Homeಮುಖಪುಟದೇವರ ವಿಗ್ರಹ ಕಳ್ಳಸಾಗಾಣೆ: ಬಿಜೆಪಿ ನಾಯಕ ಸೇರಿದಂತೆ 4 ಜನರ ಬಂಧನ

ದೇವರ ವಿಗ್ರಹ ಕಳ್ಳಸಾಗಾಣೆ: ಬಿಜೆಪಿ ನಾಯಕ ಸೇರಿದಂತೆ 4 ಜನರ ಬಂಧನ

- Advertisement -
- Advertisement -

ವಿಗ್ರಹಗಳ ಕಳ್ಳಸಾಗಣೆ ಆರೋಪದ ಮೇಲೆ ‘ವಿಗ್ರಹ ವಿಭಾಗ’ದ ಪೊಲೀಸರು ಬಿಜೆಪಿ ಪದಾಧಿಕಾರಿ ಮತ್ತು ಇಬ್ಬರು ಪೊಲೀಸರು ಸೇರಿದಂತೆ ಒಟ್ಟು ನಾಲ್ವರನ್ನು ಬುಧವಾರದಂದು ತಮಿಳುನಾಡಿನ ರಾಮನಾಥಪುರದಲ್ಲಿ ಬಂಧಿಸಿ ಏಳು ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ತಂಡವು ಕೆಲವು ಶಂಕಿತರನ್ನು ಬಂಧಿಸಿದ್ದು, ಗ್ಯಾಂಗ್ ವಿಗ್ರಹಗಳನ್ನು ಕಳ್ಳಸಾಗಣೆ ಮಾಡಲು ಯೋಜಿಸಿತ್ತು ಎಂದು ಕಂಡುಹಿಡಿದಿದೆ. ಈ ಗ್ಯಾಂಗ್‌ ಕೋಟ್ಯಾಂತರ ರೂಪಾಯಿ ಮೌಲ್ಯದ “ಡೀಲ್” ಅನ್ನು ನಿಗದಿಪಡಿಸಿ ರಾಮನಾಥಪುರದಿಂದ ವಿಗ್ರಹಗಳನ್ನು ರವಾನಿಸಲು ಹೊರಟಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಬಿಜೆಪಿ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿಯಾಗಿರುವ ಮುದುಕಲತ್ತೂರಿನ ಅಲೆಕ್ಸಾಂಡರ್ (52) ಅವರಿಗೆ ವಿಗ್ರಹಗಳ ಮಾರಾಟದ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಂಕಿತರ ತಪ್ಪೊಪ್ಪಿಗೆಯ ಆಧಾರದ ಮೇಲೆ ಪೊಲೀಸರು ವಿರುದುನಗರ ಜಿಲ್ಲೆಯ ಅರುಪ್ಪುಕೊಟ್ಟೈನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆಯಲ್ಲಿರುವ ಇಲಂಕುಮಾರನ್ (44) ಮತ್ತು ಆತನ ಸಹಚರ ವಿರುದುನಗರದ ಕರುಪ್ಪಸಾಮಿ (35) ನನ್ನು ಬಂಧಿಸಿದ್ದಾರೆ.

ದಿಂಡಿಗಲ್‌ನ ಸಶಸ್ತ್ರ ಮೀಸಲು ಪೊಲೀಸ್‌ನ ಇಳಂಕುಮಾರ್‌ ಮತ್ತು ನಾಗ ನರೇಂದ್ರನ್‌ ಹಾಗೂ ವಿರುದುನಗರ ಜಿಲ್ಲೆಯ ತಿರುತಂಗಲ್‌ನ ಗಣೇಶನ್ ಅವರಿಗೆ ಸೇಲಂ ಜಿಲ್ಲೆಯ ಎಡಪ್ಪಾಡಿಯಲ್ಲಿ ಏಳು ವಿಗ್ರಹಗಳು ಗ್ಯಾಂಗ್‌ ವಶದಲ್ಲಿದ್ದವು ಎಂದು ತಿಳಿದು ಬಂದಿತ್ತು.

ಇದನ್ನೂ ಓದಿ: ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ತಾವು ವಿಗ್ರಹ ವಿಭಾಗದ ಪೋಲೀಸರೆಂದು ಬಿಂಬಿಸಿಕೊಂಡ ಇಲಂಕುಮಾರನ್ ಮತ್ತು ಇತರರು ಎಡಪ್ಪಾಡಿಗೆ ಹೋಗಿ ವಿಗ್ರಹಗಳನ್ನು ತೆಗೆದುಕೊಂಡು ಹೋಗಿ ಬಿಜೆಪಿ ನಾಯಕ ಅಲೆಕ್ಸಾಂಡರ್ ಅವರಿಗೆ ಹಸ್ತಾಂತರಿಸಿದ್ದರು. ಅವರು ಈ ವಿಗ್ರಹಗಳನ್ನು ಖರೀದಿಸುವವರನ್ನು ಪತ್ತೆಹಚ್ಚಿ, ಇದರ ಬೆಲೆ ₹ 5 ಕೋಟಿ ಎಂದು ನಿಗದಿಪಡಿಸಿದ್ದರು. ಈ ಗ್ಯಾಂಗ್ ಒಪ್ಪಂದ ಮಾಡಿಕೊಳ್ಳಲು ಮುಂದಾದಾಗ, ಪೊಲೀಸರು ಅದನ್ನು ಭೇದಿಸಿದ್ದಾರೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಲೆಕ್ಸಾಂಡರ್, ಇಲಂಕುಮಾರನ್, ನಾಗ ನರೇಂದ್ರನ್ ಮತ್ತು ಕರುಪ್ಪಸಾಮಿ ಅವರನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವಿಗ್ರಹಗಳು ಕಳ್ಳತನವಾಗಿರುವ ದೇವಾಲಯಗಳನ್ನು ಗುರುತಿಸಲು ತಜ್ಞರ ಸಹಾಯವನ್ನು ಪಡೆಯಲು ಯೋಜಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...