Homeಮುಖಪುಟಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಭಾರತವು ಬೇರೆ ಯಾವುದೇ ದೇಶಗಳಿಗಿಂತ ಹೆಚ್ಚು ಚೀನೀ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಿಂದ ಕೂಡಿದೆ. ಇದರರ್ಥ ಭಾರತೀಯರು ಚೀನೀ ಬ್ರಾಂಡ್ ಖರೀದಿಸುವ ಸಾಧ್ಯತೆಗಳು ಹೆಚ್ಚು ಎಂದು ಸಮೀಕ್ಷೆ ತಿಳಿಸಿದೆ.

- Advertisement -
- Advertisement -

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಐಡಿಸಿ ನಡೆಸಿದ ಸರ್ವೇ ಪ್ರಕಾರ, ಮಾರ್ಚ್ 2020ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತಕ್ಕೆ ರವಾನೆಯಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ ಸುಮಾರು 76 ಪ್ರತಿಶತವು ಚೀನಾದ ಬ್ರಾಂಡ್‌ಗಳಾಗಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅದೇ ಐಡಿಸಿ ದತ್ತಾಂಶವು ಭಾರತದ ಐದು ಉನ್ನತ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಲ್ಲಿ ನಾಲ್ಕು ಚೀನಾದವು ಎಂದು ತೋರಿಸಿದೆ.

ಚೀನಾದ ಬ್ರಾಂಡ್ ಶಿಯೋಮಿ ಭಾರತದಲ್ಲಿ ಅತಿ ಹೆಚ್ಚು ಮಾರುಕಟ್ಟೆ ಪಾಲನ್ನು ಹೊಂದಿದ್ದು, ನಂತರದ ಸ್ಥಾನದಲ್ಲಿ ವಿವೊ ಇದೆ. ಮೂರನೆಯ ಸ್ಥಾನದಲ್ಲಿ ಚೀನಾದ್ದು ಅಲ್ಲದ ಸ್ಯಾಮ್‌ಸಂಗ್ ಇದ್ದರೆ ನಂತರದ ಸ್ಥಾನದಲ್ಲಿ ಮತ್ತೆ ಚೀನಾದ ರಿಯಲ್‌ಮೆ ಮತ್ತು ಒಪ್ಪೊ ಇವೆ.

ಭಾರತದ 10 ಜನರಲ್ಲಿ 4 ಭಾರತೀಯರು ಮಾತ್ರ ಚೀನೀ ಫೋನ್ ಖರೀದಿಸುವುದಿಲ್ಲ ಎಂದು ಗಾಲ್ವಾನ್ ಘರ್ಷಣೆಗೆ ಮುನ್ನ ನಡೆಸಿದ ಕೌಂಟರ್‌ಪಾಯಿಂಟ್ ರಿಸರ್ಚ್‌ ಸಮೀಕ್ಷೆಯಲ್ಲಿ ಕಂಡುಬಂದಿದೆ.

ಒಂದು ತಿಂಗಳ ಹಿಂದೆ ಲಡಾಖ್ ಗಡಿಯಲ್ಲಿ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಚೀನಾ ವಿರೋಧಿ ಭಾವನೆ ಬೆಳೆಯುತ್ತಿರುವುದರಿಂದ, ಭಾರತದಲ್ಲಿ ‘ಮೇಡ್ ಇನ್ ಚೀನಾ’ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆ ಬಂದಿದೆ. ಆದಾಗ್ಯೂ, ಮಾರುಕಟ್ಟೆ ಸಂಶೋಧನಾ ಸಂಸ್ಥೆಯ ಇತ್ತೀಚಿನ ಸಮೀಕ್ಷೆಯ ಪ್ರಕಾರ ಬಹಳಷ್ಟು ಜನರು ತಾವು ಕೊಳ್ಳುವ ಸಾಮಾಗ್ರಿಗಳು ಯಾವ ದೇಶದ್ದು ಎಂಬುದಕ್ಕೆ ಗಮನ ನೀಡುವುದಿಲ್ಲ ಎಂದು ಹೇಳಲಾಗಿದೆ.

ಭಾರತದಲ್ಲಿ ಪ್ರತಿಕ್ರಿಯಿಸಿದ 10 ಜನರಲ್ಲಿ ನಾಲ್ವರು ಚೀನೀ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸದಿರಲು ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದರೆ, ಹೆಚ್ಚಿನವರು ತಮ್ಮ ನಿರ್ಧಾರದ ಬಗ್ಗೆ ಖಚಿತವಾಗಿರಲಿಲ್ಲ ಎಂದು ಕೌಂಟರ್ಪಾಯಿಂಟ್ ರಿಸರ್ಚ್‌ನ ಹಿರಿಯ ವಿಶ್ಲೇಷಕ ಪಾವೆಲ್ ನಯಾ ತಿಳಿಸಿದ್ದಾರೆ.

ಭಾರತವು ಬೇರೆ ಯಾವುದೇ ದೇಶಗಳಿಗಿಂತ ಹೆಚ್ಚು ಚೀನೀ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಿಂದ ಕೂಡಿದೆ. ಇದರರ್ಥ ಭಾರತೀಯರು ಚೀನೀ ಬ್ರಾಂಡ್ ಖರೀದಿಸುವ ಸಾಧ್ಯತೆಗಳು ಹೆಚ್ಚು ಎಂದು ಸರ್ವೇ ತಿಳಿಸಿದೆ.

ಶಿಯೋಮಿ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಮಾರಾಟವಾಗುತ್ತಿದ್ದರೆ, ನಂತರದ ಸ್ಥಾನದಲ್ಲಿ ಸ್ಯಾಮ್‌ಸಂಗ್, ಒನ್‌ಪ್ಲಸ್ ಮತ್ತು ಆಪಲ್ ಫೋನ್‌ಗಳಿವೆ ಎಂದು ಯಾಂತ್ರಾ ಸಹ-ಸಂಸ್ಥಾಪಕ ಮತ್ತು ಸಿಇಒ ಜಯಂತ್ ಜಾ ತಿಳಿಸಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕಳೆದ ಸೋಮವಾರದ ಮೊದಲು, ಮೇ ಮಧ್ಯ ಮತ್ತು ಜೂನ್ ಮೊದಲ ವಾರದ ನಡುವೆ ಈ ಸಮೀಕ್ಷೆಯನ್ನು ನಡೆಸಲಾಯಿತು ಎನ್ನಲಾಗಿದೆ.

ಕಂಪನಿಯು ತನ್ನ ಹೇಳಿಕೆಯಲ್ಲಿ “ಭಾರತ-ಚೀನಾ ಗಡಿಯಲ್ಲಿನ ಇತ್ತೀಚಿನ ಸಂಘರ್ಷವು ಈ [ಗ್ರಾಹಕ] ನಡವಳಿಕೆಯನ್ನು ರೂಪಿಸುವಲ್ಲಿ ಆಳವಾದ ಪಾತ್ರವನ್ನು ವಹಿಸುತ್ತದೆ ಎಂದು ನಾವು ನಂಬುತ್ತೇವೆ” ಎಂದು ಹೇಳಿದೆ.

“ಫಲಿತಾಂಶವು ಸಮೀಕ್ಷೆಯ ಸಮಯದಲ್ಲಿ ಪ್ರತಿಕ್ರಿಯಿಸಿದವರ ಅಭಿಪ್ರಾಯವನ್ನು ತೋರಿಸುತ್ತಿದೆ. ಆದರೆ ಬಜೆಟ್, ಬೆಲೆ, ಪರ್ಯಾಯ ಉತ್ಪನ್ನಗಳ ಲಭ್ಯತೆ ಮತ್ತು ಇತರ ಸಾಮಾಜಿಕ ಮತ್ತು ಆರ್ಥಿಕ ಡೈನಾಮಿಕ್ಸ್ ಸೇರಿದಂತೆ ಹಲವು ಅಂಶಗಳಿಂದ ನಿಜವಾದ ಖರೀದಿ ನಿರ್ಧಾರವನ್ನು ನಿರ್ಧರಿಸಲಾಗುತ್ತದೆ” ಎಂದು ಸಂಸ್ಥೆ ತಿಳಿಸಿದೆ.


ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...