Homeಮುಖಪುಟಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ - ರಾಮನಗರ ಎಸ್‌ಪಿ

ಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ – ರಾಮನಗರ ಎಸ್‌ಪಿ

- Advertisement -
- Advertisement -

ಇದ್ರೀಸ್‌ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕುಕ ತಂಡಗಳನ್ನು ರಚಿಸಿದ್ದೇವೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ಸಾತನೂರು ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದರು. ಆನಂತರ ಡ್ರೈವರ್ ಸಯ್ಯದ್ ಜಮೀರ್ ತಮನ್ನು ಅಡ್ಡಗಟ್ಟಿ ಹಿಂಸೆ ನೀಡಿದ್ದಾರೆ ಎಂದು ದೂರು ನೀಡಿದ್ದರು. ಶನಿವಾರ ಕೊಲೆಯಾದ ಇದ್ರೀಸ್ ಸಹೋದರ ಯೂನುಸ್‌ ಪಾಷ ದೂರು ನೀಡಿದ್ದಾರೆ. ಮೂರು ದೂರನ್ನು ಆಧರಿಸಿ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

“ಇದ್ರೀಸ್‌ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ, ಎಫ್‌ಎಸ್‌ಎಲ್ ವರದಿ ಬಂದ ಬಳಿಕವಷ್ಟೇ ಗೊತ್ತಾಗುತ್ತದೆ. ಪ್ರಕರಣದ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಯಾವುದೇ ರಾಜಕೀಯ ಒತ್ತಡವಿಲ್ಲ. ಕನಕಪುರದ ವೈದ್ಯರ ತಂಡವು ಇದ್ರೀಸ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ಎಸ್‌ಎಲ್‌ ವರದಿಯನ್ನೂ ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಫೇಸ್‌ಬುಕ್‌ ಲೈವ್ ಬಂದಿದ್ದಾನೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಫೇಸ್‌ಬುಕ್‌ನಲ್ಲಿ ಬಂದಿರಬಹುದು. ಆದರೆ ಈಗ ತಲೆ ಮರೆಸಿಕೊಂಡಿದ್ದಾರೆ. ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ಇನ್ನೂ ಪತ್ತೆಯಾಗಿಲ್ಲ. ಆತನಿಗಾಗಿ ಶೋಧಕಾರ್ಯ ನಡೆಸಿದ್ದೇವೆ” ಎಂದಿದ್ದಾರೆ.

ಇನ್ನೊಂದೆಡೆ ನಾನು ತಲೆ ಮರೆಸಿಕೊಂಡಿಲ್ಲ. ಮಾಹಿತಿ ಬಂದರೆ ನಾನೇ ಖುದ್ದು ಪೊಲೀಸರ ಮುಂದೆ ಹಾಜರಾಗುತ್ತೇನೆ ಎಂದು ಪುನೀತ್ ಕೆರೆಹಳ್ಳಿ ವಿಡಿಯೋ ಒಂದರಲ್ಲಿ ಹೇಳಿದ್ದಾನೆ.

ಫೇಸ್‌ಬುಕ್‌ನಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿರುವ ಪುನೀತ್‌ ಕೆರೆಹಳ್ಳಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾನೆ. “ಇದ್ರೀಸ್‌ ಪಾಷ ಸಾವಿನ ವಿಚಾರದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ನನಗೆ ನ್ಯಾಯ ಬೇಕು. ನಾನು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ” ಎಂದು ಹೇಳಿದ್ದಾನೆ.

“ನಾನು ಕೆಲವು ದಿನಗಳಿಂದ ದೇವಸ್ಥಾನಗಳಿಗೆ ಭೇಟಿ ನಿಡುತ್ತಿದ್ದೆ. ಆ ಕಾರಣದಿಂದ ನನ್ನ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ಈಗ ಮೊಬೈಲ್‌ ಆನ್‌ ಮಾಡಿದ ಬಳಿಕ ರಾಜಕೀಯ ಮುಖಂಡರು ನೀಡಿರುವ ಹೇಳಿಕೆಗಳು, ಅನೇಕರೂ ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಗಮನಿಸಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ. ನಾನು ತಲೆ ಮರೆಸಿಕೊಂಡಿಲ್ಲ” ಎಂದು ಹೇಳಿದ್ದಾನೆ.

“ಶುಕ್ರವಾರ ಮಧ್ಯರಾತ್ರಿ 11.59 ರಿಂದ ನಾನು ಘಟನೆಯನ್ನು ಫೇಸ್‌ಬುಕ್‌ ಲೈವ್‌ ಮಾಡಿದ್ದೇನೆ. ಶನಿವಾರ ಬೆಳಗ್ಗೆ 5ಕ್ಕೆ ಮಠಕ್ಕೆ ಹಸುಗಳನ್ನು ಬಿಡುವವರೆಗೂ ನಾನು ಪೊಲೀಸರ ಜೊತೆಯಲ್ಲೇ ಇದ್ದೆ. ನಾವು ಯಾರನ್ನೂ ಹತ್ಯೆ ಮಾಡಿಲ್ಲ. ಮರಣೋತ್ತರ ಪರೀಕ್ಷೆ ವರದಿಯೇ ಇದಕ್ಕೆ ಉತ್ತರ ನೀಡಲಿದೆ” ಎಂದು ಸಮರ್ಥಿಸಿಕೊಂಡಿದ್ದಾನೆ.

“ನಾನು ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ” ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ; ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...