Homeಮುಖಪುಟಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಭಾರತವು ಬೇರೆ ಯಾವುದೇ ದೇಶಗಳಿಗಿಂತ ಹೆಚ್ಚು ಚೀನೀ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಿಂದ ಕೂಡಿದೆ. ಇದರರ್ಥ ಭಾರತೀಯರು ಚೀನೀ ಬ್ರಾಂಡ್ ಖರೀದಿಸುವ ಸಾಧ್ಯತೆಗಳು ಹೆಚ್ಚು ಎಂದು ಸಮೀಕ್ಷೆ ತಿಳಿಸಿದೆ.

- Advertisement -
- Advertisement -

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಐಡಿಸಿ ನಡೆಸಿದ ಸರ್ವೇ ಪ್ರಕಾರ, ಮಾರ್ಚ್ 2020ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತಕ್ಕೆ ರವಾನೆಯಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ ಸುಮಾರು 76 ಪ್ರತಿಶತವು ಚೀನಾದ ಬ್ರಾಂಡ್‌ಗಳಾಗಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅದೇ ಐಡಿಸಿ ದತ್ತಾಂಶವು ಭಾರತದ ಐದು ಉನ್ನತ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಲ್ಲಿ ನಾಲ್ಕು ಚೀನಾದವು ಎಂದು ತೋರಿಸಿದೆ.

ಚೀನಾದ ಬ್ರಾಂಡ್ ಶಿಯೋಮಿ ಭಾರತದಲ್ಲಿ ಅತಿ ಹೆಚ್ಚು ಮಾರುಕಟ್ಟೆ ಪಾಲನ್ನು ಹೊಂದಿದ್ದು, ನಂತರದ ಸ್ಥಾನದಲ್ಲಿ ವಿವೊ ಇದೆ. ಮೂರನೆಯ ಸ್ಥಾನದಲ್ಲಿ ಚೀನಾದ್ದು ಅಲ್ಲದ ಸ್ಯಾಮ್‌ಸಂಗ್ ಇದ್ದರೆ ನಂತರದ ಸ್ಥಾನದಲ್ಲಿ ಮತ್ತೆ ಚೀನಾದ ರಿಯಲ್‌ಮೆ ಮತ್ತು ಒಪ್ಪೊ ಇವೆ.

ಭಾರತದ 10 ಜನರಲ್ಲಿ 4 ಭಾರತೀಯರು ಮಾತ್ರ ಚೀನೀ ಫೋನ್ ಖರೀದಿಸುವುದಿಲ್ಲ ಎಂದು ಗಾಲ್ವಾನ್ ಘರ್ಷಣೆಗೆ ಮುನ್ನ ನಡೆಸಿದ ಕೌಂಟರ್‌ಪಾಯಿಂಟ್ ರಿಸರ್ಚ್‌ ಸಮೀಕ್ಷೆಯಲ್ಲಿ ಕಂಡುಬಂದಿದೆ.

ಒಂದು ತಿಂಗಳ ಹಿಂದೆ ಲಡಾಖ್ ಗಡಿಯಲ್ಲಿ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಚೀನಾ ವಿರೋಧಿ ಭಾವನೆ ಬೆಳೆಯುತ್ತಿರುವುದರಿಂದ, ಭಾರತದಲ್ಲಿ ‘ಮೇಡ್ ಇನ್ ಚೀನಾ’ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆ ಬಂದಿದೆ. ಆದಾಗ್ಯೂ, ಮಾರುಕಟ್ಟೆ ಸಂಶೋಧನಾ ಸಂಸ್ಥೆಯ ಇತ್ತೀಚಿನ ಸಮೀಕ್ಷೆಯ ಪ್ರಕಾರ ಬಹಳಷ್ಟು ಜನರು ತಾವು ಕೊಳ್ಳುವ ಸಾಮಾಗ್ರಿಗಳು ಯಾವ ದೇಶದ್ದು ಎಂಬುದಕ್ಕೆ ಗಮನ ನೀಡುವುದಿಲ್ಲ ಎಂದು ಹೇಳಲಾಗಿದೆ.

ಭಾರತದಲ್ಲಿ ಪ್ರತಿಕ್ರಿಯಿಸಿದ 10 ಜನರಲ್ಲಿ ನಾಲ್ವರು ಚೀನೀ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸದಿರಲು ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದರೆ, ಹೆಚ್ಚಿನವರು ತಮ್ಮ ನಿರ್ಧಾರದ ಬಗ್ಗೆ ಖಚಿತವಾಗಿರಲಿಲ್ಲ ಎಂದು ಕೌಂಟರ್ಪಾಯಿಂಟ್ ರಿಸರ್ಚ್‌ನ ಹಿರಿಯ ವಿಶ್ಲೇಷಕ ಪಾವೆಲ್ ನಯಾ ತಿಳಿಸಿದ್ದಾರೆ.

ಭಾರತವು ಬೇರೆ ಯಾವುದೇ ದೇಶಗಳಿಗಿಂತ ಹೆಚ್ಚು ಚೀನೀ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಿಂದ ಕೂಡಿದೆ. ಇದರರ್ಥ ಭಾರತೀಯರು ಚೀನೀ ಬ್ರಾಂಡ್ ಖರೀದಿಸುವ ಸಾಧ್ಯತೆಗಳು ಹೆಚ್ಚು ಎಂದು ಸರ್ವೇ ತಿಳಿಸಿದೆ.

ಶಿಯೋಮಿ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಮಾರಾಟವಾಗುತ್ತಿದ್ದರೆ, ನಂತರದ ಸ್ಥಾನದಲ್ಲಿ ಸ್ಯಾಮ್‌ಸಂಗ್, ಒನ್‌ಪ್ಲಸ್ ಮತ್ತು ಆಪಲ್ ಫೋನ್‌ಗಳಿವೆ ಎಂದು ಯಾಂತ್ರಾ ಸಹ-ಸಂಸ್ಥಾಪಕ ಮತ್ತು ಸಿಇಒ ಜಯಂತ್ ಜಾ ತಿಳಿಸಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕಳೆದ ಸೋಮವಾರದ ಮೊದಲು, ಮೇ ಮಧ್ಯ ಮತ್ತು ಜೂನ್ ಮೊದಲ ವಾರದ ನಡುವೆ ಈ ಸಮೀಕ್ಷೆಯನ್ನು ನಡೆಸಲಾಯಿತು ಎನ್ನಲಾಗಿದೆ.

ಕಂಪನಿಯು ತನ್ನ ಹೇಳಿಕೆಯಲ್ಲಿ “ಭಾರತ-ಚೀನಾ ಗಡಿಯಲ್ಲಿನ ಇತ್ತೀಚಿನ ಸಂಘರ್ಷವು ಈ [ಗ್ರಾಹಕ] ನಡವಳಿಕೆಯನ್ನು ರೂಪಿಸುವಲ್ಲಿ ಆಳವಾದ ಪಾತ್ರವನ್ನು ವಹಿಸುತ್ತದೆ ಎಂದು ನಾವು ನಂಬುತ್ತೇವೆ” ಎಂದು ಹೇಳಿದೆ.

“ಫಲಿತಾಂಶವು ಸಮೀಕ್ಷೆಯ ಸಮಯದಲ್ಲಿ ಪ್ರತಿಕ್ರಿಯಿಸಿದವರ ಅಭಿಪ್ರಾಯವನ್ನು ತೋರಿಸುತ್ತಿದೆ. ಆದರೆ ಬಜೆಟ್, ಬೆಲೆ, ಪರ್ಯಾಯ ಉತ್ಪನ್ನಗಳ ಲಭ್ಯತೆ ಮತ್ತು ಇತರ ಸಾಮಾಜಿಕ ಮತ್ತು ಆರ್ಥಿಕ ಡೈನಾಮಿಕ್ಸ್ ಸೇರಿದಂತೆ ಹಲವು ಅಂಶಗಳಿಂದ ನಿಜವಾದ ಖರೀದಿ ನಿರ್ಧಾರವನ್ನು ನಿರ್ಧರಿಸಲಾಗುತ್ತದೆ” ಎಂದು ಸಂಸ್ಥೆ ತಿಳಿಸಿದೆ.


ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...