Homeಸಿನಿಮಾಕ್ರೀಡೆಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

ಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ತನ್ನ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತು, ಇನ್ನೆರೆಡು ಪಂದ್ಯಗಳಲ್ಲಿ ಗೆದ್ದಿದೆ. ಗ್ರೂಪ್ ಎರಡರಲ್ಲಿ ಪಾಕಿಸ್ತಾನವು 4ಕ್ಕೆ 4 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪಿದೆ. ಈ ಗ್ರೂಪ್‌ನಲ್ಲಿ ಇನ್ನೊಂದು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದ್ದು ಅದಕ್ಕಾಗಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್, ಭಾರತ ತಂಡಗಳು ತೀವ್ರ ಪೈಪೋಟಿ ನಡೆಸುತ್ತಿವೆ. ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪುವುದು ಕಷ್ಟಸಾಧ್ಯವಿದೆ. ಅದು ಹೇಗೆ ಎಂಬ ವಿವರ ಇಲ್ಲಿದೆ.

ಸದ್ಯದ ಗ್ರೂಪ್ 2 ರ ಪಾಯಿಂಟ್ಸ್ ಪಟ್ಟಿಯಲ್ಲಿ ಸತತ ನಾಲ್ಕು ಗೆಲುವುಗಳೊಂದಿಗೆ 8 ಪಾಯಿಂಟ್ ಪಡೆದು ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ ಮತ್ತು ಸೆಮಿಫೈನಲ್ ತಲುಪಿದೆ. ನ್ಯೂಜಿಲೆಂಡ್ ತಂಡವು 4 ಪಂದ್ಯಗಳಲ್ಲಿ 3 ನ್ನು ಜಯಿಸಿ +1.277 ನೆಟ್‌ ರನ್‌ ರೇಟ್ ಪಡೆದು ಎರಡನೇ ಸ್ಥಾನದಲ್ಲಿದೆ. ಭಾರತ ಎರಡು ಪಂದ್ಯ ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ (+1.619) ಹೊಂದಿದೆ. ಆಫ್ಘಾನಿಸ್ತಾನವು 4 ಪಂದ್ಯಗಳಲ್ಲಿ 2 ಅನ್ನು ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್‌ ರನ್‌ರೇಟ್‌ನೊಂದಿಗೆ (+1.481) ನಾಲ್ಕನೇ ಸ್ಥಾನದಲ್ಲಿದೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಗೆದ್ದರೆ ಭಾರತದ ಕನಸು ನುಚ್ಚು ನೂರಾಗುತ್ತದೆ. ಏಕೆಂದರೆ 8 ಪಾಯಿಂಟ್ ಪಡೆದು ಅದು ಸೆಮಿಫೈನಲ್ ಪ್ರವೇಶಿಸುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ಕಡಿಮೆ ಅಂತರದಲ್ಲಿ ಸೋತರೆ, ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ. ಏಕೆಂದರೆ ಆಗ ನ್ಯೂಜಿಲೆಂಡ್ 6 ಪಾಯಿಂಟ್, ಆಫ್ಘಾನಿಸ್ತಾನ 6 ಪಾಯಿಂಟ್ ಪಡೆದಿರುತ್ತವೆ (ನೆಟ್ ರನ್ ರೇಟ್ +1.481). ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಅದು ಸಹ 6 ಪಾಯಿಂಟ್ ಗಳಿಸುತ್ತದೆ. ಭಾರತದ ನೆಟ್‌ ರನ್ ರೇಟ್ ಮತ್ತಷ್ಟು ಹೆಚ್ಚಾಗುವುದರಿಂದ ಸೆಮಿಫೈನಲ್ ತಲುಪುವ ಅವಕಾಶವಿದೆ.

ಆದರೆ ಇಷ್ಟೆಲ್ಲಾ ಆಗಬೇಕಾದರೆ ಎರಡು ಹೆಜ್ಜೆ ಭಾರತಕ್ಕೆ ಪ್ರಮುಖವಾಗುತ್ತವೆ. 1. ನ್ಯೂಜಿಲೆಂಡ್ ನವೆಂಬರ್ 7 ರಂದು ಆಫ್ಘಾನಿಸ್ತಾನ ಎದುರು ಕಡಿಮೆ ಅಂತರದಿಂದ ಸೋಲಲೇಬೇಕು ಮತ್ತು ಭಾರತವು ನಮೀಬಿಯಾ ಎದುರು ಭಾರೀ ಅಂತರದಿಂದ ಗೆಲ್ಲಲೇಬೇಕು. ಕ್ರಿಕೆಟ್ ನಲ್ಲಿ ಎಂತಹ ಪವಾಡಗಳು ಸಹ ನಡೆಯಬಹುದು. ಅದು ಸಾಧ್ಯವೇ ಎಂಬುದು ನವೆಂಬರ್ 7 ರಂದು ತೀರ್ಮಾನವಾಗಲಿದೆ. ಅಲ್ಲಿಯವರೆಗೂ ಕಾಯೋಣ.

ಭಾರತಕ್ಕೆ ಭರ್ಜರಿ ಜಯ

ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಸ್ಕಾಟ್ಲೆಂಡ್ ಎದುರು ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಪಡೆದು ಮಾರಕ ದಾಳಿ ನಡೆಸಿದರೆ, ಜಸ್ಪ್ರಿತ್ ಬೂಮ್ರ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

 


ಇದನ್ನೂ ಓದಿ: ‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ: ವಿಡಿಯೊ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾರ್ವಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...