Homeಕರ್ನಾಟಕಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ಪುನೀತ್ ಕೆರೆಹಳ್ಳಿಯೊಂದಿಗೆ ಇದ್ದ ನಾಲ್ವರನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.

- Advertisement -
- Advertisement -

ಮಂಡ್ಯದ ವಾಹನ ಚಾಲಕ ಇದ್ರೀಸ್‌ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಇಷ್ಟು ದಿನ ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಅವನೊಂದಿಗೆ ಇದ್ದ ನಾಲ್ವರು ಸಹಚರರನ್ನು ಸಹ ಬಂಧಿಸಲಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿದೆ.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು  ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....