Homeಮುಖಪುಟ1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

- Advertisement -
- Advertisement -

2024 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಒಂದು ಕೋಟಿ ಮತಗಳನ್ನು ಪಡೆದರೆ ರಾಜ್ಯದ ಜನರಿಗೆ 70 ರೂ.ಗೆ ಮದ್ಯ ಸಿಗುತ್ತದೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಭರವಸೆ ನೀಡಿದ್ದಾರೆ.

ವಿಜಯವಾಡದಲ್ಲಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವೀರರಾಜು, “ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಚೆನ್ನಾಗಿರುವ ಮತ್ತು ಜನಪ್ರಿಯ ಬ್ರಾಂಡ್‌ಗಳು ಲಭ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

“ಸ್ಪೆಷಲ್‌ ಸ್ಟೇಟಸ್‌, ಗವರ್ನರ್ಸ್‌ ಮೆಡಲ್‌ ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಅವರು ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರು ಆದರೆ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿಗೆ ಒಂದು ಕೋಟಿ ಮತ ನೀಡಿ…ನಾವು ಕೇವಲ 70 ರೂ.ಗೆ ಮದ್ಯವನ್ನು ನೀಡುತ್ತೇವೆ. ಹೆಚ್ಚಿನ ಲಾಭ ಬಂದರೆ ದರವನ್ನು ಇನ್ನೂ ಇಳಿಸಿ ಕೇವಲ 50 ರೂ.ಗೆ ಮದ್ಯ ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಸರ್ಕಾರ ನಕಲಿ ಮದ್ಯ ಉತ್ಪಾದಿಸಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ರಾಜ್ಯ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಪ್ರತಿ ತಿಂಗಳು ಒಬ್ಬ ವ್ಯಕ್ತಿ ಮದ್ಯಕ್ಕೆ 12,000 ರೂ. ಖರ್ಚು ಮಾಡುತ್ತಿದ್ದಾನೆ. ಈ ಹಣವನ್ನು ಸರ್ಕಾರ ಪಡೆದು, ಕಲ್ಯಾಣ ಯೋಜನೆಗಳ ನೆಪದಲ್ಲಿ ಪಡೆದು ವಾಪಸು ನೀಡುತ್ತಿದೆ” ಎಂದಿದ್ದಾರೆ.

ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ‘ವಿಶೇಷ ಮಾರ್ಜಿನ್’ ಸೇರಿಸಿರುವುದರಿಂದ MRP ಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪಕ್ಷ ಗೆದ್ದರೆ 30 ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಗೆದ್ದು ಆಮೇಲೆ ಪೆಟ್ರೋಲ್ ಬೆಲೆಯನ್ನು 100 ರೂ ಗೆ ತಂದು ನಿಲ್ಲಿಸಿರುವ ಸರ್ಕಾರ ನಿಮ್ಮದು.
    1 ಕೋಟಿ ಮತ ನೀಡಿ ಕಡಿಮೆ ಬೆಲೆಗೆ ಕುಡಿಯುವ ವ್ಯವಸ್ಥೆ ನಮಗೆ ಬೇಡ. ಈಗಾಗಲೇ ದುಡಿದು ರಾಷ್ಟ್ರ ಕಟ್ಟುವ ನಮ್ಮ ಯುವ ಜನತೆ ಕುಡಿತದ ಅಮಲಿನಿಂದ ತಮ್ಮ ಬದುಕನ್ನೇ ಕಟ್ಟಲು ಆಗದೇ ಇರುವ ಸ್ಥಿತಿಯಲ್ಲಿ ಇದ್ದಾರೆ, ಮತ್ತೆ ಕಡಿಮೆ ಬೆಲೆಗೆ ಮದ್ಯ ನೀಡಿ ನಮ್ಮ ದೇಶವನ್ನು ಮತ್ತೊಂದು ಸೂಡಾನ್ ದೇಶವಾಗಿ ಪರಿವರ್ತಿಸುವ ಕೆಲಸ ಮಾಡಬೇಡಿ ! ಯಾಕೆಂದರೆ ಯುವ ಜನಾಂಗ ಆರ್ಥಿಕವಾಗಿ ದೇಶವನ್ನು ಬಲಿಷ್ಠ ಮಾಡಬೇಕೇ ಹೊರತು ತುತ್ತು ಅನ್ನಕ್ಕಾಗಿ ಪರಿತಾಪ ಪಡುವ ಯುವ ಜನಾಂಗದ ದೇಶವಾಗಬಾರದು.
    ನಿಮ್ಮಲ್ಲಿ ಕಿಂಚಿತ್ತೂ ದೇಶಭಕ್ತಿ, ಸ್ವಾಭಿಮಾನ, ಅದೂ ಬೇಡ ಮಾನ ಮರ್ಯಾದೆ ಇದ್ದರೆ ಇಡೀ ದೇಶದಲ್ಲಿ ಮಧ್ಯವನ್ನು ಬ್ಯಾನ್ ಮಾಡಿ. ಆಗ ಒಪ್ಪುತ್ತೇನೆ ನೀವು ಒಬ್ಬ ಅಪ್ಪನಿಗೆ ಹುಟ್ಟಿದ ಪಕ್ಷ ಮತ್ತು ಮಕ್ಕಳು ಎಂದು.
    ಕುಡಿದು ಕ್ಷಣಕಾಲ ಮೋಜು ಮಾಡುವುದನ್ನು ಹೇಳಿಕೊಡುವ ನಿಮ್ಮ ಸರ್ಕಾರಕ್ಕೆ ನನ್ನ ಧಿಕ್ಕಾರ ಧಿಕ್ಕಾರ 👎👎
    ಛೇ ಛೇ ನಾಚಿಕೆ ನಾಚಿಕೆ…………👎👎👎👎👎👎

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...