Homeಮುಖಪುಟದ್ರೋಣ್‌ ಮೂಲಕ ದೇಶದ ಮೂಲೆ ಮೂಲೆಗೆ ಕೊರೋನಾ ವ್ಯಾಕ್ಸೀನ್‌ ವಿತರಣೆ- ICMR

ದ್ರೋಣ್‌ ಮೂಲಕ ದೇಶದ ಮೂಲೆ ಮೂಲೆಗೆ ಕೊರೋನಾ ವ್ಯಾಕ್ಸೀನ್‌ ವಿತರಣೆ- ICMR

- Advertisement -
- Advertisement -

ದೇಶದ ಮೂಲೆ ಮೂಲೆಗೂ ವ್ಯಾಕ್ಸೀನ್‌ ತಲುಪಿಸುವ ಯೋಜನೆಯನ್ನು ಭಾರತ ಸರ್ಕಾರ ಹಾಕಿಕೊಂಡಿದೆ. ಈ ವರ್ಷಾಂತ್ಯದ ವೇಳೆಗೆ ವ್ಯಾಕ್ಸಿನೇಶನ್‌ ಮುಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಆದರೆ ಲಸಿಕೆಗಳ ಕೊರತೆಯಿಂದ ಕೇಂದ್ರ ಸರ್ಕಾರದ ಉದ್ಧೇಶಿತ ಲಸಿಕೆ ಅಭಿಯಾನ ಕುಂಟುತ್ತ ಸಾಗಿದೆ. ಇತ್ತ ಲಸಿಕೆ ಸಮಸ್ಯೆ ಕಾಡುತ್ತಿದ್ದರೆ ಕೆಲವು ಪ್ರದೇಶಗಳಿಗೆ ಕೊರೋನಾ ಲಸಿಕೆಯನ್ನು ತಲುಪಿಸುವುದು ಹೇಗೆ ಎಂಬ ಪ್ರಶ್ನೆ ಭಾರತೀಯ ವೈದ್ಯಕೀಯ ಸಂಘಕ್ಕೆ ಆರಂಭವಾಗಿದೆ. ದೇಶದಲ್ಲಿ ಪ್ರವಾಹವಿರುವ ಕಡೆ, ಹಿಮಾಲಯದ ಉನ್ನತ ಪ್ರದೇಶಗಳಲ್ಲಿನ ಹಳ್ಳಿಗಳಿಗೆ, ಇನ್ನಾವುದೋ ಮಹಾ ಕಾಡಿನೊಳಗಿನ ಪ್ರದೇಶಗಳಿಗೆ ವ್ಯಾಕ್ಸೀನ್‌ ಸಮಯಕ್ಕೆ ಸರಿಯಾಗಿ ತಲುಪದೇ ಇರಬಾರದು ಎಂಬುದು ಐಸಿಎಂಆರ್‌ ಉದ್ಧೇಶವಾಗಿದೆ. ಹಾಗಾಗಿ ಐಸಿಎಂಆರ್‌ ಸಂಸ್ಥೆ ಹೆಚ್‌ಎಎಲ್‌ ಜೊತೆ ಒಪ್ಪಂದ ಮಾಡಿಕೊಂಡಿದ್ದು ಡ್ರೋಣ್‌ ಮೂಲಕ ಅತ್ಯಂತ ರಿಮೋಟ್‌ ಪ್ರದೇಶಗಳಿಗೆ ವ್ಯಾಕ್ಸೀನ್‌ ತಲುಪಿಸುವ ವ್ಯವಸ್ಥೆ ಮಾಡಲಿದೆ.

ಹೆಚ್‌ಎಎಲ್‌ ಮತ್ತು ಐಸಿಎಂಆರ್‌ ಒಪ್ಪಂದಕ್ಕೆ ಬಂದಿದ್ದು UAV ( UN manned Areal Vehicle)‌ ವ್ಯವಸ್ಥೆ ನೀಡಲು ಹೆಚ್‌ಎಎಲ್‌ ಒಪ್ಪಿಕೊಂಡಿದೆ. 90 ದಿನಗಳ ಒಪ್ಪಂದ ಇದಾಗಿರಲಿದೆ ಎಂದು ಹೆಚ್‌ಎಎಲ್‌ ಹೇಳಿದೆ.

ಈ ಹಿಂದೆ ಐಸಿಎಂಆರ್‌ ಗೆ ಡಿಜಿಸಿಎ ಮತ್ತು ಕೇಂದ್ರ ವಿಮಾನಯಾನ ಸಂಸ್ಥೆಯಿಂದ ಅನುಮತಿ ದೊರೆತಿರಲಿಲ್ಲ. ಈಗ ಕೇಂದ್ರ ವಿಮಾನ ಯಾನ ಇಲಾಖೆ ಮತ್ತು ಸಿವಿಲ್‌ ಏವಿಯೇಷನ್‌ ಅಥಾರಿಟಿ ಐಸಿಎಂಆರ್‌ ಮನವಿಗೆ ಸ್ಪಂದಿಸಿ ಅನುಮತಿ ನೀಡಿದ್ದಾರೆ.

ಐಸಿಎಂಆರ್‌ ವಿಜ್ಞಾನಿಗಳು ಲಸಿಕೆಗಳನ್ನು ಸಾಗಿಸುವ ವಿಧಾನ, ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ಐಐಟಿ ಕಾನ್ಪುರ ವಿಶ್ವವಿದ್ಯಾಲಯದ ಜೊತೆಗೂ ಕೈಜೋಡಿಸಿದ್ದಾರೆ.

ದೇಶದಲ್ಲಿ ಕೊರೋನಾ ಲಸಿಕೆಯ ಕೊರತೆ ನಡುವೆಯೂ ಐಸಿಎಂಆರ್‌ ದೇಶದ ಮೂಲೆ ಮೂಲೆಗೂ ವ್ಯಾಕ್ಸೀನ್‌ ತಲುಪಿಸುವ ಪ್ರಯತ್ನಕ್ಕೆ ಮುಂದಾಗಿದೆ. ಐಸಿಎಂಆರ್‌ ಪ್ರಯತ್ನ ಯಶಸ್ವಿಯಾಗಲಿದೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ಕಾಣಬಹುದು.‌

ಇದನ್ನೂ ಓದಿ :ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

  
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...