Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

ವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

- Advertisement -
- Advertisement -

2019ರ ವಿಶ್ವಕಪ್ ಕ್ರಿಕೆಟ್ ಮುಗಿದಿದೆ. ಇಂಗ್ಲೆಂಡ್ ವಿಜಯಿಯಾದರೆ, ನ್ಯೂಜಿಲೆಂಡ್ ರನ್ನರ್ ಅಪ್ ಆಗಿದೆ. ಈಗ ಐಸಿಸಿಯು ಟೀಮ್ ಆಫ್ ಟೂರ್ನಿಮೆಂಟ್ ಅನ್ನು ಪ್ರಕಟಿಸಿದೆ. ಅಂದರೆ ಈ ವಿಶ್ವಕಪ್ ನಲ್ಲಿ ಭಾಗವಹಿಸಿದ ಎಲ್ಲಾ ರಾಷ್ಟ್ರಗಳ ಅತ್ಯುತ್ತಮ ಆಟಗಾರರನ್ನು ಒಳಗೊಂಡ 11+1 ಜನರ ತಂಡ. ಇದರಲ್ಲಿಯೂ ನಾಯಕ, ಉಪನಾಯಕ, ಆರಂಭಿಕ ಆಟಗಾರರು, ಕೀಪರ್, ಫೀಲ್ಡರ್ ಮತ್ತು ಬೌಲರ್‍ಗಳು ಇರುತ್ತಾರೆ.
ಈ 12ರ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಮತ್ತು ಬೌಲರ್ ಜಸ್ಪ್ರಿತ್ ಬೂರ್ಮಾ ಸ್ಥಾನ ಪಡೆದಿದ್ದಾರೆ.

ಆದರೆ ಉತ್ತಮ ಆಟವಾಡಿದ ವಿರಾಟ್ ಕೊಹ್ಲಿಗೆ ಪಟ್ಟಿಯಲ್ಲಿ ಸ್ಥಾನ ಲಭ್ಯವಾಗಿಲ್ಲ. ಅವರ ಸ್ಥಾನವನ್ನು ಇಂಗ್ಲೆಂಡಿನ ಆರಂಭಿಕ ಆಟಗಾರ ಜೇಸನ್ ರಾಯ್ ಆಕ್ರಮಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ವಿರಾಟ್ ಮತ್ತು ಜೇಸನ್ ರಾಯ್ ಇಬ್ಬರೂ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ. ಆದರೆ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿ ಪ್ರದರ್ಶನವಿದ್ದರೆ ಕೊಹ್ಲಿ 9 ಪಂದ್ಯಗಳಿಂದ 55.38ರ ಸರಾಸರಿ ಪ್ರದರ್ಶನವಿದೆ. ಹಾಗಾಗಿ ಕೊಹ್ಲಿಯನ್ನು ಹಿಂದಿಕ್ಕಿ ಜೇಸನ್ ರಾಯ್ ಪಟ್ಟಿ ಸೇರಿದ್ದಾರೆ.

ಪಟ್ಟಿಯಲ್ಲಿರುವ ಆಟಗಾರರು ಮತ್ತು ಅವರ ಸಾಧನೆಗಳ ನೋಟ

1 ರೋಹಿತ್ ಶರ್ಮಾ: ಭಾರತದ ಆರಂಭಿಕ ಬ್ಯಾಟ್ಸ್‍ಮನ್ ಹಿಟ್ ಮ್ಯಾನ್ ಎಂದೇ ಖ್ಯಾತರಾದ ರೋಹಿತ್ ಟೂರ್ನಿಯ ಆರಂಭಿಕ ಆಟಗಾರರಾಗಿದ್ದಾರೆ. ಉಪನಾಯಕನ ಸ್ಥಾನವನ್ನು ಪಡೆದಿದ್ದಾರೆ. ಒಟ್ಟು ಟೂರ್ನಿಯಲ್ಲಿ 9 ಪಂದ್ಯಗಳಿಂದ ಅತ್ಯಧಿಕ 648 ರನ್ ಸಿಡಿಸಿರುವ ರೋಹಿತ್ 5 ಶತಕ ಮತ್ತು 1 ಅರ್ಧ ಶತಕ ದಾಖಲಿಸಿದ್ದಾರೆ. ಶೇ.80ರ ಸರಾಸರಿ ಇದೆ.

2 ಜೇಸನ್ ರಾಯ್: ಇಂಗ್ಲೆಂಡ್ ತಂಡದ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿಯಲ್ಲಿ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ.

3 ಕೇನ್ ವಿಲಿಯಮ್ಸನ್: ಮೂರನೇ ಬ್ಯಾಟ್ಸ್ ಮನ್ ಆಗಿ ಸ್ಥಾನ ಪಡೆಯುವ ಮೂಲಕ ನ್ಯೂಜಿಲೆಂಡ್‍ನ ನಾಯಕ ಕೇನ್ ವಿಲಿಯಮ್ಸನ್ ಟೀಮ್ ಆಫ್ ಟೂರ್ನಿಮೆಂಟ್‍ನ ನಾಯಕನೂ ಆಗಿದ್ದಾರೆ. ಶಾಂತ ಸ್ವಭಾವದ ತಾಳ್ಮೆಯ ಮೂರ್ತಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. 82.57ರ ಸರಾಸರಿಯಲಿ 578 ರನ್ ಗಳಿಸಿದ್ದಾರೆ

4. ಜ್ಯೂ ರೂಟ್: ಇಂಗ್ಲೆಂಡ್ ತಂಡದ ಜ್ಯೂ ರೂಟ್ 61.77 ಸರಾಸರಿಯಲ್ಲಿ 556 ರನ್ ಸಿಡಿಸಿದ್ದಾರೆ.

5 ಶಕೀಬ್ ಅಲ್ ಹಸನ್: ಬಾಂಗ್ಲಾದೇಶದ ಉದಯೋನ್ಮುಖ ಆಟಗಾರನಾದ ಶಕೀಬ್ 86.57ರ ಸರಾಸರಿಯಲ್ಲಿ 606 ರನ್ ಸಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೊತೆಗೆ 11 ವಿಕೆಟ್ ಸಹ ಕಬಳಿಸಿ ಉತ್ತಮ ಆಲ್‍ರೌಂಡರ್ ಎನಿಸಿಕೊಂಡಿದ್ದಾರೆ.

6 ಬೆನ್ ಸ್ಟೋಕ್ಸ್ : ಇಂಗ್ಲೆಂಡ್‍ನ ಫೈನಲ್ ಪಂದ್ಯದ ಹೀರೋ ಆದ ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್ 66.42ರ ಸರಾಸರಿಯಲಿ 465 ರನ್ ಸಿಡಿಸಿದ್ದಲ್ಲದೇ, 7 ವಿಕೆಟ್ ಪಡೆದಿದ್ದಾರೆ.

7 ಅಲೆಕ್ಸ್ ಕ್ಯಾರಿ: ಆಸ್ಟ್ರೇಲಿಯಾ ವಿಕೇಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಈ ತಂಡದ ಕೀಪರ್ ಸ್ಥಾನ ಲಭಿಸಿದೆ. ಒಟ್ಟು ಟೂರ್ನಿಯಲ್ಲಿ 20 ಔಟ್ ಗಳನ್ನು ಮಾಡಿರುವ ಇವರು 375 ರನ್ ಸಹ ಸಿಡಿಸಿದ್ದಾರೆ.

8 ಮಿಚೆಲ್ ಸ್ಟಾರ್ಕ್: ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅತ್ಯುತ್ತಮ ಬೌಲರ್ ಎನಿಸಿದ್ದಾರೆ. 10 ಪಂದ್ಯಗಳಿಂದ 27 ವಿಕೆಟ್ ಗಳಿಸಿ ಸಾಧನೆ ಮಾಡಿದ್ದಾರೆ.

9 ಜೋಫ್ರಾ ಆರ್ಚರ್: ಫೈನಲ್ ಪಂದ್ಯದ ಸೂಪರ್ ಓವರ್ ಬಾಲ್ ಮಾಡಿ ಗೆಲುವು ತಂದುಕೊಟ್ಟ ಇಂಗ್ಲೆಂಡ್‍ನ ಜೋಫ್ರಾ ಆರ್ಚರ್ ಒಟ್ಟು 20 ವಿಕೆಟ್ ಕಬಳಿಸಿದ್ದಾರೆ.

10 ಲಾಕೀ ಫರ್ಗೂಸನ್: ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಭಾರತದ ವಿರುದ್ಧ ಸೆಮಿಫೈನಲ್‍ನಲ್ಲಿ ಉತ್ತಮ ಪ್ರದರ್ಶನ ತೋರಿ ಫೈನಲ್ ಪ್ರವೇಶಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಒಟ್ಟು 21 ವಿಕೆಟ್ ಗಳಿಸಿದ್ದಾರೆ.

11 ಜಸ್ಪ್ರೀತ್ ಬೂಮ್ರ: ಭಾರತದ ವೇಗಿ ಜಸ್ಪ್ರೀತ್ ಬೂಮ್ರ 18 ವಿಕೆಟ್ ಗಳಿಸಿ ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಒಟ್ಟು 11 ಜನರಲ್ಲಿ ಇಂಗ್ಲೆಂಡ್ 4 ಆಟಗಾರರು, ಭಾರತ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ ಇಬ್ಬರು ಆಟಗಾರರು ಮತ್ತ ಬಾಂಗ್ಲಾದೇಶದ ಒಬ್ಬ ಆಟಗಾರರು ಸೇರಿದ್ದಾರೆ. 12ನೇ ಆಟಗಾರನಾಗಿ ನ್ಯೂಜಿಲೆಂಡ್ ನ ಟ್ರೆಂಟ್ ಬೋಲ್ಟ್ ಅನ್ನು ಆರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...