Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

ವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

- Advertisement -
- Advertisement -

2019ರ ವಿಶ್ವಕಪ್ ಕ್ರಿಕೆಟ್ ಮುಗಿದಿದೆ. ಇಂಗ್ಲೆಂಡ್ ವಿಜಯಿಯಾದರೆ, ನ್ಯೂಜಿಲೆಂಡ್ ರನ್ನರ್ ಅಪ್ ಆಗಿದೆ. ಈಗ ಐಸಿಸಿಯು ಟೀಮ್ ಆಫ್ ಟೂರ್ನಿಮೆಂಟ್ ಅನ್ನು ಪ್ರಕಟಿಸಿದೆ. ಅಂದರೆ ಈ ವಿಶ್ವಕಪ್ ನಲ್ಲಿ ಭಾಗವಹಿಸಿದ ಎಲ್ಲಾ ರಾಷ್ಟ್ರಗಳ ಅತ್ಯುತ್ತಮ ಆಟಗಾರರನ್ನು ಒಳಗೊಂಡ 11+1 ಜನರ ತಂಡ. ಇದರಲ್ಲಿಯೂ ನಾಯಕ, ಉಪನಾಯಕ, ಆರಂಭಿಕ ಆಟಗಾರರು, ಕೀಪರ್, ಫೀಲ್ಡರ್ ಮತ್ತು ಬೌಲರ್‍ಗಳು ಇರುತ್ತಾರೆ.
ಈ 12ರ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಮತ್ತು ಬೌಲರ್ ಜಸ್ಪ್ರಿತ್ ಬೂರ್ಮಾ ಸ್ಥಾನ ಪಡೆದಿದ್ದಾರೆ.

ಆದರೆ ಉತ್ತಮ ಆಟವಾಡಿದ ವಿರಾಟ್ ಕೊಹ್ಲಿಗೆ ಪಟ್ಟಿಯಲ್ಲಿ ಸ್ಥಾನ ಲಭ್ಯವಾಗಿಲ್ಲ. ಅವರ ಸ್ಥಾನವನ್ನು ಇಂಗ್ಲೆಂಡಿನ ಆರಂಭಿಕ ಆಟಗಾರ ಜೇಸನ್ ರಾಯ್ ಆಕ್ರಮಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ವಿರಾಟ್ ಮತ್ತು ಜೇಸನ್ ರಾಯ್ ಇಬ್ಬರೂ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ. ಆದರೆ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿ ಪ್ರದರ್ಶನವಿದ್ದರೆ ಕೊಹ್ಲಿ 9 ಪಂದ್ಯಗಳಿಂದ 55.38ರ ಸರಾಸರಿ ಪ್ರದರ್ಶನವಿದೆ. ಹಾಗಾಗಿ ಕೊಹ್ಲಿಯನ್ನು ಹಿಂದಿಕ್ಕಿ ಜೇಸನ್ ರಾಯ್ ಪಟ್ಟಿ ಸೇರಿದ್ದಾರೆ.

ಪಟ್ಟಿಯಲ್ಲಿರುವ ಆಟಗಾರರು ಮತ್ತು ಅವರ ಸಾಧನೆಗಳ ನೋಟ

1 ರೋಹಿತ್ ಶರ್ಮಾ: ಭಾರತದ ಆರಂಭಿಕ ಬ್ಯಾಟ್ಸ್‍ಮನ್ ಹಿಟ್ ಮ್ಯಾನ್ ಎಂದೇ ಖ್ಯಾತರಾದ ರೋಹಿತ್ ಟೂರ್ನಿಯ ಆರಂಭಿಕ ಆಟಗಾರರಾಗಿದ್ದಾರೆ. ಉಪನಾಯಕನ ಸ್ಥಾನವನ್ನು ಪಡೆದಿದ್ದಾರೆ. ಒಟ್ಟು ಟೂರ್ನಿಯಲ್ಲಿ 9 ಪಂದ್ಯಗಳಿಂದ ಅತ್ಯಧಿಕ 648 ರನ್ ಸಿಡಿಸಿರುವ ರೋಹಿತ್ 5 ಶತಕ ಮತ್ತು 1 ಅರ್ಧ ಶತಕ ದಾಖಲಿಸಿದ್ದಾರೆ. ಶೇ.80ರ ಸರಾಸರಿ ಇದೆ.

2 ಜೇಸನ್ ರಾಯ್: ಇಂಗ್ಲೆಂಡ್ ತಂಡದ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿಯಲ್ಲಿ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ.

3 ಕೇನ್ ವಿಲಿಯಮ್ಸನ್: ಮೂರನೇ ಬ್ಯಾಟ್ಸ್ ಮನ್ ಆಗಿ ಸ್ಥಾನ ಪಡೆಯುವ ಮೂಲಕ ನ್ಯೂಜಿಲೆಂಡ್‍ನ ನಾಯಕ ಕೇನ್ ವಿಲಿಯಮ್ಸನ್ ಟೀಮ್ ಆಫ್ ಟೂರ್ನಿಮೆಂಟ್‍ನ ನಾಯಕನೂ ಆಗಿದ್ದಾರೆ. ಶಾಂತ ಸ್ವಭಾವದ ತಾಳ್ಮೆಯ ಮೂರ್ತಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. 82.57ರ ಸರಾಸರಿಯಲಿ 578 ರನ್ ಗಳಿಸಿದ್ದಾರೆ

4. ಜ್ಯೂ ರೂಟ್: ಇಂಗ್ಲೆಂಡ್ ತಂಡದ ಜ್ಯೂ ರೂಟ್ 61.77 ಸರಾಸರಿಯಲ್ಲಿ 556 ರನ್ ಸಿಡಿಸಿದ್ದಾರೆ.

5 ಶಕೀಬ್ ಅಲ್ ಹಸನ್: ಬಾಂಗ್ಲಾದೇಶದ ಉದಯೋನ್ಮುಖ ಆಟಗಾರನಾದ ಶಕೀಬ್ 86.57ರ ಸರಾಸರಿಯಲ್ಲಿ 606 ರನ್ ಸಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೊತೆಗೆ 11 ವಿಕೆಟ್ ಸಹ ಕಬಳಿಸಿ ಉತ್ತಮ ಆಲ್‍ರೌಂಡರ್ ಎನಿಸಿಕೊಂಡಿದ್ದಾರೆ.

6 ಬೆನ್ ಸ್ಟೋಕ್ಸ್ : ಇಂಗ್ಲೆಂಡ್‍ನ ಫೈನಲ್ ಪಂದ್ಯದ ಹೀರೋ ಆದ ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್ 66.42ರ ಸರಾಸರಿಯಲಿ 465 ರನ್ ಸಿಡಿಸಿದ್ದಲ್ಲದೇ, 7 ವಿಕೆಟ್ ಪಡೆದಿದ್ದಾರೆ.

7 ಅಲೆಕ್ಸ್ ಕ್ಯಾರಿ: ಆಸ್ಟ್ರೇಲಿಯಾ ವಿಕೇಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಈ ತಂಡದ ಕೀಪರ್ ಸ್ಥಾನ ಲಭಿಸಿದೆ. ಒಟ್ಟು ಟೂರ್ನಿಯಲ್ಲಿ 20 ಔಟ್ ಗಳನ್ನು ಮಾಡಿರುವ ಇವರು 375 ರನ್ ಸಹ ಸಿಡಿಸಿದ್ದಾರೆ.

8 ಮಿಚೆಲ್ ಸ್ಟಾರ್ಕ್: ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅತ್ಯುತ್ತಮ ಬೌಲರ್ ಎನಿಸಿದ್ದಾರೆ. 10 ಪಂದ್ಯಗಳಿಂದ 27 ವಿಕೆಟ್ ಗಳಿಸಿ ಸಾಧನೆ ಮಾಡಿದ್ದಾರೆ.

9 ಜೋಫ್ರಾ ಆರ್ಚರ್: ಫೈನಲ್ ಪಂದ್ಯದ ಸೂಪರ್ ಓವರ್ ಬಾಲ್ ಮಾಡಿ ಗೆಲುವು ತಂದುಕೊಟ್ಟ ಇಂಗ್ಲೆಂಡ್‍ನ ಜೋಫ್ರಾ ಆರ್ಚರ್ ಒಟ್ಟು 20 ವಿಕೆಟ್ ಕಬಳಿಸಿದ್ದಾರೆ.

10 ಲಾಕೀ ಫರ್ಗೂಸನ್: ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಭಾರತದ ವಿರುದ್ಧ ಸೆಮಿಫೈನಲ್‍ನಲ್ಲಿ ಉತ್ತಮ ಪ್ರದರ್ಶನ ತೋರಿ ಫೈನಲ್ ಪ್ರವೇಶಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಒಟ್ಟು 21 ವಿಕೆಟ್ ಗಳಿಸಿದ್ದಾರೆ.

11 ಜಸ್ಪ್ರೀತ್ ಬೂಮ್ರ: ಭಾರತದ ವೇಗಿ ಜಸ್ಪ್ರೀತ್ ಬೂಮ್ರ 18 ವಿಕೆಟ್ ಗಳಿಸಿ ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಒಟ್ಟು 11 ಜನರಲ್ಲಿ ಇಂಗ್ಲೆಂಡ್ 4 ಆಟಗಾರರು, ಭಾರತ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ ಇಬ್ಬರು ಆಟಗಾರರು ಮತ್ತ ಬಾಂಗ್ಲಾದೇಶದ ಒಬ್ಬ ಆಟಗಾರರು ಸೇರಿದ್ದಾರೆ. 12ನೇ ಆಟಗಾರನಾಗಿ ನ್ಯೂಜಿಲೆಂಡ್ ನ ಟ್ರೆಂಟ್ ಬೋಲ್ಟ್ ಅನ್ನು ಆರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...