Homeಮುಖಪುಟ1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

- Advertisement -
- Advertisement -

2024 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಒಂದು ಕೋಟಿ ಮತಗಳನ್ನು ಪಡೆದರೆ ರಾಜ್ಯದ ಜನರಿಗೆ 70 ರೂ.ಗೆ ಮದ್ಯ ಸಿಗುತ್ತದೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಭರವಸೆ ನೀಡಿದ್ದಾರೆ.

ವಿಜಯವಾಡದಲ್ಲಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವೀರರಾಜು, “ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಚೆನ್ನಾಗಿರುವ ಮತ್ತು ಜನಪ್ರಿಯ ಬ್ರಾಂಡ್‌ಗಳು ಲಭ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

“ಸ್ಪೆಷಲ್‌ ಸ್ಟೇಟಸ್‌, ಗವರ್ನರ್ಸ್‌ ಮೆಡಲ್‌ ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಅವರು ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರು ಆದರೆ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿಗೆ ಒಂದು ಕೋಟಿ ಮತ ನೀಡಿ…ನಾವು ಕೇವಲ 70 ರೂ.ಗೆ ಮದ್ಯವನ್ನು ನೀಡುತ್ತೇವೆ. ಹೆಚ್ಚಿನ ಲಾಭ ಬಂದರೆ ದರವನ್ನು ಇನ್ನೂ ಇಳಿಸಿ ಕೇವಲ 50 ರೂ.ಗೆ ಮದ್ಯ ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಸರ್ಕಾರ ನಕಲಿ ಮದ್ಯ ಉತ್ಪಾದಿಸಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ರಾಜ್ಯ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಪ್ರತಿ ತಿಂಗಳು ಒಬ್ಬ ವ್ಯಕ್ತಿ ಮದ್ಯಕ್ಕೆ 12,000 ರೂ. ಖರ್ಚು ಮಾಡುತ್ತಿದ್ದಾನೆ. ಈ ಹಣವನ್ನು ಸರ್ಕಾರ ಪಡೆದು, ಕಲ್ಯಾಣ ಯೋಜನೆಗಳ ನೆಪದಲ್ಲಿ ಪಡೆದು ವಾಪಸು ನೀಡುತ್ತಿದೆ” ಎಂದಿದ್ದಾರೆ.

ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ‘ವಿಶೇಷ ಮಾರ್ಜಿನ್’ ಸೇರಿಸಿರುವುದರಿಂದ MRP ಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪಕ್ಷ ಗೆದ್ದರೆ 30 ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಗೆದ್ದು ಆಮೇಲೆ ಪೆಟ್ರೋಲ್ ಬೆಲೆಯನ್ನು 100 ರೂ ಗೆ ತಂದು ನಿಲ್ಲಿಸಿರುವ ಸರ್ಕಾರ ನಿಮ್ಮದು.
    1 ಕೋಟಿ ಮತ ನೀಡಿ ಕಡಿಮೆ ಬೆಲೆಗೆ ಕುಡಿಯುವ ವ್ಯವಸ್ಥೆ ನಮಗೆ ಬೇಡ. ಈಗಾಗಲೇ ದುಡಿದು ರಾಷ್ಟ್ರ ಕಟ್ಟುವ ನಮ್ಮ ಯುವ ಜನತೆ ಕುಡಿತದ ಅಮಲಿನಿಂದ ತಮ್ಮ ಬದುಕನ್ನೇ ಕಟ್ಟಲು ಆಗದೇ ಇರುವ ಸ್ಥಿತಿಯಲ್ಲಿ ಇದ್ದಾರೆ, ಮತ್ತೆ ಕಡಿಮೆ ಬೆಲೆಗೆ ಮದ್ಯ ನೀಡಿ ನಮ್ಮ ದೇಶವನ್ನು ಮತ್ತೊಂದು ಸೂಡಾನ್ ದೇಶವಾಗಿ ಪರಿವರ್ತಿಸುವ ಕೆಲಸ ಮಾಡಬೇಡಿ ! ಯಾಕೆಂದರೆ ಯುವ ಜನಾಂಗ ಆರ್ಥಿಕವಾಗಿ ದೇಶವನ್ನು ಬಲಿಷ್ಠ ಮಾಡಬೇಕೇ ಹೊರತು ತುತ್ತು ಅನ್ನಕ್ಕಾಗಿ ಪರಿತಾಪ ಪಡುವ ಯುವ ಜನಾಂಗದ ದೇಶವಾಗಬಾರದು.
    ನಿಮ್ಮಲ್ಲಿ ಕಿಂಚಿತ್ತೂ ದೇಶಭಕ್ತಿ, ಸ್ವಾಭಿಮಾನ, ಅದೂ ಬೇಡ ಮಾನ ಮರ್ಯಾದೆ ಇದ್ದರೆ ಇಡೀ ದೇಶದಲ್ಲಿ ಮಧ್ಯವನ್ನು ಬ್ಯಾನ್ ಮಾಡಿ. ಆಗ ಒಪ್ಪುತ್ತೇನೆ ನೀವು ಒಬ್ಬ ಅಪ್ಪನಿಗೆ ಹುಟ್ಟಿದ ಪಕ್ಷ ಮತ್ತು ಮಕ್ಕಳು ಎಂದು.
    ಕುಡಿದು ಕ್ಷಣಕಾಲ ಮೋಜು ಮಾಡುವುದನ್ನು ಹೇಳಿಕೊಡುವ ನಿಮ್ಮ ಸರ್ಕಾರಕ್ಕೆ ನನ್ನ ಧಿಕ್ಕಾರ ಧಿಕ್ಕಾರ 👎👎
    ಛೇ ಛೇ ನಾಚಿಕೆ ನಾಚಿಕೆ…………👎👎👎👎👎👎

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...