HomeUncategorizedದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

- Advertisement -
- Advertisement -

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದ ಸಿದ್ದರಾಮಯ್ಯ ‘ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ  ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಹೇಳಿದರು. 

ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಈ ಸಂವಿಧಾನವನ್ನು ಅಂಗೀಕರಿಸಲಾಗಿದೆ ಎಂದರು. 

ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು.

ಮನುವಾದಿಗಳು ಸಂವಿಧಾನ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ ಎಂದು ವಿಷಾದ ವ್ಯಕ್ತ ಪಡಿಸಿದರು. 

ಇದೇ ವೇಳೆ ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟ ಭದ್ರರು ಜಾತಿ ಹೋಗಲು ಬಿಡುತ್ತಿಲ್ಲ ಎಂದರು.

ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ದುರ್ಬಲವಾಗುತ್ತದೆ. ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್ ಮಾಡಿದ ಕೊನೆಯ ಭಾಷಣವನ್ನು, ಈ ಭಾಷಣದ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. 

ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ. ಯಾವ ಧರ್ಮವೂ ಹೇಳುವುದಿಲ್ಲ.

ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹಾ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ ಎಂದಿದ್ದಾರೆ. 

ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ತಂದೆ, ಯಾರ ಮನೆ ಮಕ್ಕಳೂ ಬರಿಗಾಗಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ತಂದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದರು. 

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...