Homeಮುಖಪುಟಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ - ರಾಮನಗರ ಎಸ್‌ಪಿ

ಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ – ರಾಮನಗರ ಎಸ್‌ಪಿ

- Advertisement -
- Advertisement -

ಇದ್ರೀಸ್‌ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕುಕ ತಂಡಗಳನ್ನು ರಚಿಸಿದ್ದೇವೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ಸಾತನೂರು ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದರು. ಆನಂತರ ಡ್ರೈವರ್ ಸಯ್ಯದ್ ಜಮೀರ್ ತಮನ್ನು ಅಡ್ಡಗಟ್ಟಿ ಹಿಂಸೆ ನೀಡಿದ್ದಾರೆ ಎಂದು ದೂರು ನೀಡಿದ್ದರು. ಶನಿವಾರ ಕೊಲೆಯಾದ ಇದ್ರೀಸ್ ಸಹೋದರ ಯೂನುಸ್‌ ಪಾಷ ದೂರು ನೀಡಿದ್ದಾರೆ. ಮೂರು ದೂರನ್ನು ಆಧರಿಸಿ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

“ಇದ್ರೀಸ್‌ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ, ಎಫ್‌ಎಸ್‌ಎಲ್ ವರದಿ ಬಂದ ಬಳಿಕವಷ್ಟೇ ಗೊತ್ತಾಗುತ್ತದೆ. ಪ್ರಕರಣದ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಯಾವುದೇ ರಾಜಕೀಯ ಒತ್ತಡವಿಲ್ಲ. ಕನಕಪುರದ ವೈದ್ಯರ ತಂಡವು ಇದ್ರೀಸ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ಎಸ್‌ಎಲ್‌ ವರದಿಯನ್ನೂ ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಫೇಸ್‌ಬುಕ್‌ ಲೈವ್ ಬಂದಿದ್ದಾನೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಫೇಸ್‌ಬುಕ್‌ನಲ್ಲಿ ಬಂದಿರಬಹುದು. ಆದರೆ ಈಗ ತಲೆ ಮರೆಸಿಕೊಂಡಿದ್ದಾರೆ. ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ಇನ್ನೂ ಪತ್ತೆಯಾಗಿಲ್ಲ. ಆತನಿಗಾಗಿ ಶೋಧಕಾರ್ಯ ನಡೆಸಿದ್ದೇವೆ” ಎಂದಿದ್ದಾರೆ.

ಇನ್ನೊಂದೆಡೆ ನಾನು ತಲೆ ಮರೆಸಿಕೊಂಡಿಲ್ಲ. ಮಾಹಿತಿ ಬಂದರೆ ನಾನೇ ಖುದ್ದು ಪೊಲೀಸರ ಮುಂದೆ ಹಾಜರಾಗುತ್ತೇನೆ ಎಂದು ಪುನೀತ್ ಕೆರೆಹಳ್ಳಿ ವಿಡಿಯೋ ಒಂದರಲ್ಲಿ ಹೇಳಿದ್ದಾನೆ.

ಫೇಸ್‌ಬುಕ್‌ನಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿರುವ ಪುನೀತ್‌ ಕೆರೆಹಳ್ಳಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾನೆ. “ಇದ್ರೀಸ್‌ ಪಾಷ ಸಾವಿನ ವಿಚಾರದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ನನಗೆ ನ್ಯಾಯ ಬೇಕು. ನಾನು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ” ಎಂದು ಹೇಳಿದ್ದಾನೆ.

“ನಾನು ಕೆಲವು ದಿನಗಳಿಂದ ದೇವಸ್ಥಾನಗಳಿಗೆ ಭೇಟಿ ನಿಡುತ್ತಿದ್ದೆ. ಆ ಕಾರಣದಿಂದ ನನ್ನ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ಈಗ ಮೊಬೈಲ್‌ ಆನ್‌ ಮಾಡಿದ ಬಳಿಕ ರಾಜಕೀಯ ಮುಖಂಡರು ನೀಡಿರುವ ಹೇಳಿಕೆಗಳು, ಅನೇಕರೂ ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಗಮನಿಸಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ. ನಾನು ತಲೆ ಮರೆಸಿಕೊಂಡಿಲ್ಲ” ಎಂದು ಹೇಳಿದ್ದಾನೆ.

“ಶುಕ್ರವಾರ ಮಧ್ಯರಾತ್ರಿ 11.59 ರಿಂದ ನಾನು ಘಟನೆಯನ್ನು ಫೇಸ್‌ಬುಕ್‌ ಲೈವ್‌ ಮಾಡಿದ್ದೇನೆ. ಶನಿವಾರ ಬೆಳಗ್ಗೆ 5ಕ್ಕೆ ಮಠಕ್ಕೆ ಹಸುಗಳನ್ನು ಬಿಡುವವರೆಗೂ ನಾನು ಪೊಲೀಸರ ಜೊತೆಯಲ್ಲೇ ಇದ್ದೆ. ನಾವು ಯಾರನ್ನೂ ಹತ್ಯೆ ಮಾಡಿಲ್ಲ. ಮರಣೋತ್ತರ ಪರೀಕ್ಷೆ ವರದಿಯೇ ಇದಕ್ಕೆ ಉತ್ತರ ನೀಡಲಿದೆ” ಎಂದು ಸಮರ್ಥಿಸಿಕೊಂಡಿದ್ದಾನೆ.

“ನಾನು ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ” ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ; ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...