Homeಅಂತರಾಷ್ಟ್ರೀಯಹಮಾಸ್‌ನ ವಿತ್ತ ಸಚಿವರನ್ನು ಹತ್ಯೆ ಮಾಡಿದ್ದೇವೆ: ಇಸ್ರೇಲ್ ಹೇಳಿಕೆ

ಹಮಾಸ್‌ನ ವಿತ್ತ ಸಚಿವರನ್ನು ಹತ್ಯೆ ಮಾಡಿದ್ದೇವೆ: ಇಸ್ರೇಲ್ ಹೇಳಿಕೆ

- Advertisement -
- Advertisement -

ಕಳೆದ ರಾತ್ರಿ ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ ನಡೆಸಿದ ಡ್ರೋನ್ ದಾಳಿಯಲ್ಲಿ ಹಮಾಸ್‌ನ ವಿತ್ತ ಸಚಿವ ಮತ್ತು ಹಮಾಸ್‌ನ ಪಾಲಿಟ್‌ಬ್ಯುರೊದ ಹಿರಿಯ ಅಧಿಕಾರಿ ಮೃತಪಟ್ಟಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಹೇಳಿವೆ.

ಹಮಾಸ್‌ ವಿತ್ತ ಸಚಿವ ಜವಾದ್ ಅಬು ಶಮಲಾ ಮತ್ತು ಜಕರಿಯಾ ಅಬು ಮೊಅಮ್ಮರ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಹೇಳಿದೆ.

ಜವಾದ್ ಅಬು ಶಮಲಾ ಅವರು ಹಮಾಸ್‌ಗೆ ನಿಧಿಯನ್ನು ನೀಡುತ್ತಿದ್ದರು ಮತ್ತು ಗಾಜಾ ಪಟ್ಟಿಯ ಒಳಗೆ ಮತ್ತು ಹೊರಗೆ ಇಸ್ರೇಲ್ ವಿರುದ್ಧದ ಕೃತ್ಯಕ್ಕೆ ಹಣಕಾಸು ನೀಡುತ್ತಿದ್ದರು ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.

ಹತ್ಯೆಯಾದ ಜಕರಿಯಾ ಅಬು ಮೊಅಮ್ಮರ್, ಹಮಾಸ್‌ ಸಶಸ್ತ್ರ ಗುಂಪಿನ ಆಂತರಿಕ ವ್ಯವಹಾರಗಳ ಮುಖ್ಯಸ್ಥನಾಗಿದ್ದರು. ಹಿರಿಯ ಹಮಾಸ್ ನಾಯಕರು ಮತ್ತು ಗಾಜಾ ಪಟ್ಟಿಯಲ್ಲಿರುವ ಸಶಸ್ತ್ರ ಗುಂಪಿನ ನಡುವೆ ಸಂಯೋಜಕರಾಗಿದ್ದರು ಎಂದು IDF ಹೇಳಿದೆ.

ಆದರೆ ಈ ಇಬ್ಬರು ಹಮಾಸ್‌ನ ನಾಯಕರ ಹತ್ಯೆಯ ಬಗ್ಗೆ ಹಮಾಸ್‌ ಸಶಸ್ತ್ರ ಗುಂಪು ಯಾವುದೇ ಹೇಳಿಕೆಯನ್ನು ನೀಡಿಲ್ಲ.

ಇಸ್ರೇಲ್ ವಿರುದ್ಧ ಹಮಾಸ್‌ ಸಶಸ್ತ್ರ ಗುಂಪು ಶನಿವಾರ 5000ಕ್ಕೂ ಅಧಿಕ ರಾಕೆಟ್‌ ದಾಳಿಯನ್ನು ನಡೆಸಿದ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿತ್ತು. ಆ ಬಳಿಕ ಎರಡು ದೇಶಗಳಲ್ಲಿ ಅಪಾರ ಸಾವು-ನೋವುಗಳು ಸಂಭವಿಸಿದೆ. ಇತ್ತೀಚಿನ ವರದಿ ಪ್ರಕಾರ ಇಸ್ರೇಲ್‌- ಪ್ಯಾಲೆಸ್ತೀನ್‌ ಕದನದಲ್ಲಿ ಮೃತರ ಸಂಖ್ಯೆ 1900ಕ್ಕೆ ಏರಿಕೆಯಾಗಿದೆ.

ಆದರೆ ಸುಮಾರು 1500 ಹಮಾಸ್‌ ಹೋರಾಟಗಾರರ ಮೃತದೇಹಗಳು ಇಸ್ರೇಲ್‌ನಲ್ಲಿ ಗಾಝಾ ಪಟ್ಟಿಯ ಸುತ್ತಲಿನ ಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ಇಸ್ರೇಲ್‌ ಸೇನೆ ನಿನ್ನೆ ಹೇಳಿತ್ತು. ಇದಲ್ಲದೆ ಗಾಝಾ ಜೊತೆಗಿನ ಗಡಿ ಪ್ರದೇಶದಲ್ಲಿ ಇಸ್ರೇಲ್‌ ಬಹುಪಾಲು ನಿಯಂತ್ರಣ ಮರುಸ್ಥಾಪಿಸಿದೆ ಎಂದು ಇಸ್ರೇಲ್‌ನ ಮಿಲಿಟರಿ ವಕ್ತಾರ ರಿಚರ್ಡ್‌ ಹೆಚ್ಟ್‌ ಹೇಳಿದ್ದರು.

ಹಮಾಸ್ ಇಸ್ರೇಲ್ ಮೇಲೆ ಸರಣಿ ರಾಕೆಟ್‌ ದಾಳಿಯನ್ನು ಭೂ, ವಾಯು, ನೌಕಾ ಮಾರ್ಗದಲ್ಲಿ ನಡೆಸಿತ್ತು. ಇಸ್ರೇಲ್‌ನ ವಿವಿಧ ಪ್ರಾಂತ್ಯಗಳಲ್ಲಿ ನುಗ್ಗಿ ಜನರನ್ನು ಒತ್ತೆಯಾಳಾಗಿಟ್ಟಿತ್ತು.

ಇದನ್ನು ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಲ್ಲಿ ಮೃತರ ಸಂಖ್ಯೆ ಗಣನೀಯ ಹೆಚ್ಚಳ: ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...