Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

ವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

- Advertisement -
- Advertisement -

2019ರ ವಿಶ್ವಕಪ್ ಕ್ರಿಕೆಟ್ ಮುಗಿದಿದೆ. ಇಂಗ್ಲೆಂಡ್ ವಿಜಯಿಯಾದರೆ, ನ್ಯೂಜಿಲೆಂಡ್ ರನ್ನರ್ ಅಪ್ ಆಗಿದೆ. ಈಗ ಐಸಿಸಿಯು ಟೀಮ್ ಆಫ್ ಟೂರ್ನಿಮೆಂಟ್ ಅನ್ನು ಪ್ರಕಟಿಸಿದೆ. ಅಂದರೆ ಈ ವಿಶ್ವಕಪ್ ನಲ್ಲಿ ಭಾಗವಹಿಸಿದ ಎಲ್ಲಾ ರಾಷ್ಟ್ರಗಳ ಅತ್ಯುತ್ತಮ ಆಟಗಾರರನ್ನು ಒಳಗೊಂಡ 11+1 ಜನರ ತಂಡ. ಇದರಲ್ಲಿಯೂ ನಾಯಕ, ಉಪನಾಯಕ, ಆರಂಭಿಕ ಆಟಗಾರರು, ಕೀಪರ್, ಫೀಲ್ಡರ್ ಮತ್ತು ಬೌಲರ್‍ಗಳು ಇರುತ್ತಾರೆ.
ಈ 12ರ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಮತ್ತು ಬೌಲರ್ ಜಸ್ಪ್ರಿತ್ ಬೂರ್ಮಾ ಸ್ಥಾನ ಪಡೆದಿದ್ದಾರೆ.

ಆದರೆ ಉತ್ತಮ ಆಟವಾಡಿದ ವಿರಾಟ್ ಕೊಹ್ಲಿಗೆ ಪಟ್ಟಿಯಲ್ಲಿ ಸ್ಥಾನ ಲಭ್ಯವಾಗಿಲ್ಲ. ಅವರ ಸ್ಥಾನವನ್ನು ಇಂಗ್ಲೆಂಡಿನ ಆರಂಭಿಕ ಆಟಗಾರ ಜೇಸನ್ ರಾಯ್ ಆಕ್ರಮಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ವಿರಾಟ್ ಮತ್ತು ಜೇಸನ್ ರಾಯ್ ಇಬ್ಬರೂ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ. ಆದರೆ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿ ಪ್ರದರ್ಶನವಿದ್ದರೆ ಕೊಹ್ಲಿ 9 ಪಂದ್ಯಗಳಿಂದ 55.38ರ ಸರಾಸರಿ ಪ್ರದರ್ಶನವಿದೆ. ಹಾಗಾಗಿ ಕೊಹ್ಲಿಯನ್ನು ಹಿಂದಿಕ್ಕಿ ಜೇಸನ್ ರಾಯ್ ಪಟ್ಟಿ ಸೇರಿದ್ದಾರೆ.

ಪಟ್ಟಿಯಲ್ಲಿರುವ ಆಟಗಾರರು ಮತ್ತು ಅವರ ಸಾಧನೆಗಳ ನೋಟ

1 ರೋಹಿತ್ ಶರ್ಮಾ: ಭಾರತದ ಆರಂಭಿಕ ಬ್ಯಾಟ್ಸ್‍ಮನ್ ಹಿಟ್ ಮ್ಯಾನ್ ಎಂದೇ ಖ್ಯಾತರಾದ ರೋಹಿತ್ ಟೂರ್ನಿಯ ಆರಂಭಿಕ ಆಟಗಾರರಾಗಿದ್ದಾರೆ. ಉಪನಾಯಕನ ಸ್ಥಾನವನ್ನು ಪಡೆದಿದ್ದಾರೆ. ಒಟ್ಟು ಟೂರ್ನಿಯಲ್ಲಿ 9 ಪಂದ್ಯಗಳಿಂದ ಅತ್ಯಧಿಕ 648 ರನ್ ಸಿಡಿಸಿರುವ ರೋಹಿತ್ 5 ಶತಕ ಮತ್ತು 1 ಅರ್ಧ ಶತಕ ದಾಖಲಿಸಿದ್ದಾರೆ. ಶೇ.80ರ ಸರಾಸರಿ ಇದೆ.

2 ಜೇಸನ್ ರಾಯ್: ಇಂಗ್ಲೆಂಡ್ ತಂಡದ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿಯಲ್ಲಿ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ.

3 ಕೇನ್ ವಿಲಿಯಮ್ಸನ್: ಮೂರನೇ ಬ್ಯಾಟ್ಸ್ ಮನ್ ಆಗಿ ಸ್ಥಾನ ಪಡೆಯುವ ಮೂಲಕ ನ್ಯೂಜಿಲೆಂಡ್‍ನ ನಾಯಕ ಕೇನ್ ವಿಲಿಯಮ್ಸನ್ ಟೀಮ್ ಆಫ್ ಟೂರ್ನಿಮೆಂಟ್‍ನ ನಾಯಕನೂ ಆಗಿದ್ದಾರೆ. ಶಾಂತ ಸ್ವಭಾವದ ತಾಳ್ಮೆಯ ಮೂರ್ತಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. 82.57ರ ಸರಾಸರಿಯಲಿ 578 ರನ್ ಗಳಿಸಿದ್ದಾರೆ

4. ಜ್ಯೂ ರೂಟ್: ಇಂಗ್ಲೆಂಡ್ ತಂಡದ ಜ್ಯೂ ರೂಟ್ 61.77 ಸರಾಸರಿಯಲ್ಲಿ 556 ರನ್ ಸಿಡಿಸಿದ್ದಾರೆ.

5 ಶಕೀಬ್ ಅಲ್ ಹಸನ್: ಬಾಂಗ್ಲಾದೇಶದ ಉದಯೋನ್ಮುಖ ಆಟಗಾರನಾದ ಶಕೀಬ್ 86.57ರ ಸರಾಸರಿಯಲ್ಲಿ 606 ರನ್ ಸಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೊತೆಗೆ 11 ವಿಕೆಟ್ ಸಹ ಕಬಳಿಸಿ ಉತ್ತಮ ಆಲ್‍ರೌಂಡರ್ ಎನಿಸಿಕೊಂಡಿದ್ದಾರೆ.

6 ಬೆನ್ ಸ್ಟೋಕ್ಸ್ : ಇಂಗ್ಲೆಂಡ್‍ನ ಫೈನಲ್ ಪಂದ್ಯದ ಹೀರೋ ಆದ ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್ 66.42ರ ಸರಾಸರಿಯಲಿ 465 ರನ್ ಸಿಡಿಸಿದ್ದಲ್ಲದೇ, 7 ವಿಕೆಟ್ ಪಡೆದಿದ್ದಾರೆ.

7 ಅಲೆಕ್ಸ್ ಕ್ಯಾರಿ: ಆಸ್ಟ್ರೇಲಿಯಾ ವಿಕೇಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಈ ತಂಡದ ಕೀಪರ್ ಸ್ಥಾನ ಲಭಿಸಿದೆ. ಒಟ್ಟು ಟೂರ್ನಿಯಲ್ಲಿ 20 ಔಟ್ ಗಳನ್ನು ಮಾಡಿರುವ ಇವರು 375 ರನ್ ಸಹ ಸಿಡಿಸಿದ್ದಾರೆ.

8 ಮಿಚೆಲ್ ಸ್ಟಾರ್ಕ್: ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅತ್ಯುತ್ತಮ ಬೌಲರ್ ಎನಿಸಿದ್ದಾರೆ. 10 ಪಂದ್ಯಗಳಿಂದ 27 ವಿಕೆಟ್ ಗಳಿಸಿ ಸಾಧನೆ ಮಾಡಿದ್ದಾರೆ.

9 ಜೋಫ್ರಾ ಆರ್ಚರ್: ಫೈನಲ್ ಪಂದ್ಯದ ಸೂಪರ್ ಓವರ್ ಬಾಲ್ ಮಾಡಿ ಗೆಲುವು ತಂದುಕೊಟ್ಟ ಇಂಗ್ಲೆಂಡ್‍ನ ಜೋಫ್ರಾ ಆರ್ಚರ್ ಒಟ್ಟು 20 ವಿಕೆಟ್ ಕಬಳಿಸಿದ್ದಾರೆ.

10 ಲಾಕೀ ಫರ್ಗೂಸನ್: ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಭಾರತದ ವಿರುದ್ಧ ಸೆಮಿಫೈನಲ್‍ನಲ್ಲಿ ಉತ್ತಮ ಪ್ರದರ್ಶನ ತೋರಿ ಫೈನಲ್ ಪ್ರವೇಶಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಒಟ್ಟು 21 ವಿಕೆಟ್ ಗಳಿಸಿದ್ದಾರೆ.

11 ಜಸ್ಪ್ರೀತ್ ಬೂಮ್ರ: ಭಾರತದ ವೇಗಿ ಜಸ್ಪ್ರೀತ್ ಬೂಮ್ರ 18 ವಿಕೆಟ್ ಗಳಿಸಿ ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಒಟ್ಟು 11 ಜನರಲ್ಲಿ ಇಂಗ್ಲೆಂಡ್ 4 ಆಟಗಾರರು, ಭಾರತ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ ಇಬ್ಬರು ಆಟಗಾರರು ಮತ್ತ ಬಾಂಗ್ಲಾದೇಶದ ಒಬ್ಬ ಆಟಗಾರರು ಸೇರಿದ್ದಾರೆ. 12ನೇ ಆಟಗಾರನಾಗಿ ನ್ಯೂಜಿಲೆಂಡ್ ನ ಟ್ರೆಂಟ್ ಬೋಲ್ಟ್ ಅನ್ನು ಆರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...