Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

ವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

- Advertisement -
- Advertisement -

2019ರ ವಿಶ್ವಕಪ್ ಕ್ರಿಕೆಟ್ ಮುಗಿದಿದೆ. ಇಂಗ್ಲೆಂಡ್ ವಿಜಯಿಯಾದರೆ, ನ್ಯೂಜಿಲೆಂಡ್ ರನ್ನರ್ ಅಪ್ ಆಗಿದೆ. ಈಗ ಐಸಿಸಿಯು ಟೀಮ್ ಆಫ್ ಟೂರ್ನಿಮೆಂಟ್ ಅನ್ನು ಪ್ರಕಟಿಸಿದೆ. ಅಂದರೆ ಈ ವಿಶ್ವಕಪ್ ನಲ್ಲಿ ಭಾಗವಹಿಸಿದ ಎಲ್ಲಾ ರಾಷ್ಟ್ರಗಳ ಅತ್ಯುತ್ತಮ ಆಟಗಾರರನ್ನು ಒಳಗೊಂಡ 11+1 ಜನರ ತಂಡ. ಇದರಲ್ಲಿಯೂ ನಾಯಕ, ಉಪನಾಯಕ, ಆರಂಭಿಕ ಆಟಗಾರರು, ಕೀಪರ್, ಫೀಲ್ಡರ್ ಮತ್ತು ಬೌಲರ್‍ಗಳು ಇರುತ್ತಾರೆ.
ಈ 12ರ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಮತ್ತು ಬೌಲರ್ ಜಸ್ಪ್ರಿತ್ ಬೂರ್ಮಾ ಸ್ಥಾನ ಪಡೆದಿದ್ದಾರೆ.

ಆದರೆ ಉತ್ತಮ ಆಟವಾಡಿದ ವಿರಾಟ್ ಕೊಹ್ಲಿಗೆ ಪಟ್ಟಿಯಲ್ಲಿ ಸ್ಥಾನ ಲಭ್ಯವಾಗಿಲ್ಲ. ಅವರ ಸ್ಥಾನವನ್ನು ಇಂಗ್ಲೆಂಡಿನ ಆರಂಭಿಕ ಆಟಗಾರ ಜೇಸನ್ ರಾಯ್ ಆಕ್ರಮಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ವಿರಾಟ್ ಮತ್ತು ಜೇಸನ್ ರಾಯ್ ಇಬ್ಬರೂ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ. ಆದರೆ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿ ಪ್ರದರ್ಶನವಿದ್ದರೆ ಕೊಹ್ಲಿ 9 ಪಂದ್ಯಗಳಿಂದ 55.38ರ ಸರಾಸರಿ ಪ್ರದರ್ಶನವಿದೆ. ಹಾಗಾಗಿ ಕೊಹ್ಲಿಯನ್ನು ಹಿಂದಿಕ್ಕಿ ಜೇಸನ್ ರಾಯ್ ಪಟ್ಟಿ ಸೇರಿದ್ದಾರೆ.

ಪಟ್ಟಿಯಲ್ಲಿರುವ ಆಟಗಾರರು ಮತ್ತು ಅವರ ಸಾಧನೆಗಳ ನೋಟ

1 ರೋಹಿತ್ ಶರ್ಮಾ: ಭಾರತದ ಆರಂಭಿಕ ಬ್ಯಾಟ್ಸ್‍ಮನ್ ಹಿಟ್ ಮ್ಯಾನ್ ಎಂದೇ ಖ್ಯಾತರಾದ ರೋಹಿತ್ ಟೂರ್ನಿಯ ಆರಂಭಿಕ ಆಟಗಾರರಾಗಿದ್ದಾರೆ. ಉಪನಾಯಕನ ಸ್ಥಾನವನ್ನು ಪಡೆದಿದ್ದಾರೆ. ಒಟ್ಟು ಟೂರ್ನಿಯಲ್ಲಿ 9 ಪಂದ್ಯಗಳಿಂದ ಅತ್ಯಧಿಕ 648 ರನ್ ಸಿಡಿಸಿರುವ ರೋಹಿತ್ 5 ಶತಕ ಮತ್ತು 1 ಅರ್ಧ ಶತಕ ದಾಖಲಿಸಿದ್ದಾರೆ. ಶೇ.80ರ ಸರಾಸರಿ ಇದೆ.

2 ಜೇಸನ್ ರಾಯ್: ಇಂಗ್ಲೆಂಡ್ ತಂಡದ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿಯಲ್ಲಿ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ.

3 ಕೇನ್ ವಿಲಿಯಮ್ಸನ್: ಮೂರನೇ ಬ್ಯಾಟ್ಸ್ ಮನ್ ಆಗಿ ಸ್ಥಾನ ಪಡೆಯುವ ಮೂಲಕ ನ್ಯೂಜಿಲೆಂಡ್‍ನ ನಾಯಕ ಕೇನ್ ವಿಲಿಯಮ್ಸನ್ ಟೀಮ್ ಆಫ್ ಟೂರ್ನಿಮೆಂಟ್‍ನ ನಾಯಕನೂ ಆಗಿದ್ದಾರೆ. ಶಾಂತ ಸ್ವಭಾವದ ತಾಳ್ಮೆಯ ಮೂರ್ತಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. 82.57ರ ಸರಾಸರಿಯಲಿ 578 ರನ್ ಗಳಿಸಿದ್ದಾರೆ

4. ಜ್ಯೂ ರೂಟ್: ಇಂಗ್ಲೆಂಡ್ ತಂಡದ ಜ್ಯೂ ರೂಟ್ 61.77 ಸರಾಸರಿಯಲ್ಲಿ 556 ರನ್ ಸಿಡಿಸಿದ್ದಾರೆ.

5 ಶಕೀಬ್ ಅಲ್ ಹಸನ್: ಬಾಂಗ್ಲಾದೇಶದ ಉದಯೋನ್ಮುಖ ಆಟಗಾರನಾದ ಶಕೀಬ್ 86.57ರ ಸರಾಸರಿಯಲ್ಲಿ 606 ರನ್ ಸಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೊತೆಗೆ 11 ವಿಕೆಟ್ ಸಹ ಕಬಳಿಸಿ ಉತ್ತಮ ಆಲ್‍ರೌಂಡರ್ ಎನಿಸಿಕೊಂಡಿದ್ದಾರೆ.

6 ಬೆನ್ ಸ್ಟೋಕ್ಸ್ : ಇಂಗ್ಲೆಂಡ್‍ನ ಫೈನಲ್ ಪಂದ್ಯದ ಹೀರೋ ಆದ ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್ 66.42ರ ಸರಾಸರಿಯಲಿ 465 ರನ್ ಸಿಡಿಸಿದ್ದಲ್ಲದೇ, 7 ವಿಕೆಟ್ ಪಡೆದಿದ್ದಾರೆ.

7 ಅಲೆಕ್ಸ್ ಕ್ಯಾರಿ: ಆಸ್ಟ್ರೇಲಿಯಾ ವಿಕೇಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಈ ತಂಡದ ಕೀಪರ್ ಸ್ಥಾನ ಲಭಿಸಿದೆ. ಒಟ್ಟು ಟೂರ್ನಿಯಲ್ಲಿ 20 ಔಟ್ ಗಳನ್ನು ಮಾಡಿರುವ ಇವರು 375 ರನ್ ಸಹ ಸಿಡಿಸಿದ್ದಾರೆ.

8 ಮಿಚೆಲ್ ಸ್ಟಾರ್ಕ್: ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅತ್ಯುತ್ತಮ ಬೌಲರ್ ಎನಿಸಿದ್ದಾರೆ. 10 ಪಂದ್ಯಗಳಿಂದ 27 ವಿಕೆಟ್ ಗಳಿಸಿ ಸಾಧನೆ ಮಾಡಿದ್ದಾರೆ.

9 ಜೋಫ್ರಾ ಆರ್ಚರ್: ಫೈನಲ್ ಪಂದ್ಯದ ಸೂಪರ್ ಓವರ್ ಬಾಲ್ ಮಾಡಿ ಗೆಲುವು ತಂದುಕೊಟ್ಟ ಇಂಗ್ಲೆಂಡ್‍ನ ಜೋಫ್ರಾ ಆರ್ಚರ್ ಒಟ್ಟು 20 ವಿಕೆಟ್ ಕಬಳಿಸಿದ್ದಾರೆ.

10 ಲಾಕೀ ಫರ್ಗೂಸನ್: ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಭಾರತದ ವಿರುದ್ಧ ಸೆಮಿಫೈನಲ್‍ನಲ್ಲಿ ಉತ್ತಮ ಪ್ರದರ್ಶನ ತೋರಿ ಫೈನಲ್ ಪ್ರವೇಶಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಒಟ್ಟು 21 ವಿಕೆಟ್ ಗಳಿಸಿದ್ದಾರೆ.

11 ಜಸ್ಪ್ರೀತ್ ಬೂಮ್ರ: ಭಾರತದ ವೇಗಿ ಜಸ್ಪ್ರೀತ್ ಬೂಮ್ರ 18 ವಿಕೆಟ್ ಗಳಿಸಿ ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಒಟ್ಟು 11 ಜನರಲ್ಲಿ ಇಂಗ್ಲೆಂಡ್ 4 ಆಟಗಾರರು, ಭಾರತ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ ಇಬ್ಬರು ಆಟಗಾರರು ಮತ್ತ ಬಾಂಗ್ಲಾದೇಶದ ಒಬ್ಬ ಆಟಗಾರರು ಸೇರಿದ್ದಾರೆ. 12ನೇ ಆಟಗಾರನಾಗಿ ನ್ಯೂಜಿಲೆಂಡ್ ನ ಟ್ರೆಂಟ್ ಬೋಲ್ಟ್ ಅನ್ನು ಆರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...