Homeಕರ್ನಾಟಕದ್ವೇಷ, ಹಿಂಸೆಯ ಸಿದ್ಧಾಂತ ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು: ರಾಹುಲ್ ಗಾಂಧಿ

ದ್ವೇಷ, ಹಿಂಸೆಯ ಸಿದ್ಧಾಂತ ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು: ರಾಹುಲ್ ಗಾಂಧಿ

- Advertisement -
- Advertisement -

“ದ್ವೇಷದ ಮೂಲಕ ಸತ್ಯದ ಜ್ವಾಲೆಯನ್ನು ನಂದಿಸಲು ಬಿಡಬೇಡಿ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಾಗರಿಕರಿಗೆ ಮನವಿ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹುತಾತ್ಮರಾದ 76ನೇ ವರ್ಷದ ದಿನವಾದ ಇಂದು ರಾಹುಲ್‌ ಈ ಹೇಳಿಕೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಮಹಾತ್ಮ ಗಾಂಧಿ ಹುತಾತ್ಮರಾದ ದಿನವನ್ನು ಸ್ಮರಿಸಿಕೊಂಡ ರಾಹುಲ್ ಗಾಂಧಿ, “ಈ ದಿನ, ದ್ವೇಷ ಮತ್ತು ಹಿಂಸೆಯ ಸಿದ್ಧಾಂತವು ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು. ಇಂದು ಅದೇ ಮನಸ್ಥಿತಿಯು ಅವರ ತತ್ವಗಳು ಮತ್ತು ಆದರ್ಶಗಳನ್ನು ನಮ್ಮಿಂದ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.

“ದ್ವೇಷದ ಚಂಡಮಾರುತದಲ್ಲಿ, ಸತ್ಯ ಮತ್ತು ಸದ್ಭಾವನೆಯ ಜ್ವಾಲೆಯನ್ನು ನಂದಿಸಲು ನಾವು ಬಿಡಬಾರದು. ಇದು ನಿಜಕ್ಕೂ ಗಾಂಧೀಜಿ ಅವರಿಗೆ ನಾವು ಸಲ್ಲಿಸುವ ಪ್ರಾಮಾಣಿಕ ಗೌರವವಾಗಿದೆ” ಎಂದು ರಾಹುಲ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“76 ವರ್ಷಗಳ ಹಿಂದೆ, ಈ ದಿನ ದ್ವೇಷವನ್ನು ಹರಡುವ ಶಕ್ತಿಗಳು ಮಹಾತ್ಮ ಗಾಂಧಿಯನ್ನು ಹತ್ಯೆಗೈದವು. ಗಾಂಧಿಯವರ ಸ್ಮರಣಾರ್ಥ ಇಂದು ಬೆಳಗ್ಗೆ ಬಿಹಾರದ ಅರಾರಿಯಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಶಿಬಿರದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಗಾಂಧಿಯ ಜೀವಿತಾವಧಿಯಲ್ಲಿ ಅವರನ್ನು ವಿರೋಧಿಸಿದ, ನಿರಾಕರಿಸಿದ ಮತ್ತು ಅಂತಿಮವಾಗಿ ಅವರ ಹತ್ಯೆಗೆ ಸಂಚು ರೂಪಿಸಿದ್ದ ಸಿದ್ಧಾಂತ ಮತ್ತು ಅದಕ್ಕೆ ಬದ್ಧವಾಗಿರುವವರ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ, ಅವರು ತಮ್ಮ ಪರಂಪರೆಯನ್ನು ಸರಿ ಎಂದು ರುಜು ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ತಮ್ಮ ಎಕ್ಸ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ್ದಾರೆ.

ಸೋಮವಾರ ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ‘ಭಾರತ ಜೋಡೋ ನ್ಯಾಯ ಯಾತ್ರೆ’ ಪಶ್ಚಿಮ ಬಂಗಾಳದಲ್ಲಿ ಪೂರ್ಣಗೊಂಡು ಮಂಗಳವಾರ ಬಿಹಾರಕ್ಕೆ ಪ್ರವೇಶಿಸಿದೆ.

ಜನತಾದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಭಾಗವಾಗಿದ್ದ ‘ಮಹಾಘಟಬಂಧನ್’ ಮೈತ್ರಿಯನ್ನು ಕೈಬಿಟ್ಟು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಿದ ಕೇವಲ ಎರಡು ದಿನಗಳ ನಂತರ ಬಿಹಾರಕ್ಕೆ ರಾಹುಲ್ ಯಾತ್ರೆ ಕಾಲಿಟ್ಟಿರುವುದು ಮಹತ್ವ ಪಡೆದುಕೊಂಡಿದೆ.

ಇಂದು (ಜ.30) ರಾಹುಲ್ ಯಾತ್ರೆಯು ಬಿಹಾರದ ಅರಾರಿಯಾ ಜಿಲ್ಲೆಯ ಅಂಬೇಡ್ಕರ್ ಚೌಕ್‌ನಿಂದ ಪ್ರಾರಂಭಗೊಂಡಿದೆ. ಮಹಾತ್ಮಾ ಗಾಂಧಿ ಹುತಾತ್ಮರಾದ 76 ನೇ ವರ್ಷದ ದಿನದ ಅಂಗವಾಗಿ ಇಂದು ಬೆಳಗ್ಗೆ ಅರಾರಿಯಾದ ಭಾರತ್ ಜೋಡೋ ನ್ಯಾಯ ಯಾತ್ರೆಯ ಶಿಬಿರದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: ಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...