Homeಮುಖಪುಟ1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

- Advertisement -
- Advertisement -

2024 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಒಂದು ಕೋಟಿ ಮತಗಳನ್ನು ಪಡೆದರೆ ರಾಜ್ಯದ ಜನರಿಗೆ 70 ರೂ.ಗೆ ಮದ್ಯ ಸಿಗುತ್ತದೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಭರವಸೆ ನೀಡಿದ್ದಾರೆ.

ವಿಜಯವಾಡದಲ್ಲಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವೀರರಾಜು, “ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಚೆನ್ನಾಗಿರುವ ಮತ್ತು ಜನಪ್ರಿಯ ಬ್ರಾಂಡ್‌ಗಳು ಲಭ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

“ಸ್ಪೆಷಲ್‌ ಸ್ಟೇಟಸ್‌, ಗವರ್ನರ್ಸ್‌ ಮೆಡಲ್‌ ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಅವರು ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರು ಆದರೆ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿಗೆ ಒಂದು ಕೋಟಿ ಮತ ನೀಡಿ…ನಾವು ಕೇವಲ 70 ರೂ.ಗೆ ಮದ್ಯವನ್ನು ನೀಡುತ್ತೇವೆ. ಹೆಚ್ಚಿನ ಲಾಭ ಬಂದರೆ ದರವನ್ನು ಇನ್ನೂ ಇಳಿಸಿ ಕೇವಲ 50 ರೂ.ಗೆ ಮದ್ಯ ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಸರ್ಕಾರ ನಕಲಿ ಮದ್ಯ ಉತ್ಪಾದಿಸಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ರಾಜ್ಯ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಪ್ರತಿ ತಿಂಗಳು ಒಬ್ಬ ವ್ಯಕ್ತಿ ಮದ್ಯಕ್ಕೆ 12,000 ರೂ. ಖರ್ಚು ಮಾಡುತ್ತಿದ್ದಾನೆ. ಈ ಹಣವನ್ನು ಸರ್ಕಾರ ಪಡೆದು, ಕಲ್ಯಾಣ ಯೋಜನೆಗಳ ನೆಪದಲ್ಲಿ ಪಡೆದು ವಾಪಸು ನೀಡುತ್ತಿದೆ” ಎಂದಿದ್ದಾರೆ.

ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ‘ವಿಶೇಷ ಮಾರ್ಜಿನ್’ ಸೇರಿಸಿರುವುದರಿಂದ MRP ಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪಕ್ಷ ಗೆದ್ದರೆ 30 ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಗೆದ್ದು ಆಮೇಲೆ ಪೆಟ್ರೋಲ್ ಬೆಲೆಯನ್ನು 100 ರೂ ಗೆ ತಂದು ನಿಲ್ಲಿಸಿರುವ ಸರ್ಕಾರ ನಿಮ್ಮದು.
    1 ಕೋಟಿ ಮತ ನೀಡಿ ಕಡಿಮೆ ಬೆಲೆಗೆ ಕುಡಿಯುವ ವ್ಯವಸ್ಥೆ ನಮಗೆ ಬೇಡ. ಈಗಾಗಲೇ ದುಡಿದು ರಾಷ್ಟ್ರ ಕಟ್ಟುವ ನಮ್ಮ ಯುವ ಜನತೆ ಕುಡಿತದ ಅಮಲಿನಿಂದ ತಮ್ಮ ಬದುಕನ್ನೇ ಕಟ್ಟಲು ಆಗದೇ ಇರುವ ಸ್ಥಿತಿಯಲ್ಲಿ ಇದ್ದಾರೆ, ಮತ್ತೆ ಕಡಿಮೆ ಬೆಲೆಗೆ ಮದ್ಯ ನೀಡಿ ನಮ್ಮ ದೇಶವನ್ನು ಮತ್ತೊಂದು ಸೂಡಾನ್ ದೇಶವಾಗಿ ಪರಿವರ್ತಿಸುವ ಕೆಲಸ ಮಾಡಬೇಡಿ ! ಯಾಕೆಂದರೆ ಯುವ ಜನಾಂಗ ಆರ್ಥಿಕವಾಗಿ ದೇಶವನ್ನು ಬಲಿಷ್ಠ ಮಾಡಬೇಕೇ ಹೊರತು ತುತ್ತು ಅನ್ನಕ್ಕಾಗಿ ಪರಿತಾಪ ಪಡುವ ಯುವ ಜನಾಂಗದ ದೇಶವಾಗಬಾರದು.
    ನಿಮ್ಮಲ್ಲಿ ಕಿಂಚಿತ್ತೂ ದೇಶಭಕ್ತಿ, ಸ್ವಾಭಿಮಾನ, ಅದೂ ಬೇಡ ಮಾನ ಮರ್ಯಾದೆ ಇದ್ದರೆ ಇಡೀ ದೇಶದಲ್ಲಿ ಮಧ್ಯವನ್ನು ಬ್ಯಾನ್ ಮಾಡಿ. ಆಗ ಒಪ್ಪುತ್ತೇನೆ ನೀವು ಒಬ್ಬ ಅಪ್ಪನಿಗೆ ಹುಟ್ಟಿದ ಪಕ್ಷ ಮತ್ತು ಮಕ್ಕಳು ಎಂದು.
    ಕುಡಿದು ಕ್ಷಣಕಾಲ ಮೋಜು ಮಾಡುವುದನ್ನು ಹೇಳಿಕೊಡುವ ನಿಮ್ಮ ಸರ್ಕಾರಕ್ಕೆ ನನ್ನ ಧಿಕ್ಕಾರ ಧಿಕ್ಕಾರ 👎👎
    ಛೇ ಛೇ ನಾಚಿಕೆ ನಾಚಿಕೆ…………👎👎👎👎👎👎

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...