Homeಸಿನಿಮಾಕ್ರೀಡೆಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

ಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ತನ್ನ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತು, ಇನ್ನೆರೆಡು ಪಂದ್ಯಗಳಲ್ಲಿ ಗೆದ್ದಿದೆ. ಗ್ರೂಪ್ ಎರಡರಲ್ಲಿ ಪಾಕಿಸ್ತಾನವು 4ಕ್ಕೆ 4 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪಿದೆ. ಈ ಗ್ರೂಪ್‌ನಲ್ಲಿ ಇನ್ನೊಂದು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದ್ದು ಅದಕ್ಕಾಗಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್, ಭಾರತ ತಂಡಗಳು ತೀವ್ರ ಪೈಪೋಟಿ ನಡೆಸುತ್ತಿವೆ. ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪುವುದು ಕಷ್ಟಸಾಧ್ಯವಿದೆ. ಅದು ಹೇಗೆ ಎಂಬ ವಿವರ ಇಲ್ಲಿದೆ.

ಸದ್ಯದ ಗ್ರೂಪ್ 2 ರ ಪಾಯಿಂಟ್ಸ್ ಪಟ್ಟಿಯಲ್ಲಿ ಸತತ ನಾಲ್ಕು ಗೆಲುವುಗಳೊಂದಿಗೆ 8 ಪಾಯಿಂಟ್ ಪಡೆದು ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ ಮತ್ತು ಸೆಮಿಫೈನಲ್ ತಲುಪಿದೆ. ನ್ಯೂಜಿಲೆಂಡ್ ತಂಡವು 4 ಪಂದ್ಯಗಳಲ್ಲಿ 3 ನ್ನು ಜಯಿಸಿ +1.277 ನೆಟ್‌ ರನ್‌ ರೇಟ್ ಪಡೆದು ಎರಡನೇ ಸ್ಥಾನದಲ್ಲಿದೆ. ಭಾರತ ಎರಡು ಪಂದ್ಯ ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ (+1.619) ಹೊಂದಿದೆ. ಆಫ್ಘಾನಿಸ್ತಾನವು 4 ಪಂದ್ಯಗಳಲ್ಲಿ 2 ಅನ್ನು ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್‌ ರನ್‌ರೇಟ್‌ನೊಂದಿಗೆ (+1.481) ನಾಲ್ಕನೇ ಸ್ಥಾನದಲ್ಲಿದೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಗೆದ್ದರೆ ಭಾರತದ ಕನಸು ನುಚ್ಚು ನೂರಾಗುತ್ತದೆ. ಏಕೆಂದರೆ 8 ಪಾಯಿಂಟ್ ಪಡೆದು ಅದು ಸೆಮಿಫೈನಲ್ ಪ್ರವೇಶಿಸುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ಕಡಿಮೆ ಅಂತರದಲ್ಲಿ ಸೋತರೆ, ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ. ಏಕೆಂದರೆ ಆಗ ನ್ಯೂಜಿಲೆಂಡ್ 6 ಪಾಯಿಂಟ್, ಆಫ್ಘಾನಿಸ್ತಾನ 6 ಪಾಯಿಂಟ್ ಪಡೆದಿರುತ್ತವೆ (ನೆಟ್ ರನ್ ರೇಟ್ +1.481). ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಅದು ಸಹ 6 ಪಾಯಿಂಟ್ ಗಳಿಸುತ್ತದೆ. ಭಾರತದ ನೆಟ್‌ ರನ್ ರೇಟ್ ಮತ್ತಷ್ಟು ಹೆಚ್ಚಾಗುವುದರಿಂದ ಸೆಮಿಫೈನಲ್ ತಲುಪುವ ಅವಕಾಶವಿದೆ.

ಆದರೆ ಇಷ್ಟೆಲ್ಲಾ ಆಗಬೇಕಾದರೆ ಎರಡು ಹೆಜ್ಜೆ ಭಾರತಕ್ಕೆ ಪ್ರಮುಖವಾಗುತ್ತವೆ. 1. ನ್ಯೂಜಿಲೆಂಡ್ ನವೆಂಬರ್ 7 ರಂದು ಆಫ್ಘಾನಿಸ್ತಾನ ಎದುರು ಕಡಿಮೆ ಅಂತರದಿಂದ ಸೋಲಲೇಬೇಕು ಮತ್ತು ಭಾರತವು ನಮೀಬಿಯಾ ಎದುರು ಭಾರೀ ಅಂತರದಿಂದ ಗೆಲ್ಲಲೇಬೇಕು. ಕ್ರಿಕೆಟ್ ನಲ್ಲಿ ಎಂತಹ ಪವಾಡಗಳು ಸಹ ನಡೆಯಬಹುದು. ಅದು ಸಾಧ್ಯವೇ ಎಂಬುದು ನವೆಂಬರ್ 7 ರಂದು ತೀರ್ಮಾನವಾಗಲಿದೆ. ಅಲ್ಲಿಯವರೆಗೂ ಕಾಯೋಣ.

ಭಾರತಕ್ಕೆ ಭರ್ಜರಿ ಜಯ

ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಸ್ಕಾಟ್ಲೆಂಡ್ ಎದುರು ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಪಡೆದು ಮಾರಕ ದಾಳಿ ನಡೆಸಿದರೆ, ಜಸ್ಪ್ರಿತ್ ಬೂಮ್ರ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

 


ಇದನ್ನೂ ಓದಿ: ‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ: ವಿಡಿಯೊ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....