Homeರಾಷ್ಟ್ರೀಯ60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ...

60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಡುವೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಪ್ರಸ್ತಾಪಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಸಿಟಿಇಟಿ ಬರೆದಿರುವ ಯುವಕ ಇ-ರಿಕ್ಷಾ ಓಡಿಸುವ ವೀಡಿಯೊವನ್ನು ಟ್ವಿಟರ್‌ನಲ್ಲಿ ಸೋಮವಾರ ಹಂಚಿಕೊಂಡು ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಕೆಲಸದಲ್ಲಿ ಚಿಕ್ಕದು ಅಥವಾ ದೊಡ್ಡದು ಎಂಬುವುದಿಲ್ಲ. ಆದರೆ ಒಬ್ಬ ನುರಿತ ಮತ್ತು ವಿದ್ಯಾವಂತ ವ್ಯಕ್ತಿಗೆ ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ಸಿಗದಿದ್ದಾಗ ದುಃಖವಾಗುತ್ತದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶದಲ್ಲಿ 60 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿರುವಾಗ, ಸಿಟಿಇಟಿ ಪಾಸಾದ ಈ ಯುವಕ ಇ-ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾನೆ. ಇದು ನಮ್ಮ ಸಂಸತ್ತಿನ ಸಾಮೂಹಿಕ ವೈಫಲ್ಯವಾಗಿದೆ” ಎಂದು ಸಂಸದ ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಆರೆಸ್ಸೆಸ್ಸಿನಲ್ಲಿ ದಲಿತರ ಸ್ಥಾನ ಏನು ಎಂಬುವುದಕ್ಕೆ ಛಲವಾದಿ ನಾರಾಯಣ ಸ್ವಾಮಿ ಉತ್ತರ: ಸಿದ್ದರಾಮಯ್ಯ

ದೇಶದ ನಿರುದ್ಯೋಗ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿರುವ ವರುಣ್ ಗಾಂಧಿ ಅವರನ್ನು ಅಮನ್ ಖಾನ್ ಎಂಬವರು ಶ್ಲಾಘಿಸಿದ್ದು, ತಾನು ಆರ್‌ಆರ್‌ಬಿ- ಎನ್‌ಟಿಪಿಸಿ ಪರೀಕ್ಷೆಯ ಸಮಯದಲ್ಲಿ ವರುಣ್ ಗಾಂಧಿ ಮಾಡಿದ್ದ ಸಹಾಯಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.

“ನಮ್ಮ ಕುಟುಂಬ ಮತ್ತು ನಾನು ನಿಮಗೆ ಆಭಾರಿಯಾಗಿದ್ದೇವೆ. ನಮ್ಮಂತಹ ಯುವಜನರಿಗೆ ಮಾರ್ಗದರ್ಶನ ನೀಡಬಲ್ಲ ನಿಮ್ಮಂತಹ ನಾಯಕರ ಅಗತ್ಯ ದೇಶಕ್ಕಿದೆ” ಎಂದು ಅವರ ಟ್ವೀಟ್ ಮಾಡಿದ್ದಾರೆ.

ಝಾನ್ಸಿ ನಿವಾಸಿಯಾಗಿರುವ ಅಮನ್ ಖಾನ್‌ಗೆ ಅವರ ಮನೆಯಿಂದ 950 ಕಿಮೀ ದೂರದಲ್ಲಿರುವ ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಪರೀಕ್ಷಾ ಕೇಂದ್ರ ನೀಡಲಾಗಿತ್ತು. ಆದರೆ ಆರ್ಥಿಕ ಅಡಚಣೆಯಿಂದಾಗಿ ಅವರಿಗೆ ಅಷ್ಟು ದೂರ ಪ್ರಯಾಣಿಸುವುದು ಅಸಾಧ್ಯವಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಈ ವೇಳೆ ವರುಣ್ ಗಾಂಧಿ ಅವರು ರೈಲ್ವೆ ಸಚಿವರಿಗೆ ಪತ್ರ ಬರೆದು ದೂರದ ಪರೀಕ್ಷಾ ಕೇಂದ್ರಗಳಿಗೆ ತೆರಳುವವರಿಗೆ ಸಹಾಯ ಮಾಡಲು ರೈಲು ಟಿಕೆಟ್ ದರಗಳಲ್ಲಿ ರಿಯಾಯಿತಿ ಹಾಗೂ ಹೆಚ್ಚುವರಿ ಬೋಗಿಗಳ ಸೇರ್ಪಡೆಗೆ ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...