Homeಅಂತರಾಷ್ಟ್ರೀಯಹಮಾಸ್‌ನ ವಿತ್ತ ಸಚಿವರನ್ನು ಹತ್ಯೆ ಮಾಡಿದ್ದೇವೆ: ಇಸ್ರೇಲ್ ಹೇಳಿಕೆ

ಹಮಾಸ್‌ನ ವಿತ್ತ ಸಚಿವರನ್ನು ಹತ್ಯೆ ಮಾಡಿದ್ದೇವೆ: ಇಸ್ರೇಲ್ ಹೇಳಿಕೆ

- Advertisement -
- Advertisement -

ಕಳೆದ ರಾತ್ರಿ ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ ನಡೆಸಿದ ಡ್ರೋನ್ ದಾಳಿಯಲ್ಲಿ ಹಮಾಸ್‌ನ ವಿತ್ತ ಸಚಿವ ಮತ್ತು ಹಮಾಸ್‌ನ ಪಾಲಿಟ್‌ಬ್ಯುರೊದ ಹಿರಿಯ ಅಧಿಕಾರಿ ಮೃತಪಟ್ಟಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಹೇಳಿವೆ.

ಹಮಾಸ್‌ ವಿತ್ತ ಸಚಿವ ಜವಾದ್ ಅಬು ಶಮಲಾ ಮತ್ತು ಜಕರಿಯಾ ಅಬು ಮೊಅಮ್ಮರ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಹೇಳಿದೆ.

ಜವಾದ್ ಅಬು ಶಮಲಾ ಅವರು ಹಮಾಸ್‌ಗೆ ನಿಧಿಯನ್ನು ನೀಡುತ್ತಿದ್ದರು ಮತ್ತು ಗಾಜಾ ಪಟ್ಟಿಯ ಒಳಗೆ ಮತ್ತು ಹೊರಗೆ ಇಸ್ರೇಲ್ ವಿರುದ್ಧದ ಕೃತ್ಯಕ್ಕೆ ಹಣಕಾಸು ನೀಡುತ್ತಿದ್ದರು ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.

ಹತ್ಯೆಯಾದ ಜಕರಿಯಾ ಅಬು ಮೊಅಮ್ಮರ್, ಹಮಾಸ್‌ ಸಶಸ್ತ್ರ ಗುಂಪಿನ ಆಂತರಿಕ ವ್ಯವಹಾರಗಳ ಮುಖ್ಯಸ್ಥನಾಗಿದ್ದರು. ಹಿರಿಯ ಹಮಾಸ್ ನಾಯಕರು ಮತ್ತು ಗಾಜಾ ಪಟ್ಟಿಯಲ್ಲಿರುವ ಸಶಸ್ತ್ರ ಗುಂಪಿನ ನಡುವೆ ಸಂಯೋಜಕರಾಗಿದ್ದರು ಎಂದು IDF ಹೇಳಿದೆ.

ಆದರೆ ಈ ಇಬ್ಬರು ಹಮಾಸ್‌ನ ನಾಯಕರ ಹತ್ಯೆಯ ಬಗ್ಗೆ ಹಮಾಸ್‌ ಸಶಸ್ತ್ರ ಗುಂಪು ಯಾವುದೇ ಹೇಳಿಕೆಯನ್ನು ನೀಡಿಲ್ಲ.

ಇಸ್ರೇಲ್ ವಿರುದ್ಧ ಹಮಾಸ್‌ ಸಶಸ್ತ್ರ ಗುಂಪು ಶನಿವಾರ 5000ಕ್ಕೂ ಅಧಿಕ ರಾಕೆಟ್‌ ದಾಳಿಯನ್ನು ನಡೆಸಿದ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿತ್ತು. ಆ ಬಳಿಕ ಎರಡು ದೇಶಗಳಲ್ಲಿ ಅಪಾರ ಸಾವು-ನೋವುಗಳು ಸಂಭವಿಸಿದೆ. ಇತ್ತೀಚಿನ ವರದಿ ಪ್ರಕಾರ ಇಸ್ರೇಲ್‌- ಪ್ಯಾಲೆಸ್ತೀನ್‌ ಕದನದಲ್ಲಿ ಮೃತರ ಸಂಖ್ಯೆ 1900ಕ್ಕೆ ಏರಿಕೆಯಾಗಿದೆ.

ಆದರೆ ಸುಮಾರು 1500 ಹಮಾಸ್‌ ಹೋರಾಟಗಾರರ ಮೃತದೇಹಗಳು ಇಸ್ರೇಲ್‌ನಲ್ಲಿ ಗಾಝಾ ಪಟ್ಟಿಯ ಸುತ್ತಲಿನ ಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ಇಸ್ರೇಲ್‌ ಸೇನೆ ನಿನ್ನೆ ಹೇಳಿತ್ತು. ಇದಲ್ಲದೆ ಗಾಝಾ ಜೊತೆಗಿನ ಗಡಿ ಪ್ರದೇಶದಲ್ಲಿ ಇಸ್ರೇಲ್‌ ಬಹುಪಾಲು ನಿಯಂತ್ರಣ ಮರುಸ್ಥಾಪಿಸಿದೆ ಎಂದು ಇಸ್ರೇಲ್‌ನ ಮಿಲಿಟರಿ ವಕ್ತಾರ ರಿಚರ್ಡ್‌ ಹೆಚ್ಟ್‌ ಹೇಳಿದ್ದರು.

ಹಮಾಸ್ ಇಸ್ರೇಲ್ ಮೇಲೆ ಸರಣಿ ರಾಕೆಟ್‌ ದಾಳಿಯನ್ನು ಭೂ, ವಾಯು, ನೌಕಾ ಮಾರ್ಗದಲ್ಲಿ ನಡೆಸಿತ್ತು. ಇಸ್ರೇಲ್‌ನ ವಿವಿಧ ಪ್ರಾಂತ್ಯಗಳಲ್ಲಿ ನುಗ್ಗಿ ಜನರನ್ನು ಒತ್ತೆಯಾಳಾಗಿಟ್ಟಿತ್ತು.

ಇದನ್ನು ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಲ್ಲಿ ಮೃತರ ಸಂಖ್ಯೆ ಗಣನೀಯ ಹೆಚ್ಚಳ: ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...