Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

ವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

- Advertisement -
- Advertisement -

2019ರ ವಿಶ್ವಕಪ್ ಕ್ರಿಕೆಟ್ ಮುಗಿದಿದೆ. ಇಂಗ್ಲೆಂಡ್ ವಿಜಯಿಯಾದರೆ, ನ್ಯೂಜಿಲೆಂಡ್ ರನ್ನರ್ ಅಪ್ ಆಗಿದೆ. ಈಗ ಐಸಿಸಿಯು ಟೀಮ್ ಆಫ್ ಟೂರ್ನಿಮೆಂಟ್ ಅನ್ನು ಪ್ರಕಟಿಸಿದೆ. ಅಂದರೆ ಈ ವಿಶ್ವಕಪ್ ನಲ್ಲಿ ಭಾಗವಹಿಸಿದ ಎಲ್ಲಾ ರಾಷ್ಟ್ರಗಳ ಅತ್ಯುತ್ತಮ ಆಟಗಾರರನ್ನು ಒಳಗೊಂಡ 11+1 ಜನರ ತಂಡ. ಇದರಲ್ಲಿಯೂ ನಾಯಕ, ಉಪನಾಯಕ, ಆರಂಭಿಕ ಆಟಗಾರರು, ಕೀಪರ್, ಫೀಲ್ಡರ್ ಮತ್ತು ಬೌಲರ್‍ಗಳು ಇರುತ್ತಾರೆ.
ಈ 12ರ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಮತ್ತು ಬೌಲರ್ ಜಸ್ಪ್ರಿತ್ ಬೂರ್ಮಾ ಸ್ಥಾನ ಪಡೆದಿದ್ದಾರೆ.

ಆದರೆ ಉತ್ತಮ ಆಟವಾಡಿದ ವಿರಾಟ್ ಕೊಹ್ಲಿಗೆ ಪಟ್ಟಿಯಲ್ಲಿ ಸ್ಥಾನ ಲಭ್ಯವಾಗಿಲ್ಲ. ಅವರ ಸ್ಥಾನವನ್ನು ಇಂಗ್ಲೆಂಡಿನ ಆರಂಭಿಕ ಆಟಗಾರ ಜೇಸನ್ ರಾಯ್ ಆಕ್ರಮಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ವಿರಾಟ್ ಮತ್ತು ಜೇಸನ್ ರಾಯ್ ಇಬ್ಬರೂ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ. ಆದರೆ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿ ಪ್ರದರ್ಶನವಿದ್ದರೆ ಕೊಹ್ಲಿ 9 ಪಂದ್ಯಗಳಿಂದ 55.38ರ ಸರಾಸರಿ ಪ್ರದರ್ಶನವಿದೆ. ಹಾಗಾಗಿ ಕೊಹ್ಲಿಯನ್ನು ಹಿಂದಿಕ್ಕಿ ಜೇಸನ್ ರಾಯ್ ಪಟ್ಟಿ ಸೇರಿದ್ದಾರೆ.

ಪಟ್ಟಿಯಲ್ಲಿರುವ ಆಟಗಾರರು ಮತ್ತು ಅವರ ಸಾಧನೆಗಳ ನೋಟ

1 ರೋಹಿತ್ ಶರ್ಮಾ: ಭಾರತದ ಆರಂಭಿಕ ಬ್ಯಾಟ್ಸ್‍ಮನ್ ಹಿಟ್ ಮ್ಯಾನ್ ಎಂದೇ ಖ್ಯಾತರಾದ ರೋಹಿತ್ ಟೂರ್ನಿಯ ಆರಂಭಿಕ ಆಟಗಾರರಾಗಿದ್ದಾರೆ. ಉಪನಾಯಕನ ಸ್ಥಾನವನ್ನು ಪಡೆದಿದ್ದಾರೆ. ಒಟ್ಟು ಟೂರ್ನಿಯಲ್ಲಿ 9 ಪಂದ್ಯಗಳಿಂದ ಅತ್ಯಧಿಕ 648 ರನ್ ಸಿಡಿಸಿರುವ ರೋಹಿತ್ 5 ಶತಕ ಮತ್ತು 1 ಅರ್ಧ ಶತಕ ದಾಖಲಿಸಿದ್ದಾರೆ. ಶೇ.80ರ ಸರಾಸರಿ ಇದೆ.

2 ಜೇಸನ್ ರಾಯ್: ಇಂಗ್ಲೆಂಡ್ ತಂಡದ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿಯಲ್ಲಿ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ.

3 ಕೇನ್ ವಿಲಿಯಮ್ಸನ್: ಮೂರನೇ ಬ್ಯಾಟ್ಸ್ ಮನ್ ಆಗಿ ಸ್ಥಾನ ಪಡೆಯುವ ಮೂಲಕ ನ್ಯೂಜಿಲೆಂಡ್‍ನ ನಾಯಕ ಕೇನ್ ವಿಲಿಯಮ್ಸನ್ ಟೀಮ್ ಆಫ್ ಟೂರ್ನಿಮೆಂಟ್‍ನ ನಾಯಕನೂ ಆಗಿದ್ದಾರೆ. ಶಾಂತ ಸ್ವಭಾವದ ತಾಳ್ಮೆಯ ಮೂರ್ತಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. 82.57ರ ಸರಾಸರಿಯಲಿ 578 ರನ್ ಗಳಿಸಿದ್ದಾರೆ

4. ಜ್ಯೂ ರೂಟ್: ಇಂಗ್ಲೆಂಡ್ ತಂಡದ ಜ್ಯೂ ರೂಟ್ 61.77 ಸರಾಸರಿಯಲ್ಲಿ 556 ರನ್ ಸಿಡಿಸಿದ್ದಾರೆ.

5 ಶಕೀಬ್ ಅಲ್ ಹಸನ್: ಬಾಂಗ್ಲಾದೇಶದ ಉದಯೋನ್ಮುಖ ಆಟಗಾರನಾದ ಶಕೀಬ್ 86.57ರ ಸರಾಸರಿಯಲ್ಲಿ 606 ರನ್ ಸಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೊತೆಗೆ 11 ವಿಕೆಟ್ ಸಹ ಕಬಳಿಸಿ ಉತ್ತಮ ಆಲ್‍ರೌಂಡರ್ ಎನಿಸಿಕೊಂಡಿದ್ದಾರೆ.

6 ಬೆನ್ ಸ್ಟೋಕ್ಸ್ : ಇಂಗ್ಲೆಂಡ್‍ನ ಫೈನಲ್ ಪಂದ್ಯದ ಹೀರೋ ಆದ ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್ 66.42ರ ಸರಾಸರಿಯಲಿ 465 ರನ್ ಸಿಡಿಸಿದ್ದಲ್ಲದೇ, 7 ವಿಕೆಟ್ ಪಡೆದಿದ್ದಾರೆ.

7 ಅಲೆಕ್ಸ್ ಕ್ಯಾರಿ: ಆಸ್ಟ್ರೇಲಿಯಾ ವಿಕೇಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಈ ತಂಡದ ಕೀಪರ್ ಸ್ಥಾನ ಲಭಿಸಿದೆ. ಒಟ್ಟು ಟೂರ್ನಿಯಲ್ಲಿ 20 ಔಟ್ ಗಳನ್ನು ಮಾಡಿರುವ ಇವರು 375 ರನ್ ಸಹ ಸಿಡಿಸಿದ್ದಾರೆ.

8 ಮಿಚೆಲ್ ಸ್ಟಾರ್ಕ್: ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅತ್ಯುತ್ತಮ ಬೌಲರ್ ಎನಿಸಿದ್ದಾರೆ. 10 ಪಂದ್ಯಗಳಿಂದ 27 ವಿಕೆಟ್ ಗಳಿಸಿ ಸಾಧನೆ ಮಾಡಿದ್ದಾರೆ.

9 ಜೋಫ್ರಾ ಆರ್ಚರ್: ಫೈನಲ್ ಪಂದ್ಯದ ಸೂಪರ್ ಓವರ್ ಬಾಲ್ ಮಾಡಿ ಗೆಲುವು ತಂದುಕೊಟ್ಟ ಇಂಗ್ಲೆಂಡ್‍ನ ಜೋಫ್ರಾ ಆರ್ಚರ್ ಒಟ್ಟು 20 ವಿಕೆಟ್ ಕಬಳಿಸಿದ್ದಾರೆ.

10 ಲಾಕೀ ಫರ್ಗೂಸನ್: ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಭಾರತದ ವಿರುದ್ಧ ಸೆಮಿಫೈನಲ್‍ನಲ್ಲಿ ಉತ್ತಮ ಪ್ರದರ್ಶನ ತೋರಿ ಫೈನಲ್ ಪ್ರವೇಶಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಒಟ್ಟು 21 ವಿಕೆಟ್ ಗಳಿಸಿದ್ದಾರೆ.

11 ಜಸ್ಪ್ರೀತ್ ಬೂಮ್ರ: ಭಾರತದ ವೇಗಿ ಜಸ್ಪ್ರೀತ್ ಬೂಮ್ರ 18 ವಿಕೆಟ್ ಗಳಿಸಿ ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಒಟ್ಟು 11 ಜನರಲ್ಲಿ ಇಂಗ್ಲೆಂಡ್ 4 ಆಟಗಾರರು, ಭಾರತ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ ಇಬ್ಬರು ಆಟಗಾರರು ಮತ್ತ ಬಾಂಗ್ಲಾದೇಶದ ಒಬ್ಬ ಆಟಗಾರರು ಸೇರಿದ್ದಾರೆ. 12ನೇ ಆಟಗಾರನಾಗಿ ನ್ಯೂಜಿಲೆಂಡ್ ನ ಟ್ರೆಂಟ್ ಬೋಲ್ಟ್ ಅನ್ನು ಆರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...