Homeಮುಖಪುಟಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಭಾರತವು ಬೇರೆ ಯಾವುದೇ ದೇಶಗಳಿಗಿಂತ ಹೆಚ್ಚು ಚೀನೀ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಿಂದ ಕೂಡಿದೆ. ಇದರರ್ಥ ಭಾರತೀಯರು ಚೀನೀ ಬ್ರಾಂಡ್ ಖರೀದಿಸುವ ಸಾಧ್ಯತೆಗಳು ಹೆಚ್ಚು ಎಂದು ಸಮೀಕ್ಷೆ ತಿಳಿಸಿದೆ.

- Advertisement -
- Advertisement -

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಐಡಿಸಿ ನಡೆಸಿದ ಸರ್ವೇ ಪ್ರಕಾರ, ಮಾರ್ಚ್ 2020ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತಕ್ಕೆ ರವಾನೆಯಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ ಸುಮಾರು 76 ಪ್ರತಿಶತವು ಚೀನಾದ ಬ್ರಾಂಡ್‌ಗಳಾಗಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅದೇ ಐಡಿಸಿ ದತ್ತಾಂಶವು ಭಾರತದ ಐದು ಉನ್ನತ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಲ್ಲಿ ನಾಲ್ಕು ಚೀನಾದವು ಎಂದು ತೋರಿಸಿದೆ.

ಚೀನಾದ ಬ್ರಾಂಡ್ ಶಿಯೋಮಿ ಭಾರತದಲ್ಲಿ ಅತಿ ಹೆಚ್ಚು ಮಾರುಕಟ್ಟೆ ಪಾಲನ್ನು ಹೊಂದಿದ್ದು, ನಂತರದ ಸ್ಥಾನದಲ್ಲಿ ವಿವೊ ಇದೆ. ಮೂರನೆಯ ಸ್ಥಾನದಲ್ಲಿ ಚೀನಾದ್ದು ಅಲ್ಲದ ಸ್ಯಾಮ್‌ಸಂಗ್ ಇದ್ದರೆ ನಂತರದ ಸ್ಥಾನದಲ್ಲಿ ಮತ್ತೆ ಚೀನಾದ ರಿಯಲ್‌ಮೆ ಮತ್ತು ಒಪ್ಪೊ ಇವೆ.

ಭಾರತದ 10 ಜನರಲ್ಲಿ 4 ಭಾರತೀಯರು ಮಾತ್ರ ಚೀನೀ ಫೋನ್ ಖರೀದಿಸುವುದಿಲ್ಲ ಎಂದು ಗಾಲ್ವಾನ್ ಘರ್ಷಣೆಗೆ ಮುನ್ನ ನಡೆಸಿದ ಕೌಂಟರ್‌ಪಾಯಿಂಟ್ ರಿಸರ್ಚ್‌ ಸಮೀಕ್ಷೆಯಲ್ಲಿ ಕಂಡುಬಂದಿದೆ.

ಒಂದು ತಿಂಗಳ ಹಿಂದೆ ಲಡಾಖ್ ಗಡಿಯಲ್ಲಿ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಚೀನಾ ವಿರೋಧಿ ಭಾವನೆ ಬೆಳೆಯುತ್ತಿರುವುದರಿಂದ, ಭಾರತದಲ್ಲಿ ‘ಮೇಡ್ ಇನ್ ಚೀನಾ’ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆ ಬಂದಿದೆ. ಆದಾಗ್ಯೂ, ಮಾರುಕಟ್ಟೆ ಸಂಶೋಧನಾ ಸಂಸ್ಥೆಯ ಇತ್ತೀಚಿನ ಸಮೀಕ್ಷೆಯ ಪ್ರಕಾರ ಬಹಳಷ್ಟು ಜನರು ತಾವು ಕೊಳ್ಳುವ ಸಾಮಾಗ್ರಿಗಳು ಯಾವ ದೇಶದ್ದು ಎಂಬುದಕ್ಕೆ ಗಮನ ನೀಡುವುದಿಲ್ಲ ಎಂದು ಹೇಳಲಾಗಿದೆ.

ಭಾರತದಲ್ಲಿ ಪ್ರತಿಕ್ರಿಯಿಸಿದ 10 ಜನರಲ್ಲಿ ನಾಲ್ವರು ಚೀನೀ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸದಿರಲು ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದರೆ, ಹೆಚ್ಚಿನವರು ತಮ್ಮ ನಿರ್ಧಾರದ ಬಗ್ಗೆ ಖಚಿತವಾಗಿರಲಿಲ್ಲ ಎಂದು ಕೌಂಟರ್ಪಾಯಿಂಟ್ ರಿಸರ್ಚ್‌ನ ಹಿರಿಯ ವಿಶ್ಲೇಷಕ ಪಾವೆಲ್ ನಯಾ ತಿಳಿಸಿದ್ದಾರೆ.

ಭಾರತವು ಬೇರೆ ಯಾವುದೇ ದೇಶಗಳಿಗಿಂತ ಹೆಚ್ಚು ಚೀನೀ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಿಂದ ಕೂಡಿದೆ. ಇದರರ್ಥ ಭಾರತೀಯರು ಚೀನೀ ಬ್ರಾಂಡ್ ಖರೀದಿಸುವ ಸಾಧ್ಯತೆಗಳು ಹೆಚ್ಚು ಎಂದು ಸರ್ವೇ ತಿಳಿಸಿದೆ.

ಶಿಯೋಮಿ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಮಾರಾಟವಾಗುತ್ತಿದ್ದರೆ, ನಂತರದ ಸ್ಥಾನದಲ್ಲಿ ಸ್ಯಾಮ್‌ಸಂಗ್, ಒನ್‌ಪ್ಲಸ್ ಮತ್ತು ಆಪಲ್ ಫೋನ್‌ಗಳಿವೆ ಎಂದು ಯಾಂತ್ರಾ ಸಹ-ಸಂಸ್ಥಾಪಕ ಮತ್ತು ಸಿಇಒ ಜಯಂತ್ ಜಾ ತಿಳಿಸಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕಳೆದ ಸೋಮವಾರದ ಮೊದಲು, ಮೇ ಮಧ್ಯ ಮತ್ತು ಜೂನ್ ಮೊದಲ ವಾರದ ನಡುವೆ ಈ ಸಮೀಕ್ಷೆಯನ್ನು ನಡೆಸಲಾಯಿತು ಎನ್ನಲಾಗಿದೆ.

ಕಂಪನಿಯು ತನ್ನ ಹೇಳಿಕೆಯಲ್ಲಿ “ಭಾರತ-ಚೀನಾ ಗಡಿಯಲ್ಲಿನ ಇತ್ತೀಚಿನ ಸಂಘರ್ಷವು ಈ [ಗ್ರಾಹಕ] ನಡವಳಿಕೆಯನ್ನು ರೂಪಿಸುವಲ್ಲಿ ಆಳವಾದ ಪಾತ್ರವನ್ನು ವಹಿಸುತ್ತದೆ ಎಂದು ನಾವು ನಂಬುತ್ತೇವೆ” ಎಂದು ಹೇಳಿದೆ.

“ಫಲಿತಾಂಶವು ಸಮೀಕ್ಷೆಯ ಸಮಯದಲ್ಲಿ ಪ್ರತಿಕ್ರಿಯಿಸಿದವರ ಅಭಿಪ್ರಾಯವನ್ನು ತೋರಿಸುತ್ತಿದೆ. ಆದರೆ ಬಜೆಟ್, ಬೆಲೆ, ಪರ್ಯಾಯ ಉತ್ಪನ್ನಗಳ ಲಭ್ಯತೆ ಮತ್ತು ಇತರ ಸಾಮಾಜಿಕ ಮತ್ತು ಆರ್ಥಿಕ ಡೈನಾಮಿಕ್ಸ್ ಸೇರಿದಂತೆ ಹಲವು ಅಂಶಗಳಿಂದ ನಿಜವಾದ ಖರೀದಿ ನಿರ್ಧಾರವನ್ನು ನಿರ್ಧರಿಸಲಾಗುತ್ತದೆ” ಎಂದು ಸಂಸ್ಥೆ ತಿಳಿಸಿದೆ.


ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...