Homeಕರ್ನಾಟಕಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ಪುನೀತ್ ಕೆರೆಹಳ್ಳಿಯೊಂದಿಗೆ ಇದ್ದ ನಾಲ್ವರನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.

- Advertisement -
- Advertisement -

ಮಂಡ್ಯದ ವಾಹನ ಚಾಲಕ ಇದ್ರೀಸ್‌ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಇಷ್ಟು ದಿನ ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಅವನೊಂದಿಗೆ ಇದ್ದ ನಾಲ್ವರು ಸಹಚರರನ್ನು ಸಹ ಬಂಧಿಸಲಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿದೆ.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು  ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...