Homeಮುಖಪುಟಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್...

ಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಪ್ರತಿಕ್ರಿಯೆ

ಚುನಾವಣೆಯಲ್ಲಿ ಬಿಜೆಪಿ ಒಟ್ಟು ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ

- Advertisement -
- Advertisement -

ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಬುಧವಾರ ಮಧ್ಯಪ್ರದೇಶದ ಮುನ್ಸಿಪಲ್ ಚುನಾವಣೆಯ ಬಗ್ಗೆ ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದು, ಚುನಾವಣೆಯಲ್ಲಿ ಆಡಳಿತರೂಢ ಪಕ್ಷವು “ಪೊಲೀಸ್, ಆಡಳಿತ ಮತ್ತು ಹಣವನ್ನು ನಿರ್ಲಜ್ಜವಾಗಿ ಬಳಸಿದೆ” ಎಂದು ಆರೋಪಿಸಿದ್ದಾರೆ. “ಬಿಜೆಪಿ ಜನರನ್ನು ಖರೀದಿಸಲು ಪ್ರಯತ್ನಿಸಬಹುದು, ಆದರೆ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವು ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಗೆದ್ದಿದ್ದೇವೆ ಮತ್ತು ತಲಾ ಒಂದನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. ಇದರರ್ಥ ಬಿಜೆಪಿ ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ. ಇದನ್ನೂ ಅವರು ಆಚರಿಸುವುದಾದರೆ ನಮಗೆ ಏನೂ ಸಮಸ್ಯೆ ಇಲ್ಲ. ಇದು ಹೇಗಂದರೆ ಬೇರೊಬ್ಬರ ಮನೆಯಲ್ಲಿ ಮಗು ಜನಿಸಿದ್ದಕ್ಕೆ, ಬಿಜೆಪಿಯವರು ಸಿಹಿ ಹಂಚಲು ಪ್ರಾರಂಭಿಸಿದಂತೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

347 ನಗರ ಪಾಲಿಕೆಗಳಲ್ಲಿ 300 ಪಾಲಿಕೆಗಳನ್ನು ಪಕ್ಷವೂ ಗೆದ್ದಿದೆ ಎಂದು ಬಿಜೆಪಿ ಪ್ರತಿಪಾದಿಸಿದ್ದು, ‘ಈ ಸಾಧನೆಯು ಐತಿಹಾಸಿಕ’ ಎಂದು ಬಣ್ಣಿಸಿದೆ.

ಇದನ್ನೂ ಓದಿ: ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ರಾಜ್ಯದ ಒಟ್ಟು 16 ಮೇಯರ್ ಹುದ್ದೆಗಳ ಪೈಕಿ ಬಿಜೆಪಿ ಒಂಬತ್ತು, ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದು, ತಲಾ ಒಂದು ಸ್ಥಾನವನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. 2015ರಲ್ಲಿ ಬಿಜೆಪಿ ಎಲ್ಲಾ ಮೇಯರ್‌ ಹುದ್ದೆಗಳನ್ನು ಗೆದ್ದುಕೊಂಡಿತ್ತು.

ಅದರಲ್ಲೂ ಬಿಜೆಪಿ ಕಳೆದುಕೊಂಡಿರುವ ಮೇಯರ್ ಹುದ್ದೆಗಳಲ್ಲಿ ಒಂದು ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಭದ್ರಕೋಟೆಯಾದ ಮೊರೆನಾದಲ್ಲಿದ್ದರೆ, ಇನ್ನೊಂದು ಮಧ್ಯಪ್ರದೇಶದ ಬಿಜೆಪಿ ಅಧ್ಯಕ್ಷ, ಲೋಕಸಭಾ ಸಂಸದರಾದ ವಿಡಿ ಶರ್ಮಾ ಅವರ ಕಟ್ನಿಯದ್ದಾಗಿದೆ. ಮತ್ತೊಂದು ಬಿಜೆಪಿಯಿಂದ ಬಂಡಾಯ ಎದ್ದಿದ್ದ ಬಣ ಗೆದ್ದುಕೊಂಡಿದೆ. ಏತನ್ಮಧ್ಯೆ, ಕಾಂಗ್ರೆಸ್ ಶೂನ್ಯದಿಂದ ಐದಕ್ಕೆ ಏರಿದೆ ಮತ್ತು ಸಿಂಗ್ರೌಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಒಂದನ್ನು ಗೆದ್ದಿದೆ.

ರೇವಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಕಾಂಗ್ರೆಸ್‌ನ ಅಜಯ್ ಮಿಶ್ರಾ ಬಾಬಾ ಅವರು 10,301 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಬೋಧ್ ವ್ಯಾಸ್ ಅವರನ್ನು ಸೋಲಿಸಿದ್ದಾರೆ. 1999 ರ ನಂತರ ಕಾಂಗ್ರೆಸ್ ಮೊದಲ ಬಾರಿಗೆ ರೇವಾದಲ್ಲಿ ಮೇಯರ್ ಸ್ಥಾನವನ್ನು ಗೆದ್ದಿದೆ.

ಇದನ್ನೂ ಓದಿ: ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

ಮೊರೆನಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾರದ ಸೋಲಂಕಿ 14,631 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮೀನಾ ಮುಖೇಶ್ ಜಾತವ್ ಅವರನ್ನು ಸೋಲಿಸಿದ್ದಾರೆ. ಮೊರೆನಾ ಮುನ್ಸಿಪಲ್ ಕಾರ್ಪೊರೇಶನ್ ಮೊರೆನಾ ಲೋಕಸಭಾ ಸ್ಥಾನದ ಭಾಗವಾಗಿದೆ. ಇದನ್ನೂ ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿನಿಧಿಸುತ್ತಾರೆ.

ದೇವಾಸ್‌ನಲ್ಲಿ ಬಿಜೆಪಿಯ ಗೀತಾ ಅಗರವಾಲ್ ಅವರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿನೋದಿನಿ ವ್ಯಾಸ್ ಅವರನ್ನು 45,889 ಮತಗಳಿಂದ ಸೋಲಿಸಿದ್ದಾರೆ. ರತ್ಲಾಮ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ ಪ್ರಹ್ಲಾದ್ ಪಟೇಲ್ ಅವರು ಕಾಂಗ್ರೆಸ್‌ನ ಮಯಾಂಕ್ ಸಿಂಗ್ ಜಾಟ್ ಅವರನ್ನು 8,591 ಮತಗಳಿಂದ ಸೋಲಿಸಿದ್ದಾರೆ.

ಕಟ್ನಿ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಪ್ರೀತಿ ಸಂಜೀವ್ ಸೂರಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಜ್ಯೋತಿ ದೀಕ್ಷಿತ್ ಅವರನ್ನು 5,287 ಮತಗಳಿಂದ ಸೋಲಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೂಲ್ಕಿ-ಮೂಡಬಿದಿರೆ: ಬಿಜೆಪಿ ಪಾಲಾಗಿರುವ ಹಳೆಯ ಕಾಂಗ್ರೆಸ್ ಕೋಟೆ! ಅದಲುಬದಲು ಸಾಧ್ಯವೇ?

ಎರಡನೇ ಹಂತದಲ್ಲಿ ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳು, 40 ನಗರ ಪಾಲಿಕೆಗಳು ಮತ್ತು 43 ಜಿಲ್ಲೆಗಳ 169 ನಗರ ಸಭೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷವಷ್ಟೆ ಇದ್ದು, ಸ್ಥಳೀಯ ಸಂಸ್ಥೆ ಚುಣಾವಣೆಯು ಅದರಕ್ಕೆ ದಿಕ್ಸೂಚಿ ಎನ್ನಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...