಟೂರ್ನಿಮೆಂಟ್‍ನ ನಾಯಕನೂ ಆಗಿದ್ದಾರೆ. ಶಾಂತ ಸ್ವಭಾವದ ತಾಳ್ಮೆಯ ಮೂರ್ತಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. 82.57ರ ಸರಾಸರಿಯಲಿ 578 ರನ್ ಗಳಿಸಿದ್ದಾರೆ

4. ಜ್ಯೂ ರೂಟ್: ಇಂಗ್ಲೆಂಡ್ ತಂಡದ ಜ್ಯೂ ರೂಟ್ 61.77 ಸರಾಸರಿಯಲ್ಲಿ 556 ರನ್ ಸಿಡಿಸಿದ್ದಾರೆ.

5 ಶಕೀಬ್ ಅಲ್ ಹಸನ್: ಬಾಂಗ್ಲಾದೇಶದ ಉದಯೋನ್ಮುಖ ಆಟಗಾರನಾದ ಶಕೀಬ್ 86.57ರ ಸರಾಸರಿಯಲ್ಲಿ 606 ರನ್ ಸಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೊತೆಗೆ 11 ವಿಕೆಟ್ ಸಹ ಕಬಳಿಸಿ ಉತ್ತಮ ಆಲ್‍ರೌಂಡರ್ ಎನಿಸಿಕೊಂಡಿದ್ದಾರೆ.

6 ಬೆನ್ ಸ್ಟೋಕ್ಸ್ : ಇಂಗ್ಲೆಂಡ್‍ನ ಫೈನಲ್ ಪಂದ್ಯದ ಹೀರೋ ಆದ ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್ 66.42ರ ಸರಾಸರಿಯಲಿ 465 ರನ್ ಸಿಡಿಸಿದ್ದಲ್ಲದೇ, 7 ವಿಕೆಟ್ ಪಡೆದಿದ್ದಾರೆ.

7 ಅಲೆಕ್ಸ್ ಕ್ಯಾರಿ: ಆಸ್ಟ್ರೇಲಿಯಾ ವಿಕೇಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಈ ತಂಡದ ಕೀಪರ್ ಸ್ಥಾನ ಲಭಿಸಿದೆ. ಒಟ್ಟು ಟೂರ್ನಿಯಲ್ಲಿ 20 ಔಟ್ ಗಳನ್ನು ಮಾಡಿರುವ ಇವರು 375 ರನ್ ಸಹ ಸಿಡಿಸಿದ್ದಾರೆ.

8 ಮಿಚೆಲ್ ಸ್ಟಾರ್ಕ್: ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅತ್ಯುತ್ತಮ ಬೌಲರ್ ಎನಿಸಿದ್ದಾರೆ. 10 ಪಂದ್ಯಗಳಿಂದ 27 ವಿಕೆಟ್ ಗಳಿಸಿ ಸಾಧನೆ ಮಾಡಿದ್ದಾರೆ.

9 ಜೋಫ್ರಾ ಆರ್ಚರ್: ಫೈನಲ್ ಪಂದ್ಯದ ಸೂಪರ್ ಓವರ್ ಬಾಲ್ ಮಾಡಿ ಗೆಲುವು ತಂದುಕೊಟ್ಟ ಇಂಗ್ಲೆಂಡ್‍ನ ಜೋಫ್ರಾ ಆರ್ಚರ್ ಒಟ್ಟು 20 ವಿಕೆಟ್ ಕಬಳಿಸಿದ್ದಾರೆ.

10 ಲಾಕೀ ಫರ್ಗೂಸನ್: ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಭಾರತದ ವಿರುದ್ಧ ಸೆಮಿಫೈನಲ್‍ನಲ್ಲಿ ಉತ್ತಮ ಪ್ರದರ್ಶನ ತೋರಿ ಫೈನಲ್ ಪ್ರವೇಶಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಒಟ್ಟು 21 ವಿಕೆಟ್ ಗಳಿಸಿದ್ದಾರೆ.

11 ಜಸ್ಪ್ರೀತ್ ಬೂಮ್ರ: ಭಾರತದ ವೇಗಿ ಜಸ್ಪ್ರೀತ್ ಬೂಮ್ರ 18 ವಿಕೆಟ್ ಗಳಿಸಿ ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಒಟ್ಟು 11 ಜನರಲ್ಲಿ ಇಂಗ್ಲೆಂಡ್ 4 ಆಟಗಾರರು, ಭಾರತ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ ಇಬ್ಬರು ಆಟಗಾರರು ಮತ್ತ ಬಾಂಗ್ಲಾದೇಶದ ಒಬ್ಬ ಆಟಗಾರರು ಸೇರಿದ್ದಾರೆ. 12ನೇ ಆಟಗಾರನಾಗಿ ನ್ಯೂಜಿಲೆಂಡ್ ನ ಟ್ರೆಂಟ್ ಬೋಲ್ಟ್ ಅನ್ನು ಆರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...