Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

ವಿಶ್ವಕಪ್ ಕ್ರಿಕೆಟ್‍ನ ಟೀಮ್ ಆಫ್ ಟೂರ್ನಿಮೆಂಟ್ 11ರಲ್ಲಿ ಭಾರತದ ರೋಹಿತ್, ಬೂಮ್ರಾಗೆ ಸ್ಥಾನ. ಕೊಹ್ಲಿಗಿಲ್ಲ ಅದೃಷ್ಟ

- Advertisement -
- Advertisement -

2019ರ ವಿಶ್ವಕಪ್ ಕ್ರಿಕೆಟ್ ಮುಗಿದಿದೆ. ಇಂಗ್ಲೆಂಡ್ ವಿಜಯಿಯಾದರೆ, ನ್ಯೂಜಿಲೆಂಡ್ ರನ್ನರ್ ಅಪ್ ಆಗಿದೆ. ಈಗ ಐಸಿಸಿಯು ಟೀಮ್ ಆಫ್ ಟೂರ್ನಿಮೆಂಟ್ ಅನ್ನು ಪ್ರಕಟಿಸಿದೆ. ಅಂದರೆ ಈ ವಿಶ್ವಕಪ್ ನಲ್ಲಿ ಭಾಗವಹಿಸಿದ ಎಲ್ಲಾ ರಾಷ್ಟ್ರಗಳ ಅತ್ಯುತ್ತಮ ಆಟಗಾರರನ್ನು ಒಳಗೊಂಡ 11+1 ಜನರ ತಂಡ. ಇದರಲ್ಲಿಯೂ ನಾಯಕ, ಉಪನಾಯಕ, ಆರಂಭಿಕ ಆಟಗಾರರು, ಕೀಪರ್, ಫೀಲ್ಡರ್ ಮತ್ತು ಬೌಲರ್‍ಗಳು ಇರುತ್ತಾರೆ.
ಈ 12ರ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಮತ್ತು ಬೌಲರ್ ಜಸ್ಪ್ರಿತ್ ಬೂರ್ಮಾ ಸ್ಥಾನ ಪಡೆದಿದ್ದಾರೆ.

ಆದರೆ ಉತ್ತಮ ಆಟವಾಡಿದ ವಿರಾಟ್ ಕೊಹ್ಲಿಗೆ ಪಟ್ಟಿಯಲ್ಲಿ ಸ್ಥಾನ ಲಭ್ಯವಾಗಿಲ್ಲ. ಅವರ ಸ್ಥಾನವನ್ನು ಇಂಗ್ಲೆಂಡಿನ ಆರಂಭಿಕ ಆಟಗಾರ ಜೇಸನ್ ರಾಯ್ ಆಕ್ರಮಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ವಿರಾಟ್ ಮತ್ತು ಜೇಸನ್ ರಾಯ್ ಇಬ್ಬರೂ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ. ಆದರೆ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿ ಪ್ರದರ್ಶನವಿದ್ದರೆ ಕೊಹ್ಲಿ 9 ಪಂದ್ಯಗಳಿಂದ 55.38ರ ಸರಾಸರಿ ಪ್ರದರ್ಶನವಿದೆ. ಹಾಗಾಗಿ ಕೊಹ್ಲಿಯನ್ನು ಹಿಂದಿಕ್ಕಿ ಜೇಸನ್ ರಾಯ್ ಪಟ್ಟಿ ಸೇರಿದ್ದಾರೆ.

ಪಟ್ಟಿಯಲ್ಲಿರುವ ಆಟಗಾರರು ಮತ್ತು ಅವರ ಸಾಧನೆಗಳ ನೋಟ

1 ರೋಹಿತ್ ಶರ್ಮಾ: ಭಾರತದ ಆರಂಭಿಕ ಬ್ಯಾಟ್ಸ್‍ಮನ್ ಹಿಟ್ ಮ್ಯಾನ್ ಎಂದೇ ಖ್ಯಾತರಾದ ರೋಹಿತ್ ಟೂರ್ನಿಯ ಆರಂಭಿಕ ಆಟಗಾರರಾಗಿದ್ದಾರೆ. ಉಪನಾಯಕನ ಸ್ಥಾನವನ್ನು ಪಡೆದಿದ್ದಾರೆ. ಒಟ್ಟು ಟೂರ್ನಿಯಲ್ಲಿ 9 ಪಂದ್ಯಗಳಿಂದ ಅತ್ಯಧಿಕ 648 ರನ್ ಸಿಡಿಸಿರುವ ರೋಹಿತ್ 5 ಶತಕ ಮತ್ತು 1 ಅರ್ಧ ಶತಕ ದಾಖಲಿಸಿದ್ದಾರೆ. ಶೇ.80ರ ಸರಾಸರಿ ಇದೆ.

2 ಜೇಸನ್ ರಾಯ್: ಇಂಗ್ಲೆಂಡ್ ತಂಡದ ಜೇಸನ್ 7 ಪಂದ್ಯಗಳಿಂದ ಒಟ್ಟು 63.29 ಸರಾಸರಿಯಲ್ಲಿ ಒಟ್ಟು 443 ರನ್ ಗಳನ್ನು ಗಳಿಸಿದ್ದಾರೆ.

3 ಕೇನ್ ವಿಲಿಯಮ್ಸನ್: ಮೂರನೇ ಬ್ಯಾಟ್ಸ್ ಮನ್ ಆಗಿ ಸ್ಥಾನ ಪಡೆಯುವ ಮೂಲಕ ನ್ಯೂಜಿಲೆಂಡ್‍ನ ನಾಯಕ ಕೇನ್ ವಿಲಿಯಮ್ಸನ್ ಟೀಮ್ ಆಫ್ ಟೂರ್ನಿಮೆಂಟ್‍ನ ನಾಯಕನೂ ಆಗಿದ್ದಾರೆ. ಶಾಂತ ಸ್ವಭಾವದ ತಾಳ್ಮೆಯ ಮೂರ್ತಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. 82.57ರ ಸರಾಸರಿಯಲಿ 578 ರನ್ ಗಳಿಸಿದ್ದಾರೆ

4. ಜ್ಯೂ ರೂಟ್: ಇಂಗ್ಲೆಂಡ್ ತಂಡದ ಜ್ಯೂ ರೂಟ್ 61.77 ಸರಾಸರಿಯಲ್ಲಿ 556 ರನ್ ಸಿಡಿಸಿದ್ದಾರೆ.

5 ಶಕೀಬ್ ಅಲ್ ಹಸನ್: ಬಾಂಗ್ಲಾದೇಶದ ಉದಯೋನ್ಮುಖ ಆಟಗಾರನಾದ ಶಕೀಬ್ 86.57ರ ಸರಾಸರಿಯಲ್ಲಿ 606 ರನ್ ಸಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೊತೆಗೆ 11 ವಿಕೆಟ್ ಸಹ ಕಬಳಿಸಿ ಉತ್ತಮ ಆಲ್‍ರೌಂಡರ್ ಎನಿಸಿಕೊಂಡಿದ್ದಾರೆ.

6 ಬೆನ್ ಸ್ಟೋಕ್ಸ್ : ಇಂಗ್ಲೆಂಡ್‍ನ ಫೈನಲ್ ಪಂದ್ಯದ ಹೀರೋ ಆದ ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್ 66.42ರ ಸರಾಸರಿಯಲಿ 465 ರನ್ ಸಿಡಿಸಿದ್ದಲ್ಲದೇ, 7 ವಿಕೆಟ್ ಪಡೆದಿದ್ದಾರೆ.

7 ಅಲೆಕ್ಸ್ ಕ್ಯಾರಿ: ಆಸ್ಟ್ರೇಲಿಯಾ ವಿಕೇಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಈ ತಂಡದ ಕೀಪರ್ ಸ್ಥಾನ ಲಭಿಸಿದೆ. ಒಟ್ಟು ಟೂರ್ನಿಯಲ್ಲಿ 20 ಔಟ್ ಗಳನ್ನು ಮಾಡಿರುವ ಇವರು 375 ರನ್ ಸಹ ಸಿಡಿಸಿದ್ದಾರೆ.

8 ಮಿಚೆಲ್ ಸ್ಟಾರ್ಕ್: ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅತ್ಯುತ್ತಮ ಬೌಲರ್ ಎನಿಸಿದ್ದಾರೆ. 10 ಪಂದ್ಯಗಳಿಂದ 27 ವಿಕೆಟ್ ಗಳಿಸಿ ಸಾಧನೆ ಮಾಡಿದ್ದಾರೆ.

9 ಜೋಫ್ರಾ ಆರ್ಚರ್: ಫೈನಲ್ ಪಂದ್ಯದ ಸೂಪರ್ ಓವರ್ ಬಾಲ್ ಮಾಡಿ ಗೆಲುವು ತಂದುಕೊಟ್ಟ ಇಂಗ್ಲೆಂಡ್‍ನ ಜೋಫ್ರಾ ಆರ್ಚರ್ ಒಟ್ಟು 20 ವಿಕೆಟ್ ಕಬಳಿಸಿದ್ದಾರೆ.

10 ಲಾಕೀ ಫರ್ಗೂಸನ್: ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಭಾರತದ ವಿರುದ್ಧ ಸೆಮಿಫೈನಲ್‍ನಲ್ಲಿ ಉತ್ತಮ ಪ್ರದರ್ಶನ ತೋರಿ ಫೈನಲ್ ಪ್ರವೇಶಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಒಟ್ಟು 21 ವಿಕೆಟ್ ಗಳಿಸಿದ್ದಾರೆ.

11 ಜಸ್ಪ್ರೀತ್ ಬೂಮ್ರ: ಭಾರತದ ವೇಗಿ ಜಸ್ಪ್ರೀತ್ ಬೂಮ್ರ 18 ವಿಕೆಟ್ ಗಳಿಸಿ ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಒಟ್ಟು 11 ಜನರಲ್ಲಿ ಇಂಗ್ಲೆಂಡ್ 4 ಆಟಗಾರರು, ಭಾರತ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ ಇಬ್ಬರು ಆಟಗಾರರು ಮತ್ತ ಬಾಂಗ್ಲಾದೇಶದ ಒಬ್ಬ ಆಟಗಾರರು ಸೇರಿದ್ದಾರೆ. 12ನೇ ಆಟಗಾರನಾಗಿ ನ್ಯೂಜಿಲೆಂಡ್ ನ ಟ್ರೆಂಟ್ ಬೋಲ್ಟ್ ಅನ್ನು ಆರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...