Homeಮುಖಪುಟಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ - ರಾಮನಗರ ಎಸ್‌ಪಿ

ಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ – ರಾಮನಗರ ಎಸ್‌ಪಿ

- Advertisement -
- Advertisement -

ಇದ್ರೀಸ್‌ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕುಕ ತಂಡಗಳನ್ನು ರಚಿಸಿದ್ದೇವೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ಸಾತನೂರು ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದರು. ಆನಂತರ ಡ್ರೈವರ್ ಸಯ್ಯದ್ ಜಮೀರ್ ತಮನ್ನು ಅಡ್ಡಗಟ್ಟಿ ಹಿಂಸೆ ನೀಡಿದ್ದಾರೆ ಎಂದು ದೂರು ನೀಡಿದ್ದರು. ಶನಿವಾರ ಕೊಲೆಯಾದ ಇದ್ರೀಸ್ ಸಹೋದರ ಯೂನುಸ್‌ ಪಾಷ ದೂರು ನೀಡಿದ್ದಾರೆ. ಮೂರು ದೂರನ್ನು ಆಧರಿಸಿ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

“ಇದ್ರೀಸ್‌ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ, ಎಫ್‌ಎಸ್‌ಎಲ್ ವರದಿ ಬಂದ ಬಳಿಕವಷ್ಟೇ ಗೊತ್ತಾಗುತ್ತದೆ. ಪ್ರಕರಣದ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಯಾವುದೇ ರಾಜಕೀಯ ಒತ್ತಡವಿಲ್ಲ. ಕನಕಪುರದ ವೈದ್ಯರ ತಂಡವು ಇದ್ರೀಸ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ಎಸ್‌ಎಲ್‌ ವರದಿಯನ್ನೂ ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಫೇಸ್‌ಬುಕ್‌ ಲೈವ್ ಬಂದಿದ್ದಾನೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಫೇಸ್‌ಬುಕ್‌ನಲ್ಲಿ ಬಂದಿರಬಹುದು. ಆದರೆ ಈಗ ತಲೆ ಮರೆಸಿಕೊಂಡಿದ್ದಾರೆ. ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ಇನ್ನೂ ಪತ್ತೆಯಾಗಿಲ್ಲ. ಆತನಿಗಾಗಿ ಶೋಧಕಾರ್ಯ ನಡೆಸಿದ್ದೇವೆ” ಎಂದಿದ್ದಾರೆ.

ಇನ್ನೊಂದೆಡೆ ನಾನು ತಲೆ ಮರೆಸಿಕೊಂಡಿಲ್ಲ. ಮಾಹಿತಿ ಬಂದರೆ ನಾನೇ ಖುದ್ದು ಪೊಲೀಸರ ಮುಂದೆ ಹಾಜರಾಗುತ್ತೇನೆ ಎಂದು ಪುನೀತ್ ಕೆರೆಹಳ್ಳಿ ವಿಡಿಯೋ ಒಂದರಲ್ಲಿ ಹೇಳಿದ್ದಾನೆ.

ಫೇಸ್‌ಬುಕ್‌ನಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿರುವ ಪುನೀತ್‌ ಕೆರೆಹಳ್ಳಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾನೆ. “ಇದ್ರೀಸ್‌ ಪಾಷ ಸಾವಿನ ವಿಚಾರದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ನನಗೆ ನ್ಯಾಯ ಬೇಕು. ನಾನು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ” ಎಂದು ಹೇಳಿದ್ದಾನೆ.

“ನಾನು ಕೆಲವು ದಿನಗಳಿಂದ ದೇವಸ್ಥಾನಗಳಿಗೆ ಭೇಟಿ ನಿಡುತ್ತಿದ್ದೆ. ಆ ಕಾರಣದಿಂದ ನನ್ನ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ಈಗ ಮೊಬೈಲ್‌ ಆನ್‌ ಮಾಡಿದ ಬಳಿಕ ರಾಜಕೀಯ ಮುಖಂಡರು ನೀಡಿರುವ ಹೇಳಿಕೆಗಳು, ಅನೇಕರೂ ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಗಮನಿಸಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ. ನಾನು ತಲೆ ಮರೆಸಿಕೊಂಡಿಲ್ಲ” ಎಂದು ಹೇಳಿದ್ದಾನೆ.

“ಶುಕ್ರವಾರ ಮಧ್ಯರಾತ್ರಿ 11.59 ರಿಂದ ನಾನು ಘಟನೆಯನ್ನು ಫೇಸ್‌ಬುಕ್‌ ಲೈವ್‌ ಮಾಡಿದ್ದೇನೆ. ಶನಿವಾರ ಬೆಳಗ್ಗೆ 5ಕ್ಕೆ ಮಠಕ್ಕೆ ಹಸುಗಳನ್ನು ಬಿಡುವವರೆಗೂ ನಾನು ಪೊಲೀಸರ ಜೊತೆಯಲ್ಲೇ ಇದ್ದೆ. ನಾವು ಯಾರನ್ನೂ ಹತ್ಯೆ ಮಾಡಿಲ್ಲ. ಮರಣೋತ್ತರ ಪರೀಕ್ಷೆ ವರದಿಯೇ ಇದಕ್ಕೆ ಉತ್ತರ ನೀಡಲಿದೆ” ಎಂದು ಸಮರ್ಥಿಸಿಕೊಂಡಿದ್ದಾನೆ.

“ನಾನು ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ” ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ; ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...