Homeಕರ್ನಾಟಕದ್ವೇಷ, ಹಿಂಸೆಯ ಸಿದ್ಧಾಂತ ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು: ರಾಹುಲ್ ಗಾಂಧಿ

ದ್ವೇಷ, ಹಿಂಸೆಯ ಸಿದ್ಧಾಂತ ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು: ರಾಹುಲ್ ಗಾಂಧಿ

- Advertisement -
- Advertisement -

“ದ್ವೇಷದ ಮೂಲಕ ಸತ್ಯದ ಜ್ವಾಲೆಯನ್ನು ನಂದಿಸಲು ಬಿಡಬೇಡಿ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಾಗರಿಕರಿಗೆ ಮನವಿ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹುತಾತ್ಮರಾದ 76ನೇ ವರ್ಷದ ದಿನವಾದ ಇಂದು ರಾಹುಲ್‌ ಈ ಹೇಳಿಕೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಮಹಾತ್ಮ ಗಾಂಧಿ ಹುತಾತ್ಮರಾದ ದಿನವನ್ನು ಸ್ಮರಿಸಿಕೊಂಡ ರಾಹುಲ್ ಗಾಂಧಿ, “ಈ ದಿನ, ದ್ವೇಷ ಮತ್ತು ಹಿಂಸೆಯ ಸಿದ್ಧಾಂತವು ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು. ಇಂದು ಅದೇ ಮನಸ್ಥಿತಿಯು ಅವರ ತತ್ವಗಳು ಮತ್ತು ಆದರ್ಶಗಳನ್ನು ನಮ್ಮಿಂದ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.

“ದ್ವೇಷದ ಚಂಡಮಾರುತದಲ್ಲಿ, ಸತ್ಯ ಮತ್ತು ಸದ್ಭಾವನೆಯ ಜ್ವಾಲೆಯನ್ನು ನಂದಿಸಲು ನಾವು ಬಿಡಬಾರದು. ಇದು ನಿಜಕ್ಕೂ ಗಾಂಧೀಜಿ ಅವರಿಗೆ ನಾವು ಸಲ್ಲಿಸುವ ಪ್ರಾಮಾಣಿಕ ಗೌರವವಾಗಿದೆ” ಎಂದು ರಾಹುಲ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“76 ವರ್ಷಗಳ ಹಿಂದೆ, ಈ ದಿನ ದ್ವೇಷವನ್ನು ಹರಡುವ ಶಕ್ತಿಗಳು ಮಹಾತ್ಮ ಗಾಂಧಿಯನ್ನು ಹತ್ಯೆಗೈದವು. ಗಾಂಧಿಯವರ ಸ್ಮರಣಾರ್ಥ ಇಂದು ಬೆಳಗ್ಗೆ ಬಿಹಾರದ ಅರಾರಿಯಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಶಿಬಿರದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಗಾಂಧಿಯ ಜೀವಿತಾವಧಿಯಲ್ಲಿ ಅವರನ್ನು ವಿರೋಧಿಸಿದ, ನಿರಾಕರಿಸಿದ ಮತ್ತು ಅಂತಿಮವಾಗಿ ಅವರ ಹತ್ಯೆಗೆ ಸಂಚು ರೂಪಿಸಿದ್ದ ಸಿದ್ಧಾಂತ ಮತ್ತು ಅದಕ್ಕೆ ಬದ್ಧವಾಗಿರುವವರ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ, ಅವರು ತಮ್ಮ ಪರಂಪರೆಯನ್ನು ಸರಿ ಎಂದು ರುಜು ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ತಮ್ಮ ಎಕ್ಸ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ್ದಾರೆ.

ಸೋಮವಾರ ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ‘ಭಾರತ ಜೋಡೋ ನ್ಯಾಯ ಯಾತ್ರೆ’ ಪಶ್ಚಿಮ ಬಂಗಾಳದಲ್ಲಿ ಪೂರ್ಣಗೊಂಡು ಮಂಗಳವಾರ ಬಿಹಾರಕ್ಕೆ ಪ್ರವೇಶಿಸಿದೆ.

ಜನತಾದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಭಾಗವಾಗಿದ್ದ ‘ಮಹಾಘಟಬಂಧನ್’ ಮೈತ್ರಿಯನ್ನು ಕೈಬಿಟ್ಟು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಿದ ಕೇವಲ ಎರಡು ದಿನಗಳ ನಂತರ ಬಿಹಾರಕ್ಕೆ ರಾಹುಲ್ ಯಾತ್ರೆ ಕಾಲಿಟ್ಟಿರುವುದು ಮಹತ್ವ ಪಡೆದುಕೊಂಡಿದೆ.

ಇಂದು (ಜ.30) ರಾಹುಲ್ ಯಾತ್ರೆಯು ಬಿಹಾರದ ಅರಾರಿಯಾ ಜಿಲ್ಲೆಯ ಅಂಬೇಡ್ಕರ್ ಚೌಕ್‌ನಿಂದ ಪ್ರಾರಂಭಗೊಂಡಿದೆ. ಮಹಾತ್ಮಾ ಗಾಂಧಿ ಹುತಾತ್ಮರಾದ 76 ನೇ ವರ್ಷದ ದಿನದ ಅಂಗವಾಗಿ ಇಂದು ಬೆಳಗ್ಗೆ ಅರಾರಿಯಾದ ಭಾರತ್ ಜೋಡೋ ನ್ಯಾಯ ಯಾತ್ರೆಯ ಶಿಬಿರದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: ಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...