Homeಸಿನಿಮಾಕ್ರೀಡೆಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

ಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ತನ್ನ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತು, ಇನ್ನೆರೆಡು ಪಂದ್ಯಗಳಲ್ಲಿ ಗೆದ್ದಿದೆ. ಗ್ರೂಪ್ ಎರಡರಲ್ಲಿ ಪಾಕಿಸ್ತಾನವು 4ಕ್ಕೆ 4 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪಿದೆ. ಈ ಗ್ರೂಪ್‌ನಲ್ಲಿ ಇನ್ನೊಂದು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದ್ದು ಅದಕ್ಕಾಗಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್, ಭಾರತ ತಂಡಗಳು ತೀವ್ರ ಪೈಪೋಟಿ ನಡೆಸುತ್ತಿವೆ. ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪುವುದು ಕಷ್ಟಸಾಧ್ಯವಿದೆ. ಅದು ಹೇಗೆ ಎಂಬ ವಿವರ ಇಲ್ಲಿದೆ.

ಸದ್ಯದ ಗ್ರೂಪ್ 2 ರ ಪಾಯಿಂಟ್ಸ್ ಪಟ್ಟಿಯಲ್ಲಿ ಸತತ ನಾಲ್ಕು ಗೆಲುವುಗಳೊಂದಿಗೆ 8 ಪಾಯಿಂಟ್ ಪಡೆದು ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ ಮತ್ತು ಸೆಮಿಫೈನಲ್ ತಲುಪಿದೆ. ನ್ಯೂಜಿಲೆಂಡ್ ತಂಡವು 4 ಪಂದ್ಯಗಳಲ್ಲಿ 3 ನ್ನು ಜಯಿಸಿ +1.277 ನೆಟ್‌ ರನ್‌ ರೇಟ್ ಪಡೆದು ಎರಡನೇ ಸ್ಥಾನದಲ್ಲಿದೆ. ಭಾರತ ಎರಡು ಪಂದ್ಯ ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ (+1.619) ಹೊಂದಿದೆ. ಆಫ್ಘಾನಿಸ್ತಾನವು 4 ಪಂದ್ಯಗಳಲ್ಲಿ 2 ಅನ್ನು ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್‌ ರನ್‌ರೇಟ್‌ನೊಂದಿಗೆ (+1.481) ನಾಲ್ಕನೇ ಸ್ಥಾನದಲ್ಲಿದೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಗೆದ್ದರೆ ಭಾರತದ ಕನಸು ನುಚ್ಚು ನೂರಾಗುತ್ತದೆ. ಏಕೆಂದರೆ 8 ಪಾಯಿಂಟ್ ಪಡೆದು ಅದು ಸೆಮಿಫೈನಲ್ ಪ್ರವೇಶಿಸುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ಕಡಿಮೆ ಅಂತರದಲ್ಲಿ ಸೋತರೆ, ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ. ಏಕೆಂದರೆ ಆಗ ನ್ಯೂಜಿಲೆಂಡ್ 6 ಪಾಯಿಂಟ್, ಆಫ್ಘಾನಿಸ್ತಾನ 6 ಪಾಯಿಂಟ್ ಪಡೆದಿರುತ್ತವೆ (ನೆಟ್ ರನ್ ರೇಟ್ +1.481). ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಅದು ಸಹ 6 ಪಾಯಿಂಟ್ ಗಳಿಸುತ್ತದೆ. ಭಾರತದ ನೆಟ್‌ ರನ್ ರೇಟ್ ಮತ್ತಷ್ಟು ಹೆಚ್ಚಾಗುವುದರಿಂದ ಸೆಮಿಫೈನಲ್ ತಲುಪುವ ಅವಕಾಶವಿದೆ.

ಆದರೆ ಇಷ್ಟೆಲ್ಲಾ ಆಗಬೇಕಾದರೆ ಎರಡು ಹೆಜ್ಜೆ ಭಾರತಕ್ಕೆ ಪ್ರಮುಖವಾಗುತ್ತವೆ. 1. ನ್ಯೂಜಿಲೆಂಡ್ ನವೆಂಬರ್ 7 ರಂದು ಆಫ್ಘಾನಿಸ್ತಾನ ಎದುರು ಕಡಿಮೆ ಅಂತರದಿಂದ ಸೋಲಲೇಬೇಕು ಮತ್ತು ಭಾರತವು ನಮೀಬಿಯಾ ಎದುರು ಭಾರೀ ಅಂತರದಿಂದ ಗೆಲ್ಲಲೇಬೇಕು. ಕ್ರಿಕೆಟ್ ನಲ್ಲಿ ಎಂತಹ ಪವಾಡಗಳು ಸಹ ನಡೆಯಬಹುದು. ಅದು ಸಾಧ್ಯವೇ ಎಂಬುದು ನವೆಂಬರ್ 7 ರಂದು ತೀರ್ಮಾನವಾಗಲಿದೆ. ಅಲ್ಲಿಯವರೆಗೂ ಕಾಯೋಣ.

ಭಾರತಕ್ಕೆ ಭರ್ಜರಿ ಜಯ

ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಸ್ಕಾಟ್ಲೆಂಡ್ ಎದುರು ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಪಡೆದು ಮಾರಕ ದಾಳಿ ನಡೆಸಿದರೆ, ಜಸ್ಪ್ರಿತ್ ಬೂಮ್ರ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

 


ಇದನ್ನೂ ಓದಿ: ‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ: ವಿಡಿಯೊ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...