Homeಮುಖಪುಟಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್...

ಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಪ್ರತಿಕ್ರಿಯೆ

ಚುನಾವಣೆಯಲ್ಲಿ ಬಿಜೆಪಿ ಒಟ್ಟು ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ

- Advertisement -
- Advertisement -

ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಬುಧವಾರ ಮಧ್ಯಪ್ರದೇಶದ ಮುನ್ಸಿಪಲ್ ಚುನಾವಣೆಯ ಬಗ್ಗೆ ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದು, ಚುನಾವಣೆಯಲ್ಲಿ ಆಡಳಿತರೂಢ ಪಕ್ಷವು “ಪೊಲೀಸ್, ಆಡಳಿತ ಮತ್ತು ಹಣವನ್ನು ನಿರ್ಲಜ್ಜವಾಗಿ ಬಳಸಿದೆ” ಎಂದು ಆರೋಪಿಸಿದ್ದಾರೆ. “ಬಿಜೆಪಿ ಜನರನ್ನು ಖರೀದಿಸಲು ಪ್ರಯತ್ನಿಸಬಹುದು, ಆದರೆ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವು ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಗೆದ್ದಿದ್ದೇವೆ ಮತ್ತು ತಲಾ ಒಂದನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. ಇದರರ್ಥ ಬಿಜೆಪಿ ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ. ಇದನ್ನೂ ಅವರು ಆಚರಿಸುವುದಾದರೆ ನಮಗೆ ಏನೂ ಸಮಸ್ಯೆ ಇಲ್ಲ. ಇದು ಹೇಗಂದರೆ ಬೇರೊಬ್ಬರ ಮನೆಯಲ್ಲಿ ಮಗು ಜನಿಸಿದ್ದಕ್ಕೆ, ಬಿಜೆಪಿಯವರು ಸಿಹಿ ಹಂಚಲು ಪ್ರಾರಂಭಿಸಿದಂತೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

347 ನಗರ ಪಾಲಿಕೆಗಳಲ್ಲಿ 300 ಪಾಲಿಕೆಗಳನ್ನು ಪಕ್ಷವೂ ಗೆದ್ದಿದೆ ಎಂದು ಬಿಜೆಪಿ ಪ್ರತಿಪಾದಿಸಿದ್ದು, ‘ಈ ಸಾಧನೆಯು ಐತಿಹಾಸಿಕ’ ಎಂದು ಬಣ್ಣಿಸಿದೆ.

ಇದನ್ನೂ ಓದಿ: ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ರಾಜ್ಯದ ಒಟ್ಟು 16 ಮೇಯರ್ ಹುದ್ದೆಗಳ ಪೈಕಿ ಬಿಜೆಪಿ ಒಂಬತ್ತು, ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದು, ತಲಾ ಒಂದು ಸ್ಥಾನವನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. 2015ರಲ್ಲಿ ಬಿಜೆಪಿ ಎಲ್ಲಾ ಮೇಯರ್‌ ಹುದ್ದೆಗಳನ್ನು ಗೆದ್ದುಕೊಂಡಿತ್ತು.

ಅದರಲ್ಲೂ ಬಿಜೆಪಿ ಕಳೆದುಕೊಂಡಿರುವ ಮೇಯರ್ ಹುದ್ದೆಗಳಲ್ಲಿ ಒಂದು ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಭದ್ರಕೋಟೆಯಾದ ಮೊರೆನಾದಲ್ಲಿದ್ದರೆ, ಇನ್ನೊಂದು ಮಧ್ಯಪ್ರದೇಶದ ಬಿಜೆಪಿ ಅಧ್ಯಕ್ಷ, ಲೋಕಸಭಾ ಸಂಸದರಾದ ವಿಡಿ ಶರ್ಮಾ ಅವರ ಕಟ್ನಿಯದ್ದಾಗಿದೆ. ಮತ್ತೊಂದು ಬಿಜೆಪಿಯಿಂದ ಬಂಡಾಯ ಎದ್ದಿದ್ದ ಬಣ ಗೆದ್ದುಕೊಂಡಿದೆ. ಏತನ್ಮಧ್ಯೆ, ಕಾಂಗ್ರೆಸ್ ಶೂನ್ಯದಿಂದ ಐದಕ್ಕೆ ಏರಿದೆ ಮತ್ತು ಸಿಂಗ್ರೌಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಒಂದನ್ನು ಗೆದ್ದಿದೆ.

ರೇವಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಕಾಂಗ್ರೆಸ್‌ನ ಅಜಯ್ ಮಿಶ್ರಾ ಬಾಬಾ ಅವರು 10,301 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಬೋಧ್ ವ್ಯಾಸ್ ಅವರನ್ನು ಸೋಲಿಸಿದ್ದಾರೆ. 1999 ರ ನಂತರ ಕಾಂಗ್ರೆಸ್ ಮೊದಲ ಬಾರಿಗೆ ರೇವಾದಲ್ಲಿ ಮೇಯರ್ ಸ್ಥಾನವನ್ನು ಗೆದ್ದಿದೆ.

ಇದನ್ನೂ ಓದಿ: ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

ಮೊರೆನಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾರದ ಸೋಲಂಕಿ 14,631 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮೀನಾ ಮುಖೇಶ್ ಜಾತವ್ ಅವರನ್ನು ಸೋಲಿಸಿದ್ದಾರೆ. ಮೊರೆನಾ ಮುನ್ಸಿಪಲ್ ಕಾರ್ಪೊರೇಶನ್ ಮೊರೆನಾ ಲೋಕಸಭಾ ಸ್ಥಾನದ ಭಾಗವಾಗಿದೆ. ಇದನ್ನೂ ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿನಿಧಿಸುತ್ತಾರೆ.

ದೇವಾಸ್‌ನಲ್ಲಿ ಬಿಜೆಪಿಯ ಗೀತಾ ಅಗರವಾಲ್ ಅವರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿನೋದಿನಿ ವ್ಯಾಸ್ ಅವರನ್ನು 45,889 ಮತಗಳಿಂದ ಸೋಲಿಸಿದ್ದಾರೆ. ರತ್ಲಾಮ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ ಪ್ರಹ್ಲಾದ್ ಪಟೇಲ್ ಅವರು ಕಾಂಗ್ರೆಸ್‌ನ ಮಯಾಂಕ್ ಸಿಂಗ್ ಜಾಟ್ ಅವರನ್ನು 8,591 ಮತಗಳಿಂದ ಸೋಲಿಸಿದ್ದಾರೆ.

ಕಟ್ನಿ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಪ್ರೀತಿ ಸಂಜೀವ್ ಸೂರಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಜ್ಯೋತಿ ದೀಕ್ಷಿತ್ ಅವರನ್ನು 5,287 ಮತಗಳಿಂದ ಸೋಲಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೂಲ್ಕಿ-ಮೂಡಬಿದಿರೆ: ಬಿಜೆಪಿ ಪಾಲಾಗಿರುವ ಹಳೆಯ ಕಾಂಗ್ರೆಸ್ ಕೋಟೆ! ಅದಲುಬದಲು ಸಾಧ್ಯವೇ?

ಎರಡನೇ ಹಂತದಲ್ಲಿ ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳು, 40 ನಗರ ಪಾಲಿಕೆಗಳು ಮತ್ತು 43 ಜಿಲ್ಲೆಗಳ 169 ನಗರ ಸಭೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷವಷ್ಟೆ ಇದ್ದು, ಸ್ಥಳೀಯ ಸಂಸ್ಥೆ ಚುಣಾವಣೆಯು ಅದರಕ್ಕೆ ದಿಕ್ಸೂಚಿ ಎನ್ನಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...