Homeಸಿನಿಮಾಕ್ರೀಡೆಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

ಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ತನ್ನ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತು, ಇನ್ನೆರೆಡು ಪಂದ್ಯಗಳಲ್ಲಿ ಗೆದ್ದಿದೆ. ಗ್ರೂಪ್ ಎರಡರಲ್ಲಿ ಪಾಕಿಸ್ತಾನವು 4ಕ್ಕೆ 4 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪಿದೆ. ಈ ಗ್ರೂಪ್‌ನಲ್ಲಿ ಇನ್ನೊಂದು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದ್ದು ಅದಕ್ಕಾಗಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್, ಭಾರತ ತಂಡಗಳು ತೀವ್ರ ಪೈಪೋಟಿ ನಡೆಸುತ್ತಿವೆ. ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪುವುದು ಕಷ್ಟಸಾಧ್ಯವಿದೆ. ಅದು ಹೇಗೆ ಎಂಬ ವಿವರ ಇಲ್ಲಿದೆ.

ಸದ್ಯದ ಗ್ರೂಪ್ 2 ರ ಪಾಯಿಂಟ್ಸ್ ಪಟ್ಟಿಯಲ್ಲಿ ಸತತ ನಾಲ್ಕು ಗೆಲುವುಗಳೊಂದಿಗೆ 8 ಪಾಯಿಂಟ್ ಪಡೆದು ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ ಮತ್ತು ಸೆಮಿಫೈನಲ್ ತಲುಪಿದೆ. ನ್ಯೂಜಿಲೆಂಡ್ ತಂಡವು 4 ಪಂದ್ಯಗಳಲ್ಲಿ 3 ನ್ನು ಜಯಿಸಿ +1.277 ನೆಟ್‌ ರನ್‌ ರೇಟ್ ಪಡೆದು ಎರಡನೇ ಸ್ಥಾನದಲ್ಲಿದೆ. ಭಾರತ ಎರಡು ಪಂದ್ಯ ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ (+1.619) ಹೊಂದಿದೆ. ಆಫ್ಘಾನಿಸ್ತಾನವು 4 ಪಂದ್ಯಗಳಲ್ಲಿ 2 ಅನ್ನು ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್‌ ರನ್‌ರೇಟ್‌ನೊಂದಿಗೆ (+1.481) ನಾಲ್ಕನೇ ಸ್ಥಾನದಲ್ಲಿದೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಗೆದ್ದರೆ ಭಾರತದ ಕನಸು ನುಚ್ಚು ನೂರಾಗುತ್ತದೆ. ಏಕೆಂದರೆ 8 ಪಾಯಿಂಟ್ ಪಡೆದು ಅದು ಸೆಮಿಫೈನಲ್ ಪ್ರವೇಶಿಸುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ಕಡಿಮೆ ಅಂತರದಲ್ಲಿ ಸೋತರೆ, ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ. ಏಕೆಂದರೆ ಆಗ ನ್ಯೂಜಿಲೆಂಡ್ 6 ಪಾಯಿಂಟ್, ಆಫ್ಘಾನಿಸ್ತಾನ 6 ಪಾಯಿಂಟ್ ಪಡೆದಿರುತ್ತವೆ (ನೆಟ್ ರನ್ ರೇಟ್ +1.481). ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಅದು ಸಹ 6 ಪಾಯಿಂಟ್ ಗಳಿಸುತ್ತದೆ. ಭಾರತದ ನೆಟ್‌ ರನ್ ರೇಟ್ ಮತ್ತಷ್ಟು ಹೆಚ್ಚಾಗುವುದರಿಂದ ಸೆಮಿಫೈನಲ್ ತಲುಪುವ ಅವಕಾಶವಿದೆ.

ಆದರೆ ಇಷ್ಟೆಲ್ಲಾ ಆಗಬೇಕಾದರೆ ಎರಡು ಹೆಜ್ಜೆ ಭಾರತಕ್ಕೆ ಪ್ರಮುಖವಾಗುತ್ತವೆ. 1. ನ್ಯೂಜಿಲೆಂಡ್ ನವೆಂಬರ್ 7 ರಂದು ಆಫ್ಘಾನಿಸ್ತಾನ ಎದುರು ಕಡಿಮೆ ಅಂತರದಿಂದ ಸೋಲಲೇಬೇಕು ಮತ್ತು ಭಾರತವು ನಮೀಬಿಯಾ ಎದುರು ಭಾರೀ ಅಂತರದಿಂದ ಗೆಲ್ಲಲೇಬೇಕು. ಕ್ರಿಕೆಟ್ ನಲ್ಲಿ ಎಂತಹ ಪವಾಡಗಳು ಸಹ ನಡೆಯಬಹುದು. ಅದು ಸಾಧ್ಯವೇ ಎಂಬುದು ನವೆಂಬರ್ 7 ರಂದು ತೀರ್ಮಾನವಾಗಲಿದೆ. ಅಲ್ಲಿಯವರೆಗೂ ಕಾಯೋಣ.

ಭಾರತಕ್ಕೆ ಭರ್ಜರಿ ಜಯ

ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಸ್ಕಾಟ್ಲೆಂಡ್ ಎದುರು ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಪಡೆದು ಮಾರಕ ದಾಳಿ ನಡೆಸಿದರೆ, ಜಸ್ಪ್ರಿತ್ ಬೂಮ್ರ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

 


ಇದನ್ನೂ ಓದಿ: ‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ: ವಿಡಿಯೊ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...