Homeಮುಖಪುಟಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್...

ಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಪ್ರತಿಕ್ರಿಯೆ

ಚುನಾವಣೆಯಲ್ಲಿ ಬಿಜೆಪಿ ಒಟ್ಟು ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ

- Advertisement -
- Advertisement -

ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಬುಧವಾರ ಮಧ್ಯಪ್ರದೇಶದ ಮುನ್ಸಿಪಲ್ ಚುನಾವಣೆಯ ಬಗ್ಗೆ ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದು, ಚುನಾವಣೆಯಲ್ಲಿ ಆಡಳಿತರೂಢ ಪಕ್ಷವು “ಪೊಲೀಸ್, ಆಡಳಿತ ಮತ್ತು ಹಣವನ್ನು ನಿರ್ಲಜ್ಜವಾಗಿ ಬಳಸಿದೆ” ಎಂದು ಆರೋಪಿಸಿದ್ದಾರೆ. “ಬಿಜೆಪಿ ಜನರನ್ನು ಖರೀದಿಸಲು ಪ್ರಯತ್ನಿಸಬಹುದು, ಆದರೆ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವು ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಗೆದ್ದಿದ್ದೇವೆ ಮತ್ತು ತಲಾ ಒಂದನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. ಇದರರ್ಥ ಬಿಜೆಪಿ ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ. ಇದನ್ನೂ ಅವರು ಆಚರಿಸುವುದಾದರೆ ನಮಗೆ ಏನೂ ಸಮಸ್ಯೆ ಇಲ್ಲ. ಇದು ಹೇಗಂದರೆ ಬೇರೊಬ್ಬರ ಮನೆಯಲ್ಲಿ ಮಗು ಜನಿಸಿದ್ದಕ್ಕೆ, ಬಿಜೆಪಿಯವರು ಸಿಹಿ ಹಂಚಲು ಪ್ರಾರಂಭಿಸಿದಂತೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

347 ನಗರ ಪಾಲಿಕೆಗಳಲ್ಲಿ 300 ಪಾಲಿಕೆಗಳನ್ನು ಪಕ್ಷವೂ ಗೆದ್ದಿದೆ ಎಂದು ಬಿಜೆಪಿ ಪ್ರತಿಪಾದಿಸಿದ್ದು, ‘ಈ ಸಾಧನೆಯು ಐತಿಹಾಸಿಕ’ ಎಂದು ಬಣ್ಣಿಸಿದೆ.

ಇದನ್ನೂ ಓದಿ: ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ರಾಜ್ಯದ ಒಟ್ಟು 16 ಮೇಯರ್ ಹುದ್ದೆಗಳ ಪೈಕಿ ಬಿಜೆಪಿ ಒಂಬತ್ತು, ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದು, ತಲಾ ಒಂದು ಸ್ಥಾನವನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. 2015ರಲ್ಲಿ ಬಿಜೆಪಿ ಎಲ್ಲಾ ಮೇಯರ್‌ ಹುದ್ದೆಗಳನ್ನು ಗೆದ್ದುಕೊಂಡಿತ್ತು.

ಅದರಲ್ಲೂ ಬಿಜೆಪಿ ಕಳೆದುಕೊಂಡಿರುವ ಮೇಯರ್ ಹುದ್ದೆಗಳಲ್ಲಿ ಒಂದು ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಭದ್ರಕೋಟೆಯಾದ ಮೊರೆನಾದಲ್ಲಿದ್ದರೆ, ಇನ್ನೊಂದು ಮಧ್ಯಪ್ರದೇಶದ ಬಿಜೆಪಿ ಅಧ್ಯಕ್ಷ, ಲೋಕಸಭಾ ಸಂಸದರಾದ ವಿಡಿ ಶರ್ಮಾ ಅವರ ಕಟ್ನಿಯದ್ದಾಗಿದೆ. ಮತ್ತೊಂದು ಬಿಜೆಪಿಯಿಂದ ಬಂಡಾಯ ಎದ್ದಿದ್ದ ಬಣ ಗೆದ್ದುಕೊಂಡಿದೆ. ಏತನ್ಮಧ್ಯೆ, ಕಾಂಗ್ರೆಸ್ ಶೂನ್ಯದಿಂದ ಐದಕ್ಕೆ ಏರಿದೆ ಮತ್ತು ಸಿಂಗ್ರೌಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಒಂದನ್ನು ಗೆದ್ದಿದೆ.

ರೇವಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಕಾಂಗ್ರೆಸ್‌ನ ಅಜಯ್ ಮಿಶ್ರಾ ಬಾಬಾ ಅವರು 10,301 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಬೋಧ್ ವ್ಯಾಸ್ ಅವರನ್ನು ಸೋಲಿಸಿದ್ದಾರೆ. 1999 ರ ನಂತರ ಕಾಂಗ್ರೆಸ್ ಮೊದಲ ಬಾರಿಗೆ ರೇವಾದಲ್ಲಿ ಮೇಯರ್ ಸ್ಥಾನವನ್ನು ಗೆದ್ದಿದೆ.

ಇದನ್ನೂ ಓದಿ: ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

ಮೊರೆನಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾರದ ಸೋಲಂಕಿ 14,631 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮೀನಾ ಮುಖೇಶ್ ಜಾತವ್ ಅವರನ್ನು ಸೋಲಿಸಿದ್ದಾರೆ. ಮೊರೆನಾ ಮುನ್ಸಿಪಲ್ ಕಾರ್ಪೊರೇಶನ್ ಮೊರೆನಾ ಲೋಕಸಭಾ ಸ್ಥಾನದ ಭಾಗವಾಗಿದೆ. ಇದನ್ನೂ ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿನಿಧಿಸುತ್ತಾರೆ.

ದೇವಾಸ್‌ನಲ್ಲಿ ಬಿಜೆಪಿಯ ಗೀತಾ ಅಗರವಾಲ್ ಅವರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿನೋದಿನಿ ವ್ಯಾಸ್ ಅವರನ್ನು 45,889 ಮತಗಳಿಂದ ಸೋಲಿಸಿದ್ದಾರೆ. ರತ್ಲಾಮ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ ಪ್ರಹ್ಲಾದ್ ಪಟೇಲ್ ಅವರು ಕಾಂಗ್ರೆಸ್‌ನ ಮಯಾಂಕ್ ಸಿಂಗ್ ಜಾಟ್ ಅವರನ್ನು 8,591 ಮತಗಳಿಂದ ಸೋಲಿಸಿದ್ದಾರೆ.

ಕಟ್ನಿ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಪ್ರೀತಿ ಸಂಜೀವ್ ಸೂರಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಜ್ಯೋತಿ ದೀಕ್ಷಿತ್ ಅವರನ್ನು 5,287 ಮತಗಳಿಂದ ಸೋಲಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೂಲ್ಕಿ-ಮೂಡಬಿದಿರೆ: ಬಿಜೆಪಿ ಪಾಲಾಗಿರುವ ಹಳೆಯ ಕಾಂಗ್ರೆಸ್ ಕೋಟೆ! ಅದಲುಬದಲು ಸಾಧ್ಯವೇ?

ಎರಡನೇ ಹಂತದಲ್ಲಿ ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳು, 40 ನಗರ ಪಾಲಿಕೆಗಳು ಮತ್ತು 43 ಜಿಲ್ಲೆಗಳ 169 ನಗರ ಸಭೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷವಷ್ಟೆ ಇದ್ದು, ಸ್ಥಳೀಯ ಸಂಸ್ಥೆ ಚುಣಾವಣೆಯು ಅದರಕ್ಕೆ ದಿಕ್ಸೂಚಿ ಎನ್ನಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...