Homeಮುಖಪುಟ1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

- Advertisement -
- Advertisement -

2024 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಒಂದು ಕೋಟಿ ಮತಗಳನ್ನು ಪಡೆದರೆ ರಾಜ್ಯದ ಜನರಿಗೆ 70 ರೂ.ಗೆ ಮದ್ಯ ಸಿಗುತ್ತದೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಭರವಸೆ ನೀಡಿದ್ದಾರೆ.

ವಿಜಯವಾಡದಲ್ಲಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವೀರರಾಜು, “ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಚೆನ್ನಾಗಿರುವ ಮತ್ತು ಜನಪ್ರಿಯ ಬ್ರಾಂಡ್‌ಗಳು ಲಭ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

“ಸ್ಪೆಷಲ್‌ ಸ್ಟೇಟಸ್‌, ಗವರ್ನರ್ಸ್‌ ಮೆಡಲ್‌ ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಅವರು ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರು ಆದರೆ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿಗೆ ಒಂದು ಕೋಟಿ ಮತ ನೀಡಿ…ನಾವು ಕೇವಲ 70 ರೂ.ಗೆ ಮದ್ಯವನ್ನು ನೀಡುತ್ತೇವೆ. ಹೆಚ್ಚಿನ ಲಾಭ ಬಂದರೆ ದರವನ್ನು ಇನ್ನೂ ಇಳಿಸಿ ಕೇವಲ 50 ರೂ.ಗೆ ಮದ್ಯ ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಸರ್ಕಾರ ನಕಲಿ ಮದ್ಯ ಉತ್ಪಾದಿಸಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ರಾಜ್ಯ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಪ್ರತಿ ತಿಂಗಳು ಒಬ್ಬ ವ್ಯಕ್ತಿ ಮದ್ಯಕ್ಕೆ 12,000 ರೂ. ಖರ್ಚು ಮಾಡುತ್ತಿದ್ದಾನೆ. ಈ ಹಣವನ್ನು ಸರ್ಕಾರ ಪಡೆದು, ಕಲ್ಯಾಣ ಯೋಜನೆಗಳ ನೆಪದಲ್ಲಿ ಪಡೆದು ವಾಪಸು ನೀಡುತ್ತಿದೆ” ಎಂದಿದ್ದಾರೆ.

ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ‘ವಿಶೇಷ ಮಾರ್ಜಿನ್’ ಸೇರಿಸಿರುವುದರಿಂದ MRP ಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪಕ್ಷ ಗೆದ್ದರೆ 30 ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಗೆದ್ದು ಆಮೇಲೆ ಪೆಟ್ರೋಲ್ ಬೆಲೆಯನ್ನು 100 ರೂ ಗೆ ತಂದು ನಿಲ್ಲಿಸಿರುವ ಸರ್ಕಾರ ನಿಮ್ಮದು.
    1 ಕೋಟಿ ಮತ ನೀಡಿ ಕಡಿಮೆ ಬೆಲೆಗೆ ಕುಡಿಯುವ ವ್ಯವಸ್ಥೆ ನಮಗೆ ಬೇಡ. ಈಗಾಗಲೇ ದುಡಿದು ರಾಷ್ಟ್ರ ಕಟ್ಟುವ ನಮ್ಮ ಯುವ ಜನತೆ ಕುಡಿತದ ಅಮಲಿನಿಂದ ತಮ್ಮ ಬದುಕನ್ನೇ ಕಟ್ಟಲು ಆಗದೇ ಇರುವ ಸ್ಥಿತಿಯಲ್ಲಿ ಇದ್ದಾರೆ, ಮತ್ತೆ ಕಡಿಮೆ ಬೆಲೆಗೆ ಮದ್ಯ ನೀಡಿ ನಮ್ಮ ದೇಶವನ್ನು ಮತ್ತೊಂದು ಸೂಡಾನ್ ದೇಶವಾಗಿ ಪರಿವರ್ತಿಸುವ ಕೆಲಸ ಮಾಡಬೇಡಿ ! ಯಾಕೆಂದರೆ ಯುವ ಜನಾಂಗ ಆರ್ಥಿಕವಾಗಿ ದೇಶವನ್ನು ಬಲಿಷ್ಠ ಮಾಡಬೇಕೇ ಹೊರತು ತುತ್ತು ಅನ್ನಕ್ಕಾಗಿ ಪರಿತಾಪ ಪಡುವ ಯುವ ಜನಾಂಗದ ದೇಶವಾಗಬಾರದು.
    ನಿಮ್ಮಲ್ಲಿ ಕಿಂಚಿತ್ತೂ ದೇಶಭಕ್ತಿ, ಸ್ವಾಭಿಮಾನ, ಅದೂ ಬೇಡ ಮಾನ ಮರ್ಯಾದೆ ಇದ್ದರೆ ಇಡೀ ದೇಶದಲ್ಲಿ ಮಧ್ಯವನ್ನು ಬ್ಯಾನ್ ಮಾಡಿ. ಆಗ ಒಪ್ಪುತ್ತೇನೆ ನೀವು ಒಬ್ಬ ಅಪ್ಪನಿಗೆ ಹುಟ್ಟಿದ ಪಕ್ಷ ಮತ್ತು ಮಕ್ಕಳು ಎಂದು.
    ಕುಡಿದು ಕ್ಷಣಕಾಲ ಮೋಜು ಮಾಡುವುದನ್ನು ಹೇಳಿಕೊಡುವ ನಿಮ್ಮ ಸರ್ಕಾರಕ್ಕೆ ನನ್ನ ಧಿಕ್ಕಾರ ಧಿಕ್ಕಾರ 👎👎
    ಛೇ ಛೇ ನಾಚಿಕೆ ನಾಚಿಕೆ…………👎👎👎👎👎👎

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...