HomeUncategorizedದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

- Advertisement -
- Advertisement -

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದ ಸಿದ್ದರಾಮಯ್ಯ ‘ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ  ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಹೇಳಿದರು. 

ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಈ ಸಂವಿಧಾನವನ್ನು ಅಂಗೀಕರಿಸಲಾಗಿದೆ ಎಂದರು. 

ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು.

ಮನುವಾದಿಗಳು ಸಂವಿಧಾನ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ ಎಂದು ವಿಷಾದ ವ್ಯಕ್ತ ಪಡಿಸಿದರು. 

ಇದೇ ವೇಳೆ ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟ ಭದ್ರರು ಜಾತಿ ಹೋಗಲು ಬಿಡುತ್ತಿಲ್ಲ ಎಂದರು.

ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ದುರ್ಬಲವಾಗುತ್ತದೆ. ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್ ಮಾಡಿದ ಕೊನೆಯ ಭಾಷಣವನ್ನು, ಈ ಭಾಷಣದ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. 

ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ. ಯಾವ ಧರ್ಮವೂ ಹೇಳುವುದಿಲ್ಲ.

ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹಾ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ ಎಂದಿದ್ದಾರೆ. 

ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ತಂದೆ, ಯಾರ ಮನೆ ಮಕ್ಕಳೂ ಬರಿಗಾಗಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ತಂದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದರು. 

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...