Homeಮುಖಪುಟ1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

- Advertisement -
- Advertisement -

2024 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಒಂದು ಕೋಟಿ ಮತಗಳನ್ನು ಪಡೆದರೆ ರಾಜ್ಯದ ಜನರಿಗೆ 70 ರೂ.ಗೆ ಮದ್ಯ ಸಿಗುತ್ತದೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಭರವಸೆ ನೀಡಿದ್ದಾರೆ.

ವಿಜಯವಾಡದಲ್ಲಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವೀರರಾಜು, “ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಚೆನ್ನಾಗಿರುವ ಮತ್ತು ಜನಪ್ರಿಯ ಬ್ರಾಂಡ್‌ಗಳು ಲಭ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

“ಸ್ಪೆಷಲ್‌ ಸ್ಟೇಟಸ್‌, ಗವರ್ನರ್ಸ್‌ ಮೆಡಲ್‌ ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಅವರು ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರು ಆದರೆ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿಗೆ ಒಂದು ಕೋಟಿ ಮತ ನೀಡಿ…ನಾವು ಕೇವಲ 70 ರೂ.ಗೆ ಮದ್ಯವನ್ನು ನೀಡುತ್ತೇವೆ. ಹೆಚ್ಚಿನ ಲಾಭ ಬಂದರೆ ದರವನ್ನು ಇನ್ನೂ ಇಳಿಸಿ ಕೇವಲ 50 ರೂ.ಗೆ ಮದ್ಯ ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಸರ್ಕಾರ ನಕಲಿ ಮದ್ಯ ಉತ್ಪಾದಿಸಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ರಾಜ್ಯ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಪ್ರತಿ ತಿಂಗಳು ಒಬ್ಬ ವ್ಯಕ್ತಿ ಮದ್ಯಕ್ಕೆ 12,000 ರೂ. ಖರ್ಚು ಮಾಡುತ್ತಿದ್ದಾನೆ. ಈ ಹಣವನ್ನು ಸರ್ಕಾರ ಪಡೆದು, ಕಲ್ಯಾಣ ಯೋಜನೆಗಳ ನೆಪದಲ್ಲಿ ಪಡೆದು ವಾಪಸು ನೀಡುತ್ತಿದೆ” ಎಂದಿದ್ದಾರೆ.

ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ‘ವಿಶೇಷ ಮಾರ್ಜಿನ್’ ಸೇರಿಸಿರುವುದರಿಂದ MRP ಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪಕ್ಷ ಗೆದ್ದರೆ 30 ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಗೆದ್ದು ಆಮೇಲೆ ಪೆಟ್ರೋಲ್ ಬೆಲೆಯನ್ನು 100 ರೂ ಗೆ ತಂದು ನಿಲ್ಲಿಸಿರುವ ಸರ್ಕಾರ ನಿಮ್ಮದು.
    1 ಕೋಟಿ ಮತ ನೀಡಿ ಕಡಿಮೆ ಬೆಲೆಗೆ ಕುಡಿಯುವ ವ್ಯವಸ್ಥೆ ನಮಗೆ ಬೇಡ. ಈಗಾಗಲೇ ದುಡಿದು ರಾಷ್ಟ್ರ ಕಟ್ಟುವ ನಮ್ಮ ಯುವ ಜನತೆ ಕುಡಿತದ ಅಮಲಿನಿಂದ ತಮ್ಮ ಬದುಕನ್ನೇ ಕಟ್ಟಲು ಆಗದೇ ಇರುವ ಸ್ಥಿತಿಯಲ್ಲಿ ಇದ್ದಾರೆ, ಮತ್ತೆ ಕಡಿಮೆ ಬೆಲೆಗೆ ಮದ್ಯ ನೀಡಿ ನಮ್ಮ ದೇಶವನ್ನು ಮತ್ತೊಂದು ಸೂಡಾನ್ ದೇಶವಾಗಿ ಪರಿವರ್ತಿಸುವ ಕೆಲಸ ಮಾಡಬೇಡಿ ! ಯಾಕೆಂದರೆ ಯುವ ಜನಾಂಗ ಆರ್ಥಿಕವಾಗಿ ದೇಶವನ್ನು ಬಲಿಷ್ಠ ಮಾಡಬೇಕೇ ಹೊರತು ತುತ್ತು ಅನ್ನಕ್ಕಾಗಿ ಪರಿತಾಪ ಪಡುವ ಯುವ ಜನಾಂಗದ ದೇಶವಾಗಬಾರದು.
    ನಿಮ್ಮಲ್ಲಿ ಕಿಂಚಿತ್ತೂ ದೇಶಭಕ್ತಿ, ಸ್ವಾಭಿಮಾನ, ಅದೂ ಬೇಡ ಮಾನ ಮರ್ಯಾದೆ ಇದ್ದರೆ ಇಡೀ ದೇಶದಲ್ಲಿ ಮಧ್ಯವನ್ನು ಬ್ಯಾನ್ ಮಾಡಿ. ಆಗ ಒಪ್ಪುತ್ತೇನೆ ನೀವು ಒಬ್ಬ ಅಪ್ಪನಿಗೆ ಹುಟ್ಟಿದ ಪಕ್ಷ ಮತ್ತು ಮಕ್ಕಳು ಎಂದು.
    ಕುಡಿದು ಕ್ಷಣಕಾಲ ಮೋಜು ಮಾಡುವುದನ್ನು ಹೇಳಿಕೊಡುವ ನಿಮ್ಮ ಸರ್ಕಾರಕ್ಕೆ ನನ್ನ ಧಿಕ್ಕಾರ ಧಿಕ್ಕಾರ 👎👎
    ಛೇ ಛೇ ನಾಚಿಕೆ ನಾಚಿಕೆ…………👎👎👎👎👎👎

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...