Homeಕರ್ನಾಟಕಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ಇದಕ್ಕೂ ಮುಂಚೆ ಇಂತದ್ದೇ ಕೃತ್ಯಗಳಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ತೊಡಗಿಸಿಕೊಂಡಿದ್ದರೂ ಸಹ ಅವರನ್ನು ಸೆದೆ ಬಡಿಯುವಲ್ಲಿ ಪೊಲೀಸರ ನಿಷ್ಕ್ರಿಯತೆ ಹಾಗೂ ವೈಫಲ್ಯತೆ ಸ್ಪಷ್ಟವಾಗಿ ಕಂಡುಬಂದಿದೆ.

- Advertisement -
- Advertisement -

ಟ್ರಕ್ ಚಾಲಕ ಇದ್ರೀಸ್ ಪಾಶ ಹತ್ಯೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ನಕಲಿ ಗೋರಕ್ಷಕರಿಗೆ ಎಚ್ಚರಿಕೆ ನೀಡಿ, ವಶಕ್ಕೆ ಪಡೆದಿದ್ದಲ್ಲಿ ಹತ್ಯೆಯನ್ನು ತಡೆಗಟ್ಟಬಹುದಿತ್ತು ಎಂದು ಸತ್ಯ ಶೋಧನಾ ವರದಿ ತಿಳಿಸಿದೆ.

ವಕೀಲ ಶಿವಮಾನಿತನ್, ಸಿದ್ಧಾರ್ಥ್ ಕೆ.ಜಿ, ಡಾ. ಸಿಲ್ವಿಯಾ ಕರ್ಪಗಂ, ಖಾಸಿಂ ಶೋಯೆಬ್ ಖುರೇಷಿ ಮತ್ತು ಅಖಿಲ ಭಾರತ ಜಮೈತುಲ್ ಖುರೇಷ್ (ಕರ್ನಾಟಕ) ಸದಸ್ಯರ ಸತ್ಯಶೋಧನಾ ತಂಡವು ಇದ್ರೀಸ್ ಪಾಶ ಹತ್ಯೆ ಪ್ರಕರಣದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳನ್ನು ಸಲ್ಲಿಸಿದ್ದಾರೆ.

ಹಣ ಸುಲಿಗೆ ಮಾಡುವ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ, ದಾಳಿ ನಡೆಸುವ ಉದ್ದೇಶದಿಂದ ಸಮಾಜ-ವಿರೋಧಿ ಗುಂಪುಗಳು ಬಹಿರಂಗವಾಗಿ ಕಾನೂನನ್ನು ಕೈಗೆತ್ತಿಕೊಂಡಿವೆ. ಪೊಲೀಸರ ಯಾವುದೇ ಭಯವಿಲ್ಲದೆ ಪೊಲೀಸ್ ಠಾಣೆಯ ಹತ್ತಿರವೇ ಮೂರು ಜನ ನಾಗರೀಕರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರು ತಕ್ಷಣವೇ ಈ ದಾಳಿಕೋರರನ್ನು ಬಂಧಿಸುವ ಬದಲು ಇನ್ನುಳಿದ ಸಂತ್ರಸ್ಥರನ್ನು ಹುಡುಕಲು ದಾಳಿಕೋರರನ್ನು ಬಿಟ್ಟಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂಧಿಯೊಬ್ಬರು ಸಂತ್ರಸ್ಥರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ಕಣ್ಣಾರೆ ಕಂಡ ನಂತರ ಹಾಗೂ ಪೊಲೀಸ್ ಠಾಣೆ ಹೊರಗೆ ಸ್ವತಃ ದಾಳಿಕೋರರೇ ಫೇಸ್‌ಬುಕ್ ಲೈವ್ ಮಾಡಿದರೂ ಸಹ ದಾಳಿಕೋರರನ್ನು ಬಂಧಿಸಿರುವುದಿಲ್ಲ. ಇದರಿಂದಾಗಿಯೇ ಇದ್ರೀಸ್ ಪಾಶರವರ ಹತ್ಯೆಯಾಗಿದೆ ಎಂದು ವರದಿ ಹೇಳಿದೆ.

ವಾಹನಗಳನ್ನು ಅಡ್ಡಗಟ್ಟಿ ನಿಲ್ಲಿಸಿ, ಪೊಲೀಸ್ ಠಾಣೆಯ ಹತ್ತಿರವೇ ಹಣ ಸುಲಿಗೆ ಮಾಡುವುದು ಹಾಗೂ ಪೊಲೀಸರು ಸಂತ್ರಸ್ಥರ ರಕ್ಷಣೆಗೆ ಕಾಳಜಿ ವಹಿಸದಿರುವುದು ಈ ಗೂಂಡಾಗಳು ಎಷ್ಟು ನಿರ್ಭೀತಿಯಿಂದ ಇದನ್ನೆಲ್ಲಾ ಮಾಡುತ್ತಿದ್ದಾರೆ ಎಂಬುದನ್ನು ಸೂಚಿಸುತ್ತದೆ. ತಕ್ಷಣವೇ ಪೊಲೀಸರು ಎಲ್ಲಾ ದಾಳಿಕೋರರನ್ನು ಬಂಧಿಸಿ, ಸಂತ್ರಸ್ಥರನ್ನು ಹುಡುಕಿದ್ದರೆ, ಇದ್ರಿಸ್ ಪಾಷಾ ಅವರ ಪ್ರಾಣವನ್ನು ಉಳಿಸುವುದು ಸಾಧ್ಯವಿತ್ತು. ಇದಕ್ಕೂ ಮುಂಚೆ ಇಂತದ್ದೇ ಕೃತ್ಯಗಳಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ತೊಡಗಿಸಿಕೊಂಡಿದ್ದರೂ ಸಹ ಅವರನ್ನು ಸೆದೆ ಬಡಿಯುವಲ್ಲಿ ಪೊಲೀಸರ ನಿಷ್ಕ್ರಿಯತೆ ಹಾಗೂ ವೈಫಲ್ಯತೆ ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿ ಹೇಳಿದೆ.

ಆರೋಪಿಯ ಮೇಲೆ ಹಣ ಸುಲಿಗೆ ಯತ್ನದಂತಹ ಆರೋಪಗಳಿದ್ದರೂ ಸಹ, ಮೂರನೇ ಎಫ್‌ಐಆರ್ (ಸಿಆರ್ 0054/2023) ನಲ್ಲಿ ಭಾರತೀಯ ದಂಡ ಸಂಹಿತೆಯ ಪ್ರಮುಖ ಸೆಕ್ಷನ್‌ಗಳನ್ನು ಸೇರಿಸಿರುವುದಿಲ್ಲ. ಬದುಕುಳಿದಿರುವ ಸಂತ್ರಸ್ಥರು ಪ್ರತ್ಯಕ್ಷ ಸಾಕ್ಷಿಗಳೂ ಸಹ ಆಗಿದ್ದು, ಅಪರಾಧ ಸ್ಥಳದ ಮಹಜರು ಸಂಧರ್ಭದಲ್ಲಿ ಅವರನ್ನು ಹಾಜರುಪಡಿಸಿಲ್ಲ. ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 164 ರ ಪ್ರಕಾರ ಪ್ರತ್ಯಕ್ಷದರ್ಶಿಗಳನ್ನು ಹೇಳಿಕೆ ನೀಡಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಿಲ್ಲ. ಮೃತರ ಕುಟುಂಬಕ್ಕೆ ಪೋಸ್ಟ್ ಮಾರ್ಟಂ ವರದಿಯ ಪ್ರತಿಯನ್ನು ನೀಡಿರುವುದಿಲ್ಲ. ಇವೆಲ್ಲರೂ ತನಿಖೆಯಲ್ಲಿ ಕಂಡುಬಂದ ಪೊಲೀಸ್ ವೈಫಲ್ಯವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳು

  • ಮೇಲಿನ ಅಂಶಗಳ ಆಧಾರದ ಮೇಲೆ ಈ ಕೃತ್ಯದಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯುವಂತೆ ಖಾತ್ರಿಪಡಿಸಿಕೊಳ್ಳಬೇಕು.
  • ಇದ್ರಿಸ್ ಪಾಷಾ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಬೇಕು.
  • ತಕ್ಷಣವೇ ಪೋಸ್ಟ್ ಮಾರ್ಟಂ ವರದಿಯ ಪ್ರತಿ ಒಂದನ್ನು ಮೃತರ ಕುಟುಂಬಕ್ಕೆ ನೀಡಬೇಕು.
  • ಕಾನೂನನ್ನು ಕೈಗೆತ್ತಿಕೊಳ್ಳುವ ಸಮಾಜ-ವಿರೋಧಿ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸುವಂತೆ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಬೇಕು.
  • ತಕ್ಷಣವೇ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು.
  • ಈ ಕೃತ್ಯದಲ್ಲಿ ಉಂಟಾಗಿರುವ ಪೊಲೀಸ್ ವೈಫಲ್ಯದ ಕುರಿತು ಇಲಾಖಾ ತನಿಖೆಯನ್ನು ಆದೇಶಿಸಬೇಕು

ಸರ್ಕಾರಕ್ಕೆ  ಶಿಫಾರಸ್ಸುಗಳು

  1. ಬೆದರಿಕೆ ಹಾಕುವಂತಹ ವಿಡಿಯೋಗಳು, ಅಥವಾ ಹಿಂಸಾತ್ಮಕ ಕ್ರಿಯೆಗಳನ್ನು ಹಾಗೂ ಕಿರುಕುಳವನ್ನು ಪ್ರಚೋದಿಸುವ ಅಂಶಗಳು ಬೆಳಕಿಗೆ ಬಂದ ಕೂಡಲೇ, ಪೊಲೀಸರು ಅದನ್ನು ಪರಿಗಣನೆಗೆ ತೆಗೆದುಕೊಂಡು ಅವುಗಳ ವಿರುದ್ಧ ಸುಮೊಟೋ ಎಫ್‌ಐಆರ್‌ಗಳನ್ನು ದಾಖಲಿಸಬೇಕು.

2. ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯಿದೆ, 2020 ಜನರ ಜೀವನೋಪಾಯಗಳನ್ನು ನಾಶಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಕಾಯಿದೆಯನ್ನು ತಕ್ಷಣವೇ ರದ್ದುಪಡಿಸಬೇಕು. ಈ ಕಾಯ್ದೆಯಡಿ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಿರಿ.

3. ಪರಿಹಾರಾತ್ಮಕ ಹಾಗೂ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಖಾತ್ರಿಪಡಿಸಿಕೊಳ್ಳಲು ಘನತೆವೆತ್ತ ಸರ್ವೋಚ್ಛ ನ್ಯಾಯಾಲಯವು ತೆಲ್ಸನ್ ಪೂನಾವಾಲ ವರ್ಸಸ್ ಯೂನಿಯನ್ ಆಫ್ ಇಂಡಿಯಾ (ಎಐಆರ್ 2018 ಎಸ್‌ಸಿ 3354) ಪ್ರಕರಣದಲ್ಲಿ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಜಿಲ್ಲೆಯಲ್ಲಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ನೋಡಲ್ ಅಧಿಕಾರಿಗಳನ್ನು ನೇಮಿಸುವುದು, ಯಾವುದೇ ತಡಮಾಡದೆ ಎಫ್‌ಐಆರ್‌ಗಳನ್ನು ದಾಖಲಿಸುವುದು, ಸಂತ್ರಸ್ಥರ ಕುಟುಂಬಸ್ಥರ ಮೇಲೆ ಆಗುವ ದೌರ್ಜನ್ಯವನ್ನು ತಡೆಗಟ್ಟುವುದು, ಪ್ರತಿ ದಿನದ ಆಧಾರದ ಮೇಲೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳು ಗುಂಪು ಹಿಂಸೆಯಂತಹ ಪ್ರಕರಣಗಳನ್ನು ಇತ್ಯರ್ಥಪಡಿಸುವ ಕುರಿತು ಖಾತ್ರಿಪಡಿಸಿಕೊಳ್ಳುವುದು, ಸಂತ್ರಸ್ಥ ಪರಿಹಾರ ಯೋಜನೆಯನ್ನು ಪರಿಚಯಿಸುವುದು, ಈ ಹಿಂಸೆಗಳನ್ನು ತಡೆಗಟ್ಟುವಲ್ಲಿ ವಿಫಲವಾಗುವ ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸುವುದು. ಇವಿಷ್ಟು ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನಗಳಾಗಿದ್ದು ಇವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವರದಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...